ಬ್ರೇಕಿಂಗ್ ನ್ಯೂಸ್
07-07-23 02:52 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 7: 14ನೇ ಬಾರಿ ಕರ್ನಾಟಕ ರಾಜ್ಯ ಬಜೆಟ್ ಮಂಡಿಸಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದ ಮಟ್ಟಿಗೆ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಬರೆದಿದ್ದಾರೆ. ಈ ಬಾರಿಯ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿಗಳಿಗೆ ಹಣ ಹೊಂದಿಸುವ ಜೊತೆಯಲ್ಲೇ ಅಭಿವೃದ್ಧಿ ಕಾರ್ಯಗಳಿಗೂ ಭರಪೂರ ಅನುದಾನ ನೀಡುವ ಕೆಲಸ ಮಾಡಿದ್ದಾರೆ. ಮದ್ಯದ ತೆರಿಗೆ ಏರಿಕೆ ಮಾಡಿದ್ದು ತೆರಿಗೆ ಸಂಗ್ರಹ ಗುರಿಯನ್ನೂ ಹೆಚ್ಚಿಸಿದ್ದಾರೆ. ಬಜೆಟ್ ಹೈಲೈಟ್ಸ್ ಇಂತಿದೆ.


5 ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ರೂ. ಮೀಸಲು
ಅಬಕಾರಿ ತೆರಿಗೆ ಶೇ. 20ರಷ್ಟು ಹೆಚ್ಚಳ, ಬಿಯರ್ ಮೇಲಿನ ಅಬಕಾರಿ ಸುಂಕ ಶೇ. 10ರಷ್ಟು ಏರಿಕೆ
ಇಂದಿರಾ ಕ್ಯಾಂಟೀನ್ಗೆ 100 ಕೋಟಿ ರೂ. ಅನುದಾನ
ಬೆಂಗಳೂರಿಗೆ 45 ಸಾವಿರ ಕೋಟಿ ರೂ. ಅನುದಾನ - ಡಿಕೆಶಿ ಖಾತೆಗೆ ಬಂಪರ್!
ನಮ್ಮ ಮೆಟ್ರೋ ಹಾಗೂ ಉಪನಗರ ರೈಲು ಯೋಜನೆಗೆ 30 ಸಾವಿರ ಕೋಟಿ ರೂ. ಅನುದಾನ
ಬೆಂಗಳೂರಿನ ಬೈಯ್ಯಪ್ಪನ ಹಳ್ಳಿಯಲ್ಲಿ ಸರ್. ಎಂ. ವಿಶ್ವೇಶ್ವರಯ್ಯ ಬಳಿ ಟರ್ಮಿನಲ್ ಬಳಿ ಮೇಲ್ಸೇತುವೆ ನಿರ್ಮಾಣ
ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನಿರ್ಧಾರ
ಹಸು, ಎತ್ತು, ಎಮ್ಮೆ ಮೃತಪಟ್ಟರೆ 10 ಸಾವಿರ ರೂ. ಪರಿಹಾರ - 'ಅನುಗ್ರಹ ಯೋಜನೆ' ಮರು ಜಾರಿ
ರೈತ ಉತ್ಪನ್ನಗಳ ಏಕೀಕೃತ ಬ್ರಾಂಡಿಂಗ್ ವ್ಯವಸ್ಥೆಗೆ 10 ಕೋಟಿ ರೂ. ಮೀಸಲು
ಎಪಿಎಂಸಿ ಕಾಯ್ದೆ ವಾಪಸಾತಿಗೆ ರಾಜ್ಯ ಸರ್ಕಾರ ನಿರ್ಧಾರ
ರಾಮನಗರ, ಶಿಡ್ಲಘಟ್ಟದಲ್ಲಿ ರೇಷ್ಮೆ ಮಾರುಕಟ್ಟೆ ಸ್ಥಾಪನೆ: 75 ಕೋಟಿ ರೂ. ಅನುದಾನ
ಕಾಫಿ ಟೂರಿಸಂ, ವೀಳ್ಯದೆಲೆ, ಮೈಸೂರು ಮಲ್ಲಿಗೆಗೆ ಬ್ರಾಂಡಿಂಗ್
'ಕೃಷಿ ಭಾಗ್ಯ ಯೋಜನೆ'ಗೆ ನರೇಗಾ ಅಡಿಯಲ್ಲಿ 100 ಕೋಟಿ ರೂ.
ಮೀನುಗಾರ ಮಹಿಳೆಯರಿಗೆ ನೀಡುವ ಸಾಲದ ಮಿತಿ 50 ಸಾವಿರ ರೂ.ನಿಂದ 3 ಲಕ್ಷಕ್ಕೆ ಏರಿಕೆ
ಕೊಪ್ಪಳ, ಕಾರವಾರ, ಕೊಡಗು ಜಿಲ್ಲಾಸ್ಪತ್ರೆ ಉನ್ನತೀಕರಣ
ಕನಕಪುರ ತಾಲ್ಲೂಕಿನಲ್ಲಿ ಹೊಸ ವೈದ್ಯಕೀಯ ಕಾಲೇಜು
ಮೈಸೂರು, ಬೆಳಗಾವಿ, ಕಲಬುರಗಿ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
ಕಲಬುರಗಿಯಲ್ಲಿ ತಾಯಿ - ಮಗು ಆಸ್ಪತ್ರೆ ನಿರ್ಮಾಣ - 70 ಕೋಟಿ ರೂ. ವೆಚ್ಚ
ಹಿಂದಿನ ಸರ್ಕಾರದ ಪಠ್ಯ ಪರಿಷ್ಕರಣೆಗೆ ನಿರ್ಧಾರ: ಪರಿಷ್ಕರಣೆ ಮಾಡಿದ್ದ ಪಠ್ಯ ಕೈಬಿಡಲು ತೀರ್ಮಾನ
ಸರ್ಕಾರಿ, ಅನುದಾನಿತ ಶಾಲೆಗಳ 1 ರಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ವಾರಕ್ಕೆ 2 ಬಾರಿ ಮೊಟ್ಟೆ, ಶೇಂಗಾ ಚಿಕ್ಕಿ ಅಥವಾ ಬಾಳೆಹಣ್ಣು ವಿತರಣೆ
1 ಲಕ್ಷದ 62 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹ ಗುರಿ
ವಾಣಿಜ್ಯ ತೆರಿಗೆ ಇಲಾಖೆಗೆ 1,01,000 ಕೋಟಿ ರೂ. ತೆರಿಗೆ ಸಂಗ್ರಹ ಗುರಿ
ಸಹಕಾರಿ ಇಲಾಖೆಗೆ 36 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹ ಗುರಿ
ನೋಂದಣಿ ಹಾಗೂ ಮುದ್ರಾಂಕ ಇಲಾಖೆಗೆ 25 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹ ಗುರಿ
ಮಾರ್ಗಸೂಚಿ ದರ ಏರಿಕೆ ಆದರೆ ಮುದ್ರಾಂಕ & ನೋಂದಣಿ ಶುಲ್ಕ ಏರಿಕೆ ಆಗುವ ಸಾಧ್ಯತೆ
ನೋಂದಣಿ ಹಾಗೂ ಮುದ್ರಾಂಕ ಇಲಾಖೆಗೆ 2023-24ನೇ ಸಾಲಿನಲ್ಲಿ 25 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹ ಗುರಿ
ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆಗೆ ತಿದ್ದುಪಡಿ ತರಲು ತೀರ್ಮಾನ
ವಾಹನಗಳ ನೋಂದಣಿ ತೆರಿಗೆ ಪರಿಷ್ಕರಣೆ ಮಾಡಲು ತೀರ್ಮಾನ
ಹೊಸ ವಾಹನಗಳ ನೋಂದಣಿ ಶುಲ್ಕ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ
Chief Minister Siddaramaiah presents the State budget on July 7, which will be the first since Congress came to power in the State following the May 10 elections. This will be his record 14th Budget. All eyes are on the budget since there is much curiosity about how Mr. Siddaramaiah will make the allocations required to fulfil the five pre-poll guarantees of Congress. It is also expected to focus on increasing revenue generation which will be crucial to fund the promises.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm