ಬ್ರೇಕಿಂಗ್ ನ್ಯೂಸ್
07-07-23 03:25 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 7: ವಿಧಾನಸಭೆ ಅಧಿವೇಶನದಲ್ಲಿ ಶಾಸಕರ ನಡುವೆ ಜಟಾಪಟಿ ನಡೆಯುತ್ತಿದ್ದಾಗ ಸ್ಪೀಕರ್ ಯು.ಟಿ.ಖಾದರ್ ತುಳು ಭಾಷೆಯಲ್ಲಿ ಗದರಿದ ಪ್ರಸಂಗ ನಡೆಯಿತು. ಗುರುವಾರ ಸಂಜೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಸಚಿವ ಎಂ.ಬಿ.ಪಾಟೀಲ್ ನಡುವೆ ಮಾತಿನ ಚಕಮಕಿ ನಡೆಯುತ್ತಿದ್ದಾಗ ಸ್ಪೀಕರ್ ಕುಳಿತುಕೊಳ್ಳುವಂತೆ ಜೋರು ದನಿಯಲ್ಲಿ ಅಬ್ಬರಿಸಿದ್ದಾರೆ.
ಆದರೆ ಯತ್ನಾಳ್ ಮಾತು ಕೇಳದೇ ಇದ್ದಾಗ ಖಾದರ್ ಹೇಳಿ ಹೇಳಿ ಸಾಕಾಗಿ, ಕೊನೆಗೆ ಹತ್ತಿರದಲ್ಲೇ ಇದ್ದ ಸುನಿಲ್ ಕುಮಾರ್ ಬಳಿ ಖಾದರ್ 'ಆಯಗ್ ಒರ ಪನ್ಲೆಯಾ..' (ಅವರಿಗೊಂದು ಹೇಳಿಯಪ್ಪಾ..) ಎಂದು ಹೇಳಿದ್ದಾರೆ. ತುಳು ಭಾಷೆ ಅರ್ಥವಾಗದ ಯತ್ನಾಳ್ ಇದರಿಂದ ಸಿಡಿಮಿಡಿಗೊಂಡು, ಖಾದರ್ ಸಾಹೇಬ್ರ ಕನ್ನಡ ಅರ್ಥ ಮಾಡಿಸ್ಲಿಕ್ಕೆ ಒಂದು ಏಪ್ ಮಾಡಿಕೊಡಿ ಎಂದು ಕಿಚಾಯಿಸಿದ್ದಾರೆ. ಕನ್ನಡದ ಬಗ್ಗೆ ಚರ್ಚೆ ಹಿನ್ನೆಲೆಯಲ್ಲಿ ವಿಷಯ ಪ್ರಸ್ತಾಪ ಮಾಡಿದ ಸ್ಪೀಕರ್ ಖಾದರ್, ಯತ್ನಾಳ್ ಪದೇ ಪದೇ ನನ್ನ ಕನ್ನಡ ಭಾಷೆ ಸರಿಪಡಿಸುತ್ತಾರೆ. ನನ್ನ ಕನ್ನಡ ಹೆಚ್ಚು ಕಡಿಮೆ ಇರಬಹುದು. ಆದರೆ ಅದು ನಮ್ಮ ಪ್ರೀತಿಯ ಭಾಷೆ ಎಂದು ಹೇಳಿದರು.
ಈ ಬಗ್ಗೆ ಯತ್ನಾಳ್ ಪ್ರತಿಕ್ರಿಯಿಸಿ, ಸಮಸ್ಯೆ ಏನೆಂದರೆ ನಮ್ಮ ಕನ್ನಡ ಬೇರೆ ಹಾಗೂ ಮೈಸೂರು ಕನ್ನಡ ಬೇರೆ, ಹೈದರಾಬಾದ್ ಕನ್ನಡ ಮುಂಬೈ ಕನ್ನಡ ಬೇರೆ. ಮಂಗಳೂರು ಕನ್ನಡ ಸುಂದರ ಭಾಷೆ. ನಮಗೆ ನಿಮ್ಮ ಕನ್ನಡ ಭಾಷೆ ಅರ್ಥ ಆಗಬೇಕು. ಅದಕ್ಕೆ ಆಪ್ ಹಾಕಿಕೊಡಿ. ಅವಾಗ ನಮಗೆ ಅರ್ಥ ಆಗುತ್ತದೆ ಎಂದು ಕಾಲೆಳೆದರು. ಮೊಬೈಲ್ ನಲ್ಲಿ ಯುಎಸ್ ಇಂಗ್ಲಿಷ್, ಇಂಗ್ಲೆಂಡ್ ಇಂಗ್ಲಿಷ್ ಇದ್ದ ಹಾಗೆ ಅದೇ ರೀತಿಯಲ್ಲಿ ಲೋಕಸಭೆಯಲ್ಲಿ ಹಿಂದಿ ಟು ಕನ್ನಡ ಕನ್ನಡ ಟು ಹಿಂದಿ ಇದ್ದ ಹಾಗೆ ಸ್ಪೀಕರ್ ಟು ಕನ್ನಡ ಮಾಡಿ ಎಂದು ಕಾಲೆಳೆದರು.
Speaker #UTKhader slams Basangouda Patil #Yatnal in #Tulu, #video goes viral pic.twitter.com/2gIri7JoDW
— Headline Karnataka (@hknewsonline) July 7, 2023
Speaker UT Khader slams Basangouda Patil Yatnal in Tulu, video goes viral.
18-04-26 10:20 am
HK News Staffer
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am