ಬ್ರೇಕಿಂಗ್ ನ್ಯೂಸ್
07-07-23 03:25 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 7: ವಿಧಾನಸಭೆ ಅಧಿವೇಶನದಲ್ಲಿ ಶಾಸಕರ ನಡುವೆ ಜಟಾಪಟಿ ನಡೆಯುತ್ತಿದ್ದಾಗ ಸ್ಪೀಕರ್ ಯು.ಟಿ.ಖಾದರ್ ತುಳು ಭಾಷೆಯಲ್ಲಿ ಗದರಿದ ಪ್ರಸಂಗ ನಡೆಯಿತು. ಗುರುವಾರ ಸಂಜೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಸಚಿವ ಎಂ.ಬಿ.ಪಾಟೀಲ್ ನಡುವೆ ಮಾತಿನ ಚಕಮಕಿ ನಡೆಯುತ್ತಿದ್ದಾಗ ಸ್ಪೀಕರ್ ಕುಳಿತುಕೊಳ್ಳುವಂತೆ ಜೋರು ದನಿಯಲ್ಲಿ ಅಬ್ಬರಿಸಿದ್ದಾರೆ.
ಆದರೆ ಯತ್ನಾಳ್ ಮಾತು ಕೇಳದೇ ಇದ್ದಾಗ ಖಾದರ್ ಹೇಳಿ ಹೇಳಿ ಸಾಕಾಗಿ, ಕೊನೆಗೆ ಹತ್ತಿರದಲ್ಲೇ ಇದ್ದ ಸುನಿಲ್ ಕುಮಾರ್ ಬಳಿ ಖಾದರ್ 'ಆಯಗ್ ಒರ ಪನ್ಲೆಯಾ..' (ಅವರಿಗೊಂದು ಹೇಳಿಯಪ್ಪಾ..) ಎಂದು ಹೇಳಿದ್ದಾರೆ. ತುಳು ಭಾಷೆ ಅರ್ಥವಾಗದ ಯತ್ನಾಳ್ ಇದರಿಂದ ಸಿಡಿಮಿಡಿಗೊಂಡು, ಖಾದರ್ ಸಾಹೇಬ್ರ ಕನ್ನಡ ಅರ್ಥ ಮಾಡಿಸ್ಲಿಕ್ಕೆ ಒಂದು ಏಪ್ ಮಾಡಿಕೊಡಿ ಎಂದು ಕಿಚಾಯಿಸಿದ್ದಾರೆ. ಕನ್ನಡದ ಬಗ್ಗೆ ಚರ್ಚೆ ಹಿನ್ನೆಲೆಯಲ್ಲಿ ವಿಷಯ ಪ್ರಸ್ತಾಪ ಮಾಡಿದ ಸ್ಪೀಕರ್ ಖಾದರ್, ಯತ್ನಾಳ್ ಪದೇ ಪದೇ ನನ್ನ ಕನ್ನಡ ಭಾಷೆ ಸರಿಪಡಿಸುತ್ತಾರೆ. ನನ್ನ ಕನ್ನಡ ಹೆಚ್ಚು ಕಡಿಮೆ ಇರಬಹುದು. ಆದರೆ ಅದು ನಮ್ಮ ಪ್ರೀತಿಯ ಭಾಷೆ ಎಂದು ಹೇಳಿದರು.
ಈ ಬಗ್ಗೆ ಯತ್ನಾಳ್ ಪ್ರತಿಕ್ರಿಯಿಸಿ, ಸಮಸ್ಯೆ ಏನೆಂದರೆ ನಮ್ಮ ಕನ್ನಡ ಬೇರೆ ಹಾಗೂ ಮೈಸೂರು ಕನ್ನಡ ಬೇರೆ, ಹೈದರಾಬಾದ್ ಕನ್ನಡ ಮುಂಬೈ ಕನ್ನಡ ಬೇರೆ. ಮಂಗಳೂರು ಕನ್ನಡ ಸುಂದರ ಭಾಷೆ. ನಮಗೆ ನಿಮ್ಮ ಕನ್ನಡ ಭಾಷೆ ಅರ್ಥ ಆಗಬೇಕು. ಅದಕ್ಕೆ ಆಪ್ ಹಾಕಿಕೊಡಿ. ಅವಾಗ ನಮಗೆ ಅರ್ಥ ಆಗುತ್ತದೆ ಎಂದು ಕಾಲೆಳೆದರು. ಮೊಬೈಲ್ ನಲ್ಲಿ ಯುಎಸ್ ಇಂಗ್ಲಿಷ್, ಇಂಗ್ಲೆಂಡ್ ಇಂಗ್ಲಿಷ್ ಇದ್ದ ಹಾಗೆ ಅದೇ ರೀತಿಯಲ್ಲಿ ಲೋಕಸಭೆಯಲ್ಲಿ ಹಿಂದಿ ಟು ಕನ್ನಡ ಕನ್ನಡ ಟು ಹಿಂದಿ ಇದ್ದ ಹಾಗೆ ಸ್ಪೀಕರ್ ಟು ಕನ್ನಡ ಮಾಡಿ ಎಂದು ಕಾಲೆಳೆದರು.
Speaker #UTKhader slams Basangouda Patil #Yatnal in #Tulu, #video goes viral pic.twitter.com/2gIri7JoDW
— Headline Karnataka (@hknewsonline) July 7, 2023
Speaker UT Khader slams Basangouda Patil Yatnal in Tulu, video goes viral.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am