ಬ್ರೇಕಿಂಗ್ ನ್ಯೂಸ್
08-07-23 06:07 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ 7: ದೇಶಾದ್ಯಂತ ಮಾನ್ಸೂನ್ ಚುರುಕಾಗಿದೆ. ರಾಜ್ಯದಲ್ಲಿ ಕೊಂಚ ತಡವಾದರೂ ಸದ್ಯ ಹಲವೆಡೆ ವರುಣ ಆರ್ಭಟಿಸುತ್ತಿದ್ದಾನೆ. ಮಲೆನಾಡಿನಲ್ಲೂ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆ ಶಾಲೆಯಲ್ಲಿ ವಿದ್ಯಾರ್ಥಿಗಳು ಛತ್ರಿ ಹಿಡಿದು ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಶಾಲೆಯ ಮೇಲ್ಛಾವಣಿ ಸೋರುತ್ತಿದ್ದು, ಮಕ್ಕಳು ತೊಂದರೆ ಅನುಭವಿಸುವಂತಾಗಿದೆ.
ಹೌದು, ಇದು ಶಿಕ್ಷಣ ಸಚಿವರ ತವರು ಜಿಲ್ಲೆಯ ಪರಿಸ್ಥಿತಿ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕೋಡೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯು ಸಂಪೂರ್ಣ ಸೋರುತ್ತಿದೆ. ಈ ಶಾಲೆಯ 9ನೇ ತರಗತಿಯ ಒಳಗೆ ನೀರು ಬರುತ್ತದೆ. ಇದರಿಂದ ಪಾಠ ಕೇಳಬೇಕಾದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಛತ್ರಿ ಹಿಡಿದು ಪಾಠ ಮಾಡುವ ಸ್ಥಿತಿ ನಿರ್ಮಾಣವಾಗಿದೆ.

ಕೋಡೂರು ಗ್ರಾಮದ ಸರ್ಕಾರಿ ಶಾಲೆಯು ಸುಮಾರು 40 ವರ್ಷಗಳ ಹಳೆಯ ಕಟ್ಟಡವಾಗಿದೆ. ಇಲ್ಲಿ 8 ರಿಂದ 10ನೇ ತರಗತಿಯ ತನಕ ಒಟ್ಟು 123 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಇಷ್ಟು ಮಕ್ಕಳಿದ್ದರೂ ಶಾಲೆಯ ದುರಸ್ಥಿ ಕಾರ್ಯ ಇನ್ನೂ ಆಗಿಲ್ಲ. ಇದರಿಂದ ಶಾಲಾ ಕಟ್ಟಡದಲ್ಲಿ ಕಾರಿಡಾರ್ ಸೇರಿದಂತೆ 9ನೇ ತರಗತಿಯ ಮೇಲ್ಛಾವಣಿ ಸೂರುತ್ತಿದೆ.

ಉಳಿದ ಎರಡು ತರಗತಿಯಲ್ಲಿ ನೀರು ಗೋಡೆಗಳ ಮೇಲೆ ಇಳಿಯುತ್ತಿರುತ್ತದೆ. ಇದರಿಂದ ಇಲ್ಲಿ ಸದ್ಯ ಯಾವುದೇ ಸಮಸ್ಯೆ ಇಲ್ಲ. ಮುಖ್ಯವಾಗಿ ಶಾಲೆಯ ಕಾರಿಡಾರ್ ಹಾಗೂ 9 ನೇ ತರಗತಿ ಸೋರುತ್ತಿದೆ. ಸೋರುತ್ತಿರುವ ತರಗತಿಯಲ್ಲಿ ಒಬ್ಬರು ಛತ್ರಿ ಹಿಡಿದುಕೊಂಡರೆ, ಇನ್ನೊಬ್ಬ ವಿದ್ಯಾರ್ಥಿ ಪುಸ್ತಕದಲ್ಲಿ ಶಿಕ್ಷಕರು ಹೇಳಿದ್ದನ್ನು ನೋಟ್ ಮಾಡಿಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳು ಮಳೆಗಾಲ ಯಾಕಾದ್ರೂ ಬರುತ್ತೋ ಅಂತ ಗೊಣಗುವಂತಾಗಿದೆ.
Students found with umbrella as water leaks from roof due to rains at Koduru in government school at Shivamogga. Students are finding it difficult to attend schools at Educaiton Minister Madhu Bangarappa home town
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am