ಬ್ರೇಕಿಂಗ್ ನ್ಯೂಸ್
08-07-23 06:07 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ 7: ದೇಶಾದ್ಯಂತ ಮಾನ್ಸೂನ್ ಚುರುಕಾಗಿದೆ. ರಾಜ್ಯದಲ್ಲಿ ಕೊಂಚ ತಡವಾದರೂ ಸದ್ಯ ಹಲವೆಡೆ ವರುಣ ಆರ್ಭಟಿಸುತ್ತಿದ್ದಾನೆ. ಮಲೆನಾಡಿನಲ್ಲೂ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆ ಶಾಲೆಯಲ್ಲಿ ವಿದ್ಯಾರ್ಥಿಗಳು ಛತ್ರಿ ಹಿಡಿದು ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಶಾಲೆಯ ಮೇಲ್ಛಾವಣಿ ಸೋರುತ್ತಿದ್ದು, ಮಕ್ಕಳು ತೊಂದರೆ ಅನುಭವಿಸುವಂತಾಗಿದೆ.
ಹೌದು, ಇದು ಶಿಕ್ಷಣ ಸಚಿವರ ತವರು ಜಿಲ್ಲೆಯ ಪರಿಸ್ಥಿತಿ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕೋಡೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯು ಸಂಪೂರ್ಣ ಸೋರುತ್ತಿದೆ. ಈ ಶಾಲೆಯ 9ನೇ ತರಗತಿಯ ಒಳಗೆ ನೀರು ಬರುತ್ತದೆ. ಇದರಿಂದ ಪಾಠ ಕೇಳಬೇಕಾದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಛತ್ರಿ ಹಿಡಿದು ಪಾಠ ಮಾಡುವ ಸ್ಥಿತಿ ನಿರ್ಮಾಣವಾಗಿದೆ.

ಕೋಡೂರು ಗ್ರಾಮದ ಸರ್ಕಾರಿ ಶಾಲೆಯು ಸುಮಾರು 40 ವರ್ಷಗಳ ಹಳೆಯ ಕಟ್ಟಡವಾಗಿದೆ. ಇಲ್ಲಿ 8 ರಿಂದ 10ನೇ ತರಗತಿಯ ತನಕ ಒಟ್ಟು 123 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಇಷ್ಟು ಮಕ್ಕಳಿದ್ದರೂ ಶಾಲೆಯ ದುರಸ್ಥಿ ಕಾರ್ಯ ಇನ್ನೂ ಆಗಿಲ್ಲ. ಇದರಿಂದ ಶಾಲಾ ಕಟ್ಟಡದಲ್ಲಿ ಕಾರಿಡಾರ್ ಸೇರಿದಂತೆ 9ನೇ ತರಗತಿಯ ಮೇಲ್ಛಾವಣಿ ಸೂರುತ್ತಿದೆ.

ಉಳಿದ ಎರಡು ತರಗತಿಯಲ್ಲಿ ನೀರು ಗೋಡೆಗಳ ಮೇಲೆ ಇಳಿಯುತ್ತಿರುತ್ತದೆ. ಇದರಿಂದ ಇಲ್ಲಿ ಸದ್ಯ ಯಾವುದೇ ಸಮಸ್ಯೆ ಇಲ್ಲ. ಮುಖ್ಯವಾಗಿ ಶಾಲೆಯ ಕಾರಿಡಾರ್ ಹಾಗೂ 9 ನೇ ತರಗತಿ ಸೋರುತ್ತಿದೆ. ಸೋರುತ್ತಿರುವ ತರಗತಿಯಲ್ಲಿ ಒಬ್ಬರು ಛತ್ರಿ ಹಿಡಿದುಕೊಂಡರೆ, ಇನ್ನೊಬ್ಬ ವಿದ್ಯಾರ್ಥಿ ಪುಸ್ತಕದಲ್ಲಿ ಶಿಕ್ಷಕರು ಹೇಳಿದ್ದನ್ನು ನೋಟ್ ಮಾಡಿಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳು ಮಳೆಗಾಲ ಯಾಕಾದ್ರೂ ಬರುತ್ತೋ ಅಂತ ಗೊಣಗುವಂತಾಗಿದೆ.
Students found with umbrella as water leaks from roof due to rains at Koduru in government school at Shivamogga. Students are finding it difficult to attend schools at Educaiton Minister Madhu Bangarappa home town
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm