ಬ್ರೇಕಿಂಗ್ ನ್ಯೂಸ್
10-07-23 01:50 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 10: ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲು ಹಣ ನೀಡುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಂಜೆ ಚಾಲನೆ ನೀಡಲಿದ್ದಾರೆ. ರಾಜ್ಯದಲ್ಲಿ 1.28 ಕೋಟಿ ಬಿಪಿಎಲ್ ಪಡಿತರದಾರರಿಗೆ ಪ್ರತಿ ಸದಸ್ಯನಿಗೆ 5 ಕೇಜಿ ಅಕ್ಕಿ ಬದಲು 170 ರೂ.ನಂತೆ, ಪಡಿತರ ಚೀಟಿಯಲ್ಲಿರುವ ಸದಸ್ಯರ ಸಂಖ್ಯೆಗೆ ತಕ್ಕಂತೆ ಹಣ ಜಮಾ ಆಗಲಿದೆ. ಆದರೆ ಈ ರೀತಿ ಹಣ ಪಡೆಯಲು ಬಿಪಿಎಲ್ ಕುಟುಂಬಗಳು ಕಳೆದ ಮೂರು ತಿಂಗಳಲ್ಲಿ ಒಮ್ಮೆಯಾದರೂ ಪಡಿತರ ಅಕ್ಕಿ ಪಡೆದಿರಬೇಕು ಎನ್ನುವ ನಿಯಮ ವಿಧಿಸಿದೆ.
ಪ್ರತಿ ತಿಂಗಳಿಗೆ ಬಿಪಿಎಲ್ ಪಡಿತರ ಚೀಟಿದಾರರಿಗೆ ರೇಶನ್ ಅಕ್ಕಿ ಸಿಗುತ್ತದೆ. ಈವರೆಗೂ ಪ್ರತಿ ಸದಸ್ಯನಿಗೆ 5 ಕೇಜಿಯಂತೆ ಅಕ್ಕಿ ನೀಡಲಾಗುತ್ತಿತ್ತು. ಅದನ್ನು ಹತ್ತು ಕೇಜಿಗೆ ಏರಿಸುತ್ತೇವೆಂದು ಕಾಂಗ್ರೆಸ್ ಚುನಾವಣೆಗೆ ಮೊದಲೇ ಅನ್ನಭಾಗ್ಯ ಯೋಜನೆ ಘೋಷಣೆ ಮಾಡಿತ್ತು. ಅದರಂತೆ, ಅಕ್ಕಿ ವಿತರಣೆಗೆ ಕೇಂದ್ರದಿಂದ ಪೂರೈಕೆ ಆಗದೇ ಇರುವುದರಿಂದ ಅಕ್ಕಿ ಬದಲಿಗೆ ಹಣ ನೀಡಲು ಮುಂದಾಗಿದೆ. ಈಗ ಮೂರು ತಿಂಗಳಲ್ಲಿ ಒಮ್ಮೆಯಾದರೂ ಪಡಿತರ ಧಾನ್ಯಗಳನ್ನು ಪಡೆದಿರಬೇಕು ಎಂದು ಹೊಸ ಷರತ್ತು ವಿಧಿಸಿದ್ದು, ಆಮೂಲಕ ಅಗತ್ಯ ಇರುವ ಕುಟುಂಬಕ್ಕೆ ಮಾತ್ರ ನಗದು ವರ್ಗಾವಣೆ ಮಾಡುತ್ತೇವೆ ಎನ್ನುವ ಸಂದೇಶ ನೀಡಿದೆ.
ಹಣ ಪಡೆಯಲು ಪಡಿತರ ಚೀಟಿಯ ಮುಖ್ಯಸ್ಥರ ಆಧಾರ್ ಜೋಡಣೆ ಹಾಗೂ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕಾಗುತ್ತದೆ. ಜು.10ರಿಂದ ಹಣ ವರ್ಗಾವಣೆ ಶುರುವಾಗಲಿದ್ದು, ಜುಲೈ ಅಂತ್ಯದ ವೇಳೆಗೆ ಎಲ್ಲ ಕುಟುಂಬಗಳಿಗೂ ನಗದು ಜಮಾವಣೆ ಮಾಡುತ್ತೇವೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪಡಿತರ ಚೀಟಿಯಲ್ಲಿ ಕುಟುಂಬ ಮುಖ್ಯಸ್ಥರನ್ನು ನಮೂದಿಸದ ಅಥವಾ ಒಂದಕ್ಕಿಂತ ಹೆಚ್ಚು ಕುಟುಂಬ ಮುಖ್ಯಸ್ಥರನ್ನು ಹೊಂದಿರುವ ಪಡಿತರ ಚೀಟಿಗಳಿಗೆ ನಗದು ರವಾನೆಯಾಗುವುದಿಲ್ಲ. ಈ ರೀತಿ ಗೊಂದಲ ಇರುವ ಪಡಿತರ ಚೀಟಿದಾರರು ತಮ್ಮ ಕುಟುಂಬ ಮುಖ್ಯಸ್ಥರನ್ನು ನಮೂದಿಸಬೇಕು ಮತ್ತು ಆಧಾರ್, ಬ್ಯಾಂಕ್ ಖಾತೆ ಜೋಡಣೆ ಆಗಿರದೇ ಇದ್ದಲ್ಲಿ ಅವನ್ನು ಈ ತಿಂಗಳ ಒಳಗೆ ಮಾಡಿಸಬೇಕಾಗಿದೆ.
ಈಗಾಗಲೇ ಆಧಾರ್ ಜೋಡಣೆ ಆಗಿರುವವರು ಪಡಿತರದಲ್ಲಿ ಹಣ ಪಡೆಯುವುದಕ್ಕಾಗಿ ಮತ್ತೆ ಅರ್ಜಿ ಸಲ್ಲಿಸಬೇಕಿಲ್ಲ. ಬ್ಯಾಂಕ್ ಖಾತೆಗಳ ಮಾಹಿತಿ ನೀಡುವ ಅಗತ್ಯ ಇರುವುದಿಲ್ಲ. ಮಾಹಿತಿ ಪ್ರಕಾರ, 99 ಶೇಕಡಾ ಪಡಿತರ ಚೀಟಿಗಳು ಆನ್ಲೈನ್ ಮತ್ತು ಆಧಾರ್ ಜೋಡಣೆಯಾಗಿದೆ. ಶೇ.82 ಶೇಕಡಾದಷ್ಟು ಅಂದರೆ 1.6 ಕೋಟಿ ಪಡಿತರ ಚೀಟಿಗಳಲ್ಲಿ ಬ್ಯಾಂಕ್ ಖಾತೆ ಜೋಡಣೆಯೂ ಸರಿಯಾಗಿದೆ. ಹೀಗಾಗಿ ನಗದು ವರ್ಗಾವಣೆಗೆ ಮತ್ತೆ ಅರ್ಜಿ ಸಲ್ಲಿಸುವ ಪ್ರಮೇಯ ಬರುವುದಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
The state has 99% 1.28 crore ration card of Antyodaya Anna Yojana and Priority Households with 82% linked to active bank accounts. "The cash will be transferred to those card holders. The remaining card holders will be intimated to open new accounts," an official statement said on Sunday.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm