ಬ್ರೇಕಿಂಗ್ ನ್ಯೂಸ್
10-07-23 02:14 pm HK News Desk ಕರ್ನಾಟಕ
ಹುಬ್ಬಳ್ಳಿ, ಜುಲೈ 10: ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ. ಮುಂದೆ ಈ ರೀತಿಯ ಕೃತ್ಯ ಮರುಕಳಿಸದಂತೆ ನೋಡಿಕೊಳ್ಳಲಾಗುವುದು. ತನಿಖೆಯನ್ನು ಪೊಲೀಸರು ಸಮರ್ಥವಾಗಿ ನಿರ್ವಹಿಸುತ್ತಿದ್ದು ಸಿಬಿಐಗೆ ನೀಡುವ ಅಗತ್ಯ ಇಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದದ ಅವರು, ಈ ಪ್ರಕರಣದಲ್ಲಿ ಯಾವುದೇ ರಾಜಕೀಯ, ತಾರತಮ್ಯ ಮಾಡುವುದಿಲ್ಲ. ಜೈನಮುನಿ ಹತ್ಯೆ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ನಮ್ಮ ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ದಿನದಲ್ಲಿ ಇಂತಹ ಕೃತ್ಯ ಮರುಕಳಿಸದಂತೆ ಎಚ್ಚರ ವಹಿಸಲಾಗುವುದು ಎಂದು ಹೇಳಿದರು.

ಅಪರಾಧಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಇದೆ. ಇದು ಸ್ವಾಭಾವಿಕ ಪದ್ದತಿ, ಇದರಲ್ಲಿ ತಾರತಮ್ಯ ಪ್ರಶ್ನೆ ಇಲ್ಲ. ಘಟನೆ ಆದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ. ವರೂರಲ್ಲಿ ಜೈನ ಮುನಿಗಳು ಉಪವಾಸ ಕುಳಿತಿದ್ದಾರೆ. ಅವರ ಬೇಡಿಕೆಗಳನ್ನು ಆಲಿಸಲಾಗುವುದು ಎಂದು ತಿಳಿಸಿದರು.
ಆರೋಪಿಗಳು ಪೊಲೀಸರ ವಶದಲ್ಲಿದ್ದು ತನಿಖೆ ಶುರುವಾಗಿದೆ. ಈ ಹಂತದಲ್ಲಿ ಪ್ರಕರಣವನ್ನು ಸಿಬಿಐಗೆ ನೀಡುವ ಅಗತ್ಯ ಇಲ್ಲ. ಗೃಹ ಇಲಾಖೆಯೇ ಸಮರ್ಥವಾಗಿದೆ. ತನಿಖೆ ಮುಗಿದ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಆಗಲಿದೆ ಎಂದರು.
ಕಾನೂನು ಸುವ್ಯವಸ್ಥೆ ಕುಸಿದಿದೆ ಎಂಬ ಬಿಜೆಪಿ ಆರೋಪದ ಬಗ್ಗೆ, ನಮ್ಮ ವಿರುದ್ಧ ಅಪವಾದ ಹೊರಿಸುವ ಬಿಜೆಪಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಆಗುತ್ತಿಲ್ಲ. ಅವರಲ್ಲಿ ಆಂತರಿಕ ಒಳ ಜಗಳ ಇದೆ. ಅವರಿಗೆ ಎಷ್ಟರ ಮಟ್ಟಿಗೆ ಜವಾಬ್ದಾರಿ ಇದೆ ಎಂಬುದನ್ನು ರಾಜ್ಯದ ಜನ ಗಮನಿಸುತ್ತಿದ್ದಾರೆ ಎಂದು ಹೇಳಿದರು.
After the murder of Sri Acharya Kamakumara Nandi, a Jain monk, Karnataka Home Minister Dr. G. Parameshwara on Monday said that the government will ensure that no such incidents happen again in the state. The opposition BJP not satisfied with the probe has decided to protest.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm