ಬ್ರೇಕಿಂಗ್ ನ್ಯೂಸ್
12-07-23 06:25 pm HK News Desk ಕರ್ನಾಟಕ
ಮೈಸೂರು, ಜುಲೈ 12: ಕಾಂಗ್ರೆಸ್ ಸರ್ಕಾರ ಇರುವವರೆಗೆ ಎಲ್ಲರನ್ನು ಕೊಲ್ಲುತ್ತಾರೆ. ಹಿಂದೂ ಕಾರ್ಯಕರ್ತರೇ ರಾಜ್ಯದಲ್ಲಿ ಒಬ್ಬೊಬ್ಬರೆ ಓಡಾಡಬೇಡಿ ಎಂದು ಮಾಜಿ ಸಚಿವ ಶ್ರೀರಾಮುಲು ಕರೆ ನೀಡಿದ್ದಾರೆ. ಅದಲ್ಲದೇ ಎಲ್ಲರನ್ನು ಮುಗಿಸುವ ಪ್ರಯತ್ನವನ್ನ ಮಾಡಿದ್ದಾರೆ. ಈ ಸರ್ಕಾರದಲ್ಲಿ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ. ಮೋಸ, ವಂಚನೆಯಿಂದ ಕೊಲ್ಲುತ್ತಾರೆ ಎಂದು ಶ್ರೀರಾಮುಲು ಹೇಳಿದರು.
ತಿ ನರಸೀಪುರದಲ್ಲಿ ಹತ್ಯೆಯಾಗಿರುವ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ಅವರು, ಈ ಸರ್ಕಾರ ಬಂದ್ಮೇಲೆ ಹಿಂದೂ ಕಾರ್ಯಕರ್ತರ ಹತ್ಯೆಯಾಗ್ತಿದೆ. ಇಲ್ಲಿ ಧರ್ಮದ ವಿಚಾರವಾಗಿ ನಡೆದಿರುವ ಕೊಲೆ ಇದು. ಧರ್ಮ ಅಂತ ಬಂದಾಗ ನಾವೆಲ್ಲ ಒಂದೇ, ಪಕ್ಷ ಅನ್ನೋದು ಇಲ್ಲ ಎಂದು ತಿಳಿಸಿದರು.

ಕೊಲೆ ಬಗ್ಗೆ ತನಿಖೆ ನಡೆದರೆ ಯಾರ ಕುಮ್ಮಕ್ಕು ಅಂತಾ ಗೊತ್ತಾಗುತ್ತೆ. ವೇಣುಗೋಪಾಲ್ ಫೋನ್ ಪರಿಶೀಲಿಸಿದರೆ ಯಾರು ಎನ್ನುವುದು ಗೊತ್ತಾಗುತ್ತದೆ. ಅವರಿಗೆ ಯಾರೆಲ್ಲಾ ಫೋನ್ ಮಾಡಿದ್ದಾರೆ ಎಂಬುದು ಗೊತ್ತಾಗುತ್ತದೆ. ವೇಣುಗೋಪಾಲ್ ಹಿಂದೂ ಸಂಘಟನೆಯಲ್ಲಿ ಕೆಲಸ ಮಾಡಿದ್ದ. ವೇಣುಗೋಪಾಲ್ ಯಾವುದೇ ಕ್ರಿಮಿನಲ್ ಕೆಲಸ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ಬಂದ ನಂತರ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಕಾರ್ಯಕರ್ತರ ಹತ್ಯೆ ಶುರುವಾಗುತ್ತದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾನೂನನ್ನು ಗಂಟು ಮೂಟೆ ಕಟ್ಟಿ ಬಿಸಾಕಲಾಗಿದೆ. ರಾಜ್ಯದ ಎಲ್ಲಾ ಕಡೆಗಳಲ್ಲೂ ಕೊಲೆ, ಹತ್ಯೆ, ದೌರ್ಜನ್ಯ ನಡೆಯುತ್ತಿವೆ. ಸಿಎಂ ಕ್ಷೇತ್ರದಲ್ಲೇ ಕಾನೂನು ಸುವ್ಯವಸ್ಥೆ ಹದೆಗಟ್ಟಿದೆ ಅಂದ ಮೇಲೆ ರಾಜ್ಯದ ಬೇರೆ ಭಾಗಗಳ ಪರಿಸ್ಥಿತಿ ಹೇಗಿರಬೇಡ ಯೋಚಿಸಿ ಎಂದರು.
ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ, ಸ್ವಾಮೀಜಿಗಳಿಗೆ, ಹಿರಿಯ ನಾಗರೀಕರಿಗೆ ರಕ್ಷಣೆ ಇಲ್ಲ. ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ ರಾಜ್ಯದ ಒಳಗಿನ ಜಿಹಾದಿ ಮನಸ್ಥಿತಿ ಇರುವ ಜನ ಎದ್ದು ಕೂರುತ್ತಾರೆ. ಹೀಗಾಗಿ ಕೊಲೆಗಳು ನಡೆಯುತ್ತವೆ. ವೇಣುಗೋಪಾಲನ ಕುಟುಂಬದ ಕಥೆ ಏನು.. ಅವರ ಮಕ್ಕಳಿಗೆ ಯಾರು ದಿಕ್ಕು. ವೇಣುಗೋಪಾಲ ನಾಯಕ್ ಕೊಲೆ ಪೂರ್ವ ನಿಯೋಜಿತ ಕೃತ್ಯ. ಜಿಹಾದಿ ಮನಸ್ಥಿತಿ ಜನ ಪ್ಲಾನ್ ಮಾಡಿಕೊಂಡು ಹಿಂದೂಗಳ ಕೊಲೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರಕಾರಕ್ಕೆ ಈ ಕೊಲೆಗಳ ವಿಚಾರದಲ್ಲಿ ಗಂಭೀರತೆ ಇಲ್ಲ ಎಂದು ಹೇಳಿದರು.
Sriramulu warns Hindu Karyakartas not to walk or go alone, they might kill you anytime, be cautious Because its Congress government he added after visiting house of member of the “Yuva Brigade" Venugopal in Mysuru.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am