ಬ್ರೇಕಿಂಗ್ ನ್ಯೂಸ್
14-07-23 06:17 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 14: ದೇಶದಲ್ಲಿ ಬಿಜೆಪಿ ಅವನತಿ ಕರ್ನಾಟಕದಿಂದಲೇ ಶುರುವಾಗಿದೆ. ಪ್ರಧಾನಿ ಮೋದಿ ಪ್ರಭಾವ ಮಂಕಾಗಿದೆ ಎನ್ನುವುದನ್ನು ವಿಧಾನಸಭೆ ಚುನಾವಣೆಯಲ್ಲಿ ನಿರೂಪಿಸಿದ್ದಾರೆ. ಮೋದಿಯವರು ರಾಜ್ಯದ ಯಾವ ಜಿಲ್ಲೆಯಲ್ಲಿ ಪ್ರಚಾರ ಮಾಡಿದ್ದರೋ ಎಲ್ಲಾ ಕಡೆ ಬಿಜೆಪಿ ಹೀನಾಯವಾಗಿ ಸೋತಿದೆ. ಇನ್ನು ಮುಂದೆ ರಾಜ್ಯದ ಬಿಜೆಪಿ ನಾಯಕರು ಮೋದಿ ಮೇಲೆ ಅವಲಂಬಿತರಾಗಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿ ಮಾತು ಹೇಳಿದ್ದಾರೆ.
ಶುಕ್ರವಾರ ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸಿದ ಸಿದ್ದರಾಮಯ್ಯ, ಪ್ರಧಾನಿ ಮೋದಿ ಚುನಾವಣಾ ಪ್ರಚಾರಕ್ಕಾಗಿ ಒಂದೇ ತಿಂಗಳ ಅಂತರದಲ್ಲಿ 28 ಬಾರಿ ರಾಜ್ಯಕ್ಕೆ ಆಗಮಿಸಿದ್ದಾರೆ. ಯಾವ ಪ್ರಧಾನಿ ಕೂಡ ರಾಜ್ಯದ ಚುನಾವಣೆಗೆ ಇಷ್ಟು ಮಹತ್ವ ನೀಡಿದ ನಿದರ್ಶನ ಇಲ್ಲ. ಆದರೆ ಮೋದಿ ಪ್ರವಾಸ ಮಾಡಿದ ಕಡೆಯಲ್ಲಿ ಕಾಂಗ್ರೆಸ್ ಗೆದ್ದಿದೆ ಎಂದರು.
ಮೋದಿ ಬಗ್ಗೆ ದೇಶದಲ್ಲಿ ಪಾಪ್ಯುಲಾರಿಟಿ ಇದೆ. ಅದರಲ್ಲಿ ಯಾವುದೇ ಡೌಟ್ ಇಲ್ಲ. ಆದರೆ ಅದು ಈವಾಗ ಮಂಕಾಗಿದೆ. ರಾಜ್ಯದಿಂದಲೇ ಶುರುವಾಗಿದೆ ನಿಮ್ಮ ಅವನತಿ. ನರೇಂದ್ರ ಮೋದಿ ಹೊಗಳುವುದು ಬಿಟ್ಟರೆ ಬಿಜೆಪಿಗೆ ಏನಿದೆ ಕೆಲಸ ? ಎಂದು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ, ಕಾಂಗ್ರೆಸ್ ನಲ್ಲಿ ಎರಡು ಬಾರಿ ಸಿಎಂ ಆಗಲು ಅವಕಾಶ ಸಿಕ್ತು, ಅದಕ್ಕಾಗಿ ಪಕ್ಷಕ್ಕೆ ಋಣಿ ಆಗಿದ್ದೇನೆ ಎಂದರು.
ಕಾಂಗ್ರೆಸ್ ಜನರ ಜೇಬಿನಲ್ಲಿ ಹಣ ಇರಬೇಕು ಎನ್ನುವ ಉದ್ದೇಶದಿಂದ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಬಡವರು-ಮಧ್ಯಮ ವರ್ಗದವರ ಜೇಬಿನಲ್ಲಿ ಹಣ ಇದ್ದರೆ ನಾಡಿನ ಆರ್ಥಿಕತೆ ಬೆಳೆಯುತ್ತದೆ ಎನ್ನುವುದು ಕಾಂಗ್ರೆಸ್ ಪಕ್ಷದ ಬದ್ಧತೆ ಮತ್ತು ಸಿದ್ಧಾಂತ. ಆದರೆ ಬಿಜೆಪಿ ಜನರ ಜೇಬಿನಲ್ಲಿರುವ ಹಣ ಕಿತ್ತುಕೊಳ್ಳುವ ಮನಸ್ಥಿತಿ ಹೊಂದಿರುವ ಕಾರಣದಿಂದ ಚುನಾವಣೆಯಲ್ಲಿ ಹೀನಾಯ ಸೋಲು ಕಾಣಬೇಕಾಯಿತು ಎಂದರು.
"ಮನುಷ್ಯ ಜಾತಿ ತಾನೊಂದೇ ವಲಂ" ಎನ್ನುವ ಕವಿ ಪಂಪ ಕನ್ನಡ ಸಂಸ್ಕೃತಿಯನ್ನು ಅರಳಿಸಿದರು. ಪಂಪ, ಬಸವಣ್ಣ ಹೀಗೆ ಮಹಾನುಭಾವರ ಹೆಸರನ್ನು ಪ್ರಸ್ತಾಪಿಸಿ ಇವರೆಲ್ಲರ ಆಶಯಗಳೇ ನಮ್ಮ ಸಂವಿಧಾನದಲ್ಲಿದೆ. ಆದರೆ ತಾನು ಮಾತ್ರ ಶ್ರೇಷ್ಠ ಎನ್ನುವ ಹಿಟ್ಲರ್ ಒಬ್ಬ ಮತಾಂಧ. ಆತ ಮನುಷ್ಯ ವಿರೋಧಿ. ಹಿಟ್ಲರ್ ತನ್ನ ತಿಕ್ಕಲುತನದಿಂದ ಹೇಗೆ ಮನುಷ್ಯರ ಮಾರಣ ಹೋಮಕ್ಕೆ ಕಾರಣನಾದ ಎಂದು ವಿವರಿಸುತ್ತಿದ್ದಾಗ ಬಿಜೆಪಿ ಸದಸ್ಯರು ಮುಖ್ಯಮಂತ್ರಿಗಳ ಮಾತಿಗೆ ಅಡ್ಡಿಪಡಿಸಿದರು. ಈ ವೇಳೆ ಮುಖ್ಯಮಂತ್ರಿ, 'ಹಿಟ್ಲರ್ ಗೆ ಬೈದರೆ ನಿಮಗೇಕೆ ಸಿಟ್ಟು?" ಎಂದು ಪ್ರಶ್ನಿಸಿದರು.
ನಾನು ಮಾತಾಡುವಾಗ ಯಾರೂ ದಾರಿ ತಪ್ಪಿಸಲು ಸಾದ್ಯವಿಲ್ಲ. ಈ ಚುನಾವಣೆಯಲ್ಲಿ ಜನ ಕೋಮುವಾದದ ವಿರುದ್ದ, ಭ್ರಷ್ಟಾಚಾರದ ವಿರುದ್ದ, ಬೆಲೆ ಏರಿಕೆ ವಿರುದ್ದ ಮತ ಕೊಟ್ಟಿದ್ದಾರೆ. ನಮ್ಮ ಐದು ಗ್ಯಾರಂಟಿಗಳ ಪರ ಮತ ನೀಡಿದ್ದಾರೆ. ನೀವು ಪ್ರಣಾಳಿಕೆ ಕೊಟ್ಟಿದ್ದೀರಿ, ಜೆಡಿಎಸ್ ಕೂಡ ಪಂಚರತ್ನಗಳನ್ನು ಹೇಳಿಕೊಂಡು ಹೋದ್ರು. ಕುಮಾರಸ್ವಾಮಿ 123 ಸ್ಥಾನ ಬರಲಿಲ್ಲ ಅಂದ್ರೆ ಪಾರ್ಟಿ ವಿಸರ್ಜನೆ ಮಾಡ್ತೀನಿ ಅಂತ ಹೇಳಿದ್ದರು. ಪಾಪ ಅವರು 19 ಸ್ಥಾನಕ್ಕೆ ಬಂದು ಬಿಟ್ಟಿದ್ದಾರೆ ಎಂದು ವ್ಯಂಗ್ಯವಾಡಿದರು.
BJP is on the way to decline in India. It started from Karnataka itself. Modi wave, Modi influence is fading. Chief Minister Siddaramaiah lashed out at the BJP saying that wherever Prime Minister Narendra Modi campaigned heavily in Karunad, the BJP lost miserably.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm