ಬ್ರೇಕಿಂಗ್ ನ್ಯೂಸ್
14-07-23 09:50 pm HK News Desk ಕರ್ನಾಟಕ
ಧಾರವಾಡ, ಜುಲೈ, 14: ವಿಧಾನಸೌಧದಲ್ಲಿ ನಮಾಜ್ಗೆ ಅವಕಾಶ ಕೊಡುವ ಸಂಬಂಧಿಸಿದಂತೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿದ್ದಾರೆ.
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ಕಾಂಗ್ರೆಸ್ ಸಂಪೂರ್ಣ ಹಿಂದೂ ವಿರೋಧಿಯಾಗಿದೆ. ಹಿಂದುತ್ವದ ಎಲ್ಲವನ್ನೂ ವಿರೋಧಿಸುತ್ತದೆ. ಗೋ ಶಾಲೆ ಮಾಡಲು ಜಾಗ ತೆಗೆದುಕೊಂಡಿದ್ದರೆ ಅದು ಆರ್ಎಸ್ಎಸ್ಗೆ ಸೇರಿದ ಸಂಸ್ಥೆ ಅಂತಾ ತಡೆ ಹಿಡಿದಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
ನಾಗರಕಟ್ಟೆ ಸ್ವಚ್ಛ ಮಾಡಿ ಪವಿತ್ರ ಸ್ಥಾನ ಮಾಡಿದ್ದು ಪುನೀತ್ ಕೆರೆಹಳ್ಳಿ ಅವರ ಬಳಗ. ಆದರೆ ಅವರಿಗೆ ಪೂಜೆ ಮಾಡಲು ತಡೆ ಹಾಕುತ್ತಿದ್ದಾರೆ. ಅನುಮತಿ ಪಡೆಯಿರಿ ಅಂತಾರೆ. ನಿತ್ಯ ಐದು ಸಲ ನಮಾಜ್ ಮಾಡ್ತಾರಲ್ಲವಾ? ಅದಕ್ಕೆ ಅನುಮತಿ ಇದೆಯಾ? ಹಿಂದೂ ವಿರೋಧಿ ಎನ್ನುವುದು ಕಾಂಗ್ರೆಸ್ನ ರಕ್ತದ ಕಣ ಕಣದಲ್ಲಿದೆ ಎಂದು ಹರಿಹಾಯ್ದರು.
ಜಾಗಕ್ಕೆ ತಡೆ ಹಿಡಿದಿದ್ದು ತಪ್ಪು. ಆ ತಡೆ ವಾಪಸ್ ಪಡೆಯಬೇಕು. ಕಾಂಗ್ರೆಸ್ ಅವಧಿಯಲ್ಲಿ ಯಾವ ಯಾವ ಜಮೀನು ಯಾರಿಗೆ ಕೊಟ್ಟಿದ್ದಾರೆ ಬಹಿರಂಗಪಡಿಸಿ. ಎಷ್ಟು ಮಸೀದಿ, ದರ್ಗಾ, ಮದರಸಾಗಳಿಗೆ ಇವರು ಭೂಮಿ ಕೊಟ್ಟಿಲ್ಲವಾ?. ಆದರೆ ಗೋ ಶಾಲೆ ಮಾಡಲು ಜಮೀನು ತೆಗೆದುಕೊಂಡರೆ ಅದರಲ್ಲಿ ಏನು ಲಾಭದ ವ್ಯವಹಾರ ಇದೆ ಎಂದರು.
ವಿಧಾನಸೌಧದಲ್ಲಿ ನಮಾಜ್ಗೆ ಅವಕಾಶ ಕೇಳಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅವಕಾಶ ಕೊಟ್ಟರೇ ಇಡೀ ಕರ್ನಾಟಕ ಹೊತ್ತಿ ಉರಿಯುತ್ತದೆ. ವಿಧಾನಸೌಧ ಮೆಕ್ಕಾ, ಮದೀನಾ ಅಲ್ಲ, ಅದು ಪ್ರಜಾಪ್ರಭುತ್ವದ ಆಧಾರದ ಮೇಲಿನ ದೇಗುಲ. ಅಲ್ಲಿ ನಮಾಜ್ ಮಾಡಲು ಅವಕಾಶ ಕೊಟ್ಟರೆ ಸುಮ್ಮನಿರುವುದಿಲ್ಲ ಎಂದು ಗುಡುಗಿದರು.
ಅವಕಾಶ ನೀಡಿದರೆ ಸಾವಿರಾರೂ ಜನ ನಿತ್ಯ ಹನುಮಾನ ಚಾಲೀಸಾ, ಭಜನೆ ಮಾಡುತ್ತೇವೆ. ವಿಧಾನಸೌಧದೊಳಗೆ ಭಜನೆ ಮಾಡುತ್ತೇವೆ. ಈಗ ನಮಾಜ್ಗೆ ಕೇಳುತ್ತಾರೆ. ಹಾಗೆಯೇ ಬಿಟ್ಟರೆ ನಾಳೆ ಮೈಕ್ ಹಾಕೋಕೂ ಅವಕಾಶ ಕೊಡಿ ಅಂತಾರೆ. ಕಾಂಗ್ರೆಸ್ ನಮಾಜ್ಗೆ ಅವಕಾಶ ಕೊಟ್ಟರೂ ಕೊಡಬಹುದು. ಅವರಿಗೆ ನಾಚಿಕೆಯೇ ಇಲ್ಲ. ಅವಕಾಶ ಕೊಟ್ಟರೆ ಇಡೀ ಕರ್ನಾಟಕ ಹೊತ್ತಿ ಉರಿಯುತ್ತದೆ ಎಂದರು.
ಪ್ರತಿಯೊಂದು ಜಿಲ್ಲೆಯಲ್ಲೂ ಈ ಸಹಿ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು. ಚಿತ್ರ ನಟರು, ರಂಗಭೂಮಿ ಕಲಾವಿದರು, ವಕೀಲರು, ವೈದ್ಯರು ಹಾಗೂ ವ್ಯಾಪಾರಸ್ಥರು ಈ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ. ದೇಶದ ಐಕ್ಯತೆ ಮತ್ತು ಭದ್ರತೆಯ ದೃಷ್ಟಿಯಿಂದ ಏಕರೂಪ ನಾಗರಿಕ ಸಂಹಿತೆಯನ್ನು ಸರ್ಕಾರ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿದರು.
ಈ ವೇಳೆ ಶ್ರೀರಾಮ ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, ಮುಖಂಡರಾದ ಅಣ್ಣಪ್ಪ ದಿವಟಗಿ, ಪಾಂಡು ಯಮೋಜಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Pramod Muthalik slams Congress over giving permissions to offer Namaz at Vidhana Soudha, says state will be on fire if Permission granted.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am