ಬ್ರೇಕಿಂಗ್ ನ್ಯೂಸ್
15-07-23 12:43 pm HK News Desk ಕರ್ನಾಟಕ
ಕಲಬುರಗಿ, ಜುಲೈ 15: ಚುನಾವಣಾ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣದಲ್ಲಿ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ಚಿತ್ತಾಪುರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಅವರನ್ನು ಪೊಲೀಸರು ರಾತ್ರೋರಾತ್ರಿ ಅರೆಸ್ಟ್ ಆಗಿದ್ದಾರೆ. ಮಣಿಕಂಠ ರಾಠೋಡ್ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಹೇಳಿಕೆಗಳ ಕುರಿತಾಗಿ ಕಲಬುರಗಿ ಜಿಲ್ಲೆಯ ಹಲವು ಕಡೆ ಪೊಲೀಸ್ ದೂರು ದಾಖಲಾಗಿದೆ.
ಖರ್ಗೆ ಕುಟುಂಬವನ್ನು ಮುಗಿಸುವುದಾಗಿ ಹೇಳಿದ್ದ ಆಡಿಯೋ ಚುನಾವಣೆ ಸಂದರ್ಭದಲ್ಲಿ ಸಂಚಲನ ಮೂಡಿಸಿತ್ತು. ಶುಕ್ರವಾರ ಅವರನ್ನು ಬಂಧಿಸಿದ್ದು ರಾತ್ರಿಯೇ ಸ್ಟೇಷನ್ ಜಾಮೀನು ಮೇಲೆ ಬಿಡುಗಡೆ ಮಾಡಿದ್ದಾರೆ. ಇನ್ನೊಂದೆಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ ಪ್ರಕರಣದ ತನಿಖೆಯನ್ನು ಚಿತ್ತಾಪುರ ಪೊಲೀಸರು ಚುರುಕುಗೊಳಿಸಿದ್ದಾರೆ.

ಖರ್ಗೆ ಕುಟುಂಬವನ್ನು ಸಾಫ್ ಮಾಡುವುದಾಗಿ ಮಣಿಕಂಠ ರಾಠೋಡ್ ಹೇಳಿದ್ದಾನೆ ಎನ್ನಲಾದ ಆಡಿಯೋ ಚುನಾವಣೆ ಸಂದರ್ಭದಲ್ಲಿ ತೀವ್ರ ಸಂಚಲನ ಸೃಷ್ಟಿಸಿತ್ತು. ಇದೀಗ ಚಿತ್ತಾಪುರ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಕಂಠ ರಾಠೋಡ್ ಗೆ ಮತ್ತೆ ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ. ಹೀಗಾಗಿ ಚುನಾವಣೆ ಸಂದರ್ಭದಲ್ಲಿ ಪ್ರಿಯಾಂಕ್ ಖರ್ಗೆ ವಿರುದ್ಧ ತೊಡೆತಟ್ಟಿದ್ದ ಮಣಿಕಂಠ ರಾಠೋಡಗೆ ಇದೀಗ ಸಂಕಷ್ಟ ಎದುರಾಗಿದೆ.
/newsdrum-in/media/media_files/qbCASdvskHi29vsZlgfs.webp)
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಣಿಕಂಠ ರಾಠೋಡ್, ರಾಜಕೀಯ ದ್ವೇಷದ ಕಾರಣಕ್ಕಾಗಿ ಕಿರುಕುಳ ನೀಡುತ್ತಿದ್ದು ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಲಾಗುತ್ತಿದೆ. ಇದರ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಪೊಲೀಸ್ ಅಧಿಕಾರಿಗಳು ಶಾಮೀಲಾಗಿದ್ದಾರೆ, ಇವರೆಲ್ಲರ ವಿರುದ್ಧ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸುತ್ತೇನೆ ಎಂದು ಹೇಳಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿರುವುದಾಗಿ ಜಿಲ್ಲೆಯ ಬೇರೆ ಬೇರೆ ಠಾಣೆಗಳಲ್ಲಿ ತನ್ನ ವಿರುದ್ಧ ದೂರುಗಳನ್ನು ದಾಖಲಿಸಲಾಗುತ್ತಿದೆ. ಈ ಕುರಿತು ಕಲಬುರಗಿಯ ಚೌಕ್ ಪೊಲೀಸ್ ಠಾಣೆ, ಮಾಡಬೂಳ ಮತ್ತು ಚಿತ್ತಾಪುರ ಪೊಲೀಸ್ ಠಾಣೆಗಳಿಂದ ಈಗಾಗಲೇ ನೋಟಿಸ್ಗಳನ್ನು ನೀಡಿದ್ದಾರೆ. ಆಮೂಲಕ ತನ್ನನ್ನು ಹಾಗೂ ತಮ್ಮ ಬೆಂಬಲಿಗರನ್ನು ಬೆದರಿಸುವ ಕೆಲಸ ನಡೆದಿದೆ ಎಂದಿದ್ದಾರೆ.
BJP leader Manikanth Rathod was arrested and later released by the police in a case of violating the code of conduct during the election. Chittapur police arrested in case of violation of code of conduct during elections. Manikanth Rathod has come out on the station bail at night.On the other hand, the police has accelerated the investigation of the case of death threats to the family of AICC president Mallikarjuna Kharge.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm