ಬ್ರೇಕಿಂಗ್ ನ್ಯೂಸ್
15-07-23 04:23 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 15: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಕಚೇರಿಗೆ ಫೋನ್ ಕರೆ ಮಾಡಿ ಜೀವ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಮಂಗಳೂರು ಮೂಲದ ಜಯೇಶ್ ಪೂಜಾರಿ ಉಗ್ರ ಸಂಘಟನೆಗಳ ಜೊತೆ ನಂಟು ಹೊಂದಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ.
ಜಯೇಶ್ ಪೂಜಾರಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದು ಅಲ್ಲಿಯೇ ಕೈದಿಯಾಗಿರುವ ಉಗ್ರ ಅಫ್ಸರ್ ಪಾಶ ಜೊತೆಗೆ ಸಂಪರ್ಕ ಹೊಂದಿದ್ದ ಎಂಬ ಮಾಹಿತಿಯನ್ನು ತನಿಖಾಧಿಕಾರಿಗಳು ಪತ್ತೆ ಮಾಡಿದ್ದಾರೆ. ಅಫ್ಸರ್ ಪಾಶ 2005ರಲ್ಲಿ ಬೆಂಗಳೂರಿನ ಐಐಎಸ್ಸಿ ಕೇಂದ್ರಕ್ಕೆ ಬಾಂಬ್ ದಾಳಿ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಅಫ್ಸರ್ ಪಾಶ ಪಾಕಿಸ್ಥಾನ ಮೂಲದ ಲಷ್ಕರ್ ಇ- ತೈಬಾ ಉಗ್ರ ಸಂಘಟನೆಯ ಸಂಪರ್ಕ ಹೊಂದಿದ್ದುದಲ್ಲದೆ, ಸೆರೆಸಿಕ್ಕ ಬಳಿಕ ಬೆಳಗಾವಿ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾನೆ.

ಸಚಿವ ನಿತಿನ್ ಗಡ್ಕರಿಯವರ ನಾಗಪುರದ ಕಚೇರಿಗೆ ಎರಡೆರಡು ಬಾರಿ ಜೀವ ಬೆದರಿಕೆ ಕರೆ ಮಾಡಿರುವುದು ಜಯೇಶ್ ಪೂಜಾರಿ, ಅಫ್ಸರ್ ಪಾಶ ಜೊತೆ ಸೇರಿ ರೂಪಿಸಿದ್ದ ಸಂಚಿನ ಭಾಗ ಎನ್ನಲಾಗುತ್ತಿದೆ. ಈ ಬಗ್ಗೆ ಮಾಹಿತಿ ಕಲೆಹಾಕಲು ಮಹಾರಾಷ್ಟ್ರದ ಸ್ಪೆಷಲ್ ಟಾಸ್ಕ್ ಫೋರ್ಸ್ ಪೊಲೀಸರು ಬೆಳಗಾವಿಯ ಹಿಂಡಲಗಾ ಜೈಲಿಗೆ ಭೇಟಿ ನೀಡಿದ್ದು ತನಿಖೆ ನಡೆಸಿದ್ದಾರೆ. ಜಯೇಶ್ ಪೂಜಾರಿ ಮೊದಲ ಬಾರಿಗೆ ಕಳೆದ ಜನವರಿ 14ರಂದು ನಾಗಪುರದ ನಿತಿನ್ ಗಡ್ಕರಿ ಕಚೇರಿಗೆ ಕರೆ ಮಾಡಿದ್ದು, 100 ಕೋಟಿ ರೂಪಾಯಿ ಹಫ್ತಾ ಬೇಡಿಕೆ ಇಟ್ಟಿದ್ದ. ಹಣ ಕೊಡದೇ ಇದ್ದರೆ, ಸಂಸದರ ಕಚೇರಿಯನ್ನು ಬಾಂಬಿಟ್ಟು ಸ್ಫೋಟಿಸುವುದಾಗಿ ಬೆದರಿಕೆ ಒಡ್ಡಿದ್ದ.
ಕರೆಯನ್ನು ಆಧರಿಸಿ ತನಿಖೆ ನಡೆಸಿದ್ದ ಪೊಲೀಸರು ಹಿಂಡಲಗಾ ಜೈಲಿನಿಂದ ಕರೆ ಹೋಗಿದ್ದನ್ನು ಪತ್ತೆ ಮಾಡಿದ್ದರು. ಅಲ್ಲದೆ, ಜಯೇಶ್ ಪೂಜಾರಿಯನ್ನು ಈ ಕುರಿತ ಸಂಶಯದಿಂದ ತನಿಖೆ ನಡೆಸಿ ಮರಳಿ ಜೈಲಿಗೆ ಬಿಟ್ಟಿದ್ದರು. ಆನಂತರ, ಮಾರ್ಚ್ 21ರಂದು ನಾಗಪುರದ ಸಚಿವ ಗಡ್ಕರಿಯವರ ಜನಸಂಪರ್ಕ ಕಚೇರಿಗೆ ಮತ್ತೆ ಜೀವ ಬೆದರಿಕೆ ಕರೆ ಬಂದಿದ್ದು ಕರೆ ಮಾಡಿದ್ದ ವ್ಯಕ್ತಿ 10 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದ. ಕರೆಯ ಜಾಡು ಹಿಡಿದು ಬಂದ ಮಹಾರಾಷ್ಟ್ರ ಪೊಲೀಸರು ಮಾರ್ಚ್ 28ರಂದು ಜಯೇಶ್ ಪೂಜಾರಿಯನ್ನು ಕಸ್ಟಡಿಗೆ ಪಡೆದಿದ್ದಾರೆ. ತನಿಖೆ ಸಂದರ್ಭದಲ್ಲಿ ಅಫ್ಸರ್ ಪಾಶ ಜೊತೆ ಆರೋಪಿಗೆ ಲಿಂಕ್ ಇರುವುದು ಪತ್ತೆಯಾಗಿದ್ದರಿಂದ ಆ ನಿಟ್ಟಿನಲ್ಲಿ ತನಿಖೆ ಸಾಗಿದೆ. ಸದ್ಯದಲ್ಲೇ ಪ್ರಕರಣದ ಬಗ್ಗೆ ಪೊಲೀಸರು ಕೋರ್ಟಿಗೆ ಚಾರ್ಜ್ ಶೀಟ್ ಹಾಕಲಿದ್ದಾರೆ.
Police in Maharashtra's Nagpur have found links between Jayesh Pujari, arrested for allegedly making threatening phone calls to Union Minister Nitin Gadkari earlier this year, and Afsar Pasha, who is currently in jail in Karnataka after being convicted in a Bengaluru terror attack case, an official said.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm