ಬ್ರೇಕಿಂಗ್ ನ್ಯೂಸ್
18-07-23 08:41 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 18: ಲೋಕಸಭಾ ಚುನಾವಣೆ ಗಮನದಲ್ಲಿಟ್ಟು ಬಿಜೆಪಿ ವಿರೋಧಿ 26 ವಿಪಕ್ಷಗಳು ಮಹಾಘಟಬಂಧನ್ ಸಭೆಯನ್ನು ಬೆಂಗಳೂರಿನಲ್ಲಿ ಎರಡು ದಿನ ನಡೆಸಿದ್ದು ಪ್ರಧಾನಿ ನರೇಂದ್ರ ಮೋದಿಯನ್ನು ಸೋಲಿಸುವ ಬಗ್ಗೆ ಮಹತ್ವದ ಚರ್ಚೆ ನಡೆಸಿವೆ. ಸಭೆಯ ಬಳಿಕ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹೊಸ ಒಕ್ಕೂಟಕ್ಕೆ ಇಂಡಿಯಾ ಎನ್ನುವ ಹೆಸರಿಡಲಾಗಿದೆ ಎಂದು ತಿಳಿಸಿದ್ದಾರೆ. ಇಂಡಿಯಾ ಅನ್ನೋ ಹೆಸರೇ ನಮ್ಮ ಮೊದಲ ಜಯ. ನರೇಂದ್ರ ಮೋದಿ ಸಾಧ್ಯವಾದರೆ 'ಇಂಡಿಯಾ'ವನ್ನು ಎದುರಿಸಲಿ ಎಂದು ಸವಾಲು ಹಾಕಿದ್ದಾರೆ.
INDIA ಎಂದರೆ ಇಂಡಿಯನ್ ನ್ಯಾಶನಲ್ ಡೆವಲಪ್ಮೆಂಟ್ ಇಂಕ್ಲೂಸಿವ್ ಎಲಯನ್ಸ್ ಎಂದು ಖರ್ಗೆ ಹೇಳಿದ್ದಾರೆ. ಈ ಹಿಂದೆ ಯುಪಿಎ ಹೆಸರಲ್ಲಿ ಕಾಂಗ್ರೆಸ್ ನೇತೃತ್ವದ ಒಕ್ಕೂಟ ಇತ್ತು. ಅದನ್ನೀಗ ದೇಶವೇ ನಮಗೆ ದೊಡ್ಡದು ಎನ್ನುವ ರೀತಿ ತೋರಿಸುವ ಸಲುವಾಗಿ ಇಂಡಿಯಾ ಹೆಸರಿಡಲು ವಿಪಕ್ಷಗಳು ನಿರ್ಣಯಕ್ಕೆ ಬಂದಿವೆ.


ನೀವು ಇಂಡಿಯಾಗೆ ಸವಾಲು ಹಾಕಬಹುದೇ ?
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತನಾಡಿ, ಎನ್ಡಿಎ ಮಿತ್ರ ಪಕ್ಷಗಳೇ, ನೀವು ಇಂಡಿಯಾ (ಐಎನ್ಡಿಐಎ)ಗೆ ಸವಾಲು ಹಾಕಬಹುದೇ? ಬಿಜೆಪಿಯವರು ಇಂಡಿಯಾಗೆ ಚಾಲೆಂಜ್ ಮಾಡುತ್ತೀರಾ? ನಾವು ನಮ್ಮ ತಾಯ್ನಾಡನ್ನು ಪ್ರೀತಿಸುತ್ತೇವೆ. ಭವಿಷ್ಯದಲ್ಲಿಯೂ ನಿಮ್ಮ ಜೊತೆಗಿದ್ದೇವೆ. ರೈತರ ಜೊತೆಗಿದ್ದೇವೆ, ಪೊಲೀಸರ ಜೊತೆಗಿದ್ದೇವೆ. ದೇಶದ ಜೊತೆಗಿದ್ದೇವೆ ಎಂದು ಇದೇ ವೇಳೆ ಮಾರ್ಮಿಕ ಮಾತುಗಳನ್ನು ಆಡಿದ್ದಾರೆ.

ಮುಂದಿನ ಸಭೆ ಮುಂಬೈನಲ್ಲಿ ; ಠಾಕ್ರೆ
ನಾವು ದೇಶವನ್ನು ಸುರಕ್ಷಿತವಾಗಿ ಇಡಲು ಬಯಸುತ್ತೇವೆ. ಮುಂದಿನ ಸಭೆಯನ್ನು ಆಗಸ್ಟ್ 6ರಂದು ಮುಂಬೈನಲ್ಲಿ ಮಾಡುತ್ತೇವೆ ಎಂದು ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ.


ಇವತ್ತಿನ ಸಭೆಯಲ್ಲಿ ಮಹತ್ವದ ಚರ್ಚೆ ಆಗಿದೆ. ದೇಶದ ಮೇಲೆ ಆಕ್ರಮಣ ಮಾಡಲಾಗುತ್ತಿದೆ. ಬಿಜೆಪಿಯವರು ದೇಶವನ್ನು ಮಾರುತ್ತಿದ್ದಾರೆ, ಹಣವನ್ನು ಕೊಳ್ಳೆ ಹೊಡೆಯುತ್ತಿದ್ದಾರೆ. ದೇಶದ ಧ್ವನಿಯನ್ನು ಅಡಗಿಸುತ್ತಿರುವವರ ಜೊತೆಗೆ ಹೋರಾಟ ಮಾಡುತ್ತಿದ್ದೇವೆ. ದೇಶಕ್ಕಾಗಿ ಮುಂದೇನು ಮಾಡಬೇಕು ಎಂದು ಚರ್ಚಿಸಲು ಮುಂದಿನ ಸಭೆ ಮಾಡಲಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದರು.
26 ಪಕ್ಷಗಳ ನಾಯಕರು ಸಭೆ ಸೇರಿ ಚರ್ಚಿಸಿದ್ದೇವೆ. ದೇಶದಲ್ಲಿ ಎಲ್ಲರೂ ಆತಂಕದಲ್ಲಿದ್ದಾರೆ. ಹೀಗಾಗಿ ನಾವು ಸೇರಿ ದೇಶವನ್ನು ಮುನ್ನಡೆಸಲು ನಿರ್ಧರಿಸಿದ್ದೇವೆ. ಬಿಜೆಪಿಯವರು ದೇಶ ಮಾರುವ ಒಪ್ಪಂದ ಮಾಡಿದ್ದಾರೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
The day 2 of the Opposition parties meeting in Bengaluru has made an important decision regarding the renaming of UPA (United Progressive Alliance). Reports claim that the UPA will now be renamed 'INDIA' or ‘I.N.D.I.A’, the full-form of which will be ‘Indian National Democratic Inclusive Alliance’.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm