ಬ್ರೇಕಿಂಗ್ ನ್ಯೂಸ್
19-07-23 07:36 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 19: ಬಿಜೆಪಿ ನಾಯಕರ ಧರಣಿಯಿಂದ ವಿಧಾನಸಭೆ ಬುಧವಾರ ರಣರಂಗವಾಗಿ ಬದಲಾಗಿತ್ತು. ಇದೇ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸ್ವಸ್ಥರಾದ ಘಟನೆಯು ನಡೆಯಿತು. ಅಸಭ್ಯ ವರ್ತನೆ ಹಿನ್ನೆಲೆ ಬಿಜೆಪಿಯ 10 ಶಾಸಕರನ್ನು ಸ್ಪೀಕರ್ ಅಮಾನತು ಮಾಡಿದ್ದರಿಂದ ಅಮಾನತುಗೊಂಡ ಶಾಸಕರನ್ನು ಮಾರ್ಷಲ್ಗಳು ಹೊರಹಾಕುತ್ತಿದ್ದಾಗ ಬಸನಗೌಡ ಪಾಟೀಲ್ ಯತ್ನಾಳ್ ಅಸ್ವಸ್ತಗೊಂಡರು.
ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್ ನಿರ್ಣಯ ಖಂಡಿಸಿ ಬಿಜೆಪಿ ಶಾಸಕರು ಧರಣಿ ಕುಳಿತಿದ್ದರು. ಈ ವೇಳೆ ಮಾರ್ಷಲ್ಗಳು ಅಮಾನತುಗೊಂಡ ಶಾಸಕರನ್ನು ಹೊತ್ತೊಯ್ಯಲು ಪ್ರಯತ್ನಿಸಿದರು. ವಿಧಾನಸೌಧದಲ್ಲಿ ತಳ್ಳಾಟ, ನೂಕಾಟ ನಡೆಯಿತು. ಈ ವೇಳೆ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಿಪಿ ಹೆಚ್ಚಾಗಿ ಅಸ್ವಸ್ಥರಾದರು. ಬಳಿಕ ಯತ್ನಾಳ್ ಅವರನ್ನು ವೀಲ್ ಚೇರ್ ಮೂಲಕ ಆಂಬುಲೆನ್ಸ್ಗೆ ಸಾಗಿಸಿ ಅಲ್ಲಿಂದ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ವಿಧಾನಸೌಧದಲ್ಲಿ ತಳ್ಳಾಟ ನೂಕಾಟ ನಡೆದು ಪ್ರವೇಶ ದ್ವಾರದ ಬಾಗಿಲಿನ ಗಾಜು ಒಡೆದುಹೋಗಿವೆ.
ಬಿಪಿ ಹಠಾತ್ತನೇ ಹೆಚ್ಚಳ ಆಗಿರುವ ಕಾರಣ ಸುಸ್ತಾಗಿ ಕುಸಿದಿದ್ದಾರೆ. ಅವರಿಗೆ ಶುಗರ್ ಕೂಡ ಇರೋದರಿಂದ ಹೆಚ್ಚಿನ ಕೇರಿಂಗ್ ಅಗತ್ಯವಾಗಿದೆ. ಹೀಗಾಗಿ ಐಸಿಯೂನಲ್ಲಿ ಇಟ್ಟು ಚಿಕಿತ್ಸೆ ಮುಂದುವರೆಸಲಾಗಿದೆ. ಬಸವನಗೌಡ ಪಾಟೀಲ್ ಯತ್ನಾಳ್ ಗೆ ಐಸಿಯೂನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಶಾಸಕರು ಸ್ಪಷ್ಟಪಡಿಸಿದರು.
ಇತ್ತ ಫೋರ್ಟಿಸ್ ಆಸ್ಪತ್ರೆಯ ಬಳಿ ಮಾತನಾಡಿದ ಶಾಸಕ ಅರವಿಂದ ಬೆಲ್ಲದ್, ಶಾಸಕ ಬಸವನಗೌಡ ಯತ್ನಾಳ್ ಆರೋಗ್ಯದಲ್ಲಿ ಸ್ಥಿರತೆ ಇದೆ. ಫೋರ್ಟಿಸ್ ಆಸ್ಪತ್ರೆಯ ಹಿರಿಯ ವೈದ್ಯರಿಂದ ಯತ್ನಾಳ್ ಆರೋಗ್ಯ ತಪಾಸಣೆ ನಡೆದಿದೆ. ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ, ಸ್ವಲ್ಪ ಬಿಪಿ ಹೆಚ್ಚಳ ಆಗಿದೆ ಅಷ್ಟೇ. ಮಾರ್ಷಲ್ ಗಳ ತಳ್ಳಾಟ ನೂಕಾಟದಲ್ಲಿ ದೈಹಿಕ ಒತ್ತಡ ಬಿದ್ದಿದೆ. ಸದ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ ಅಂತ ವೈದ್ಯರು ಹೇಳಿದ್ದಾರೆ ಎಂದು ಹೇಳಿದರು.
After the commotion outside the Karnataka Assembly, BJP MLA Basangouda Patil Yatnal experienced a loss of consciousness. He has been promptly transported to the hospital for medical attention.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm