ಬ್ರೇಕಿಂಗ್ ನ್ಯೂಸ್
19-07-23 07:36 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 19: ಬಿಜೆಪಿ ನಾಯಕರ ಧರಣಿಯಿಂದ ವಿಧಾನಸಭೆ ಬುಧವಾರ ರಣರಂಗವಾಗಿ ಬದಲಾಗಿತ್ತು. ಇದೇ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸ್ವಸ್ಥರಾದ ಘಟನೆಯು ನಡೆಯಿತು. ಅಸಭ್ಯ ವರ್ತನೆ ಹಿನ್ನೆಲೆ ಬಿಜೆಪಿಯ 10 ಶಾಸಕರನ್ನು ಸ್ಪೀಕರ್ ಅಮಾನತು ಮಾಡಿದ್ದರಿಂದ ಅಮಾನತುಗೊಂಡ ಶಾಸಕರನ್ನು ಮಾರ್ಷಲ್ಗಳು ಹೊರಹಾಕುತ್ತಿದ್ದಾಗ ಬಸನಗೌಡ ಪಾಟೀಲ್ ಯತ್ನಾಳ್ ಅಸ್ವಸ್ತಗೊಂಡರು.
ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್ ನಿರ್ಣಯ ಖಂಡಿಸಿ ಬಿಜೆಪಿ ಶಾಸಕರು ಧರಣಿ ಕುಳಿತಿದ್ದರು. ಈ ವೇಳೆ ಮಾರ್ಷಲ್ಗಳು ಅಮಾನತುಗೊಂಡ ಶಾಸಕರನ್ನು ಹೊತ್ತೊಯ್ಯಲು ಪ್ರಯತ್ನಿಸಿದರು. ವಿಧಾನಸೌಧದಲ್ಲಿ ತಳ್ಳಾಟ, ನೂಕಾಟ ನಡೆಯಿತು. ಈ ವೇಳೆ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಿಪಿ ಹೆಚ್ಚಾಗಿ ಅಸ್ವಸ್ಥರಾದರು. ಬಳಿಕ ಯತ್ನಾಳ್ ಅವರನ್ನು ವೀಲ್ ಚೇರ್ ಮೂಲಕ ಆಂಬುಲೆನ್ಸ್ಗೆ ಸಾಗಿಸಿ ಅಲ್ಲಿಂದ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ವಿಧಾನಸೌಧದಲ್ಲಿ ತಳ್ಳಾಟ ನೂಕಾಟ ನಡೆದು ಪ್ರವೇಶ ದ್ವಾರದ ಬಾಗಿಲಿನ ಗಾಜು ಒಡೆದುಹೋಗಿವೆ.
ಬಿಪಿ ಹಠಾತ್ತನೇ ಹೆಚ್ಚಳ ಆಗಿರುವ ಕಾರಣ ಸುಸ್ತಾಗಿ ಕುಸಿದಿದ್ದಾರೆ. ಅವರಿಗೆ ಶುಗರ್ ಕೂಡ ಇರೋದರಿಂದ ಹೆಚ್ಚಿನ ಕೇರಿಂಗ್ ಅಗತ್ಯವಾಗಿದೆ. ಹೀಗಾಗಿ ಐಸಿಯೂನಲ್ಲಿ ಇಟ್ಟು ಚಿಕಿತ್ಸೆ ಮುಂದುವರೆಸಲಾಗಿದೆ. ಬಸವನಗೌಡ ಪಾಟೀಲ್ ಯತ್ನಾಳ್ ಗೆ ಐಸಿಯೂನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಶಾಸಕರು ಸ್ಪಷ್ಟಪಡಿಸಿದರು.
ಇತ್ತ ಫೋರ್ಟಿಸ್ ಆಸ್ಪತ್ರೆಯ ಬಳಿ ಮಾತನಾಡಿದ ಶಾಸಕ ಅರವಿಂದ ಬೆಲ್ಲದ್, ಶಾಸಕ ಬಸವನಗೌಡ ಯತ್ನಾಳ್ ಆರೋಗ್ಯದಲ್ಲಿ ಸ್ಥಿರತೆ ಇದೆ. ಫೋರ್ಟಿಸ್ ಆಸ್ಪತ್ರೆಯ ಹಿರಿಯ ವೈದ್ಯರಿಂದ ಯತ್ನಾಳ್ ಆರೋಗ್ಯ ತಪಾಸಣೆ ನಡೆದಿದೆ. ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ, ಸ್ವಲ್ಪ ಬಿಪಿ ಹೆಚ್ಚಳ ಆಗಿದೆ ಅಷ್ಟೇ. ಮಾರ್ಷಲ್ ಗಳ ತಳ್ಳಾಟ ನೂಕಾಟದಲ್ಲಿ ದೈಹಿಕ ಒತ್ತಡ ಬಿದ್ದಿದೆ. ಸದ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ ಅಂತ ವೈದ್ಯರು ಹೇಳಿದ್ದಾರೆ ಎಂದು ಹೇಳಿದರು.
After the commotion outside the Karnataka Assembly, BJP MLA Basangouda Patil Yatnal experienced a loss of consciousness. He has been promptly transported to the hospital for medical attention.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am