ಬ್ರೇಕಿಂಗ್ ನ್ಯೂಸ್
19-07-23 08:06 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 19: ಬಿಜೆಪಿ ರೌಡಿತನಕ್ಕೆ ನಾವು ಹೆದರಲ್ಲ. ಅಸಭ್ಯವಾಗಿ, ಅನಾಗರಿಕವಾಗಿ ನಡೆದುಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ವಿಧಾನಸಭೆಯಲ್ಲಿ ಬಿಜೆಪಿ ಧರಣಿ ಹಾಗೂ ಸ್ಪೀಕರ್ ಪೀಠಕ್ಕೆ ಅಗೌರವ ಮಾಡಿದ ವಿಚಾರವಾಗಿ ಮಾತನಾಡಿದ ಅವರು, " ಬೇರೆ ರಾಜ್ಯದ ನಾಯಕರನ್ನು ಗೌರವಿಸೋದು ಪರಂಪರೆ ಅಲ್ವಾ? ಮೊದಲಿಂದಲೂ ನಡೆದುಕೊಂಡು ಬಂದಿರುವ ಪದ್ದತಿ ಇದು. ವಿಪಕ್ಷ ನಾಯಕರನ್ನು ಕರೆದುಕೊಂಡು ಬರೋದಕ್ಕೆ ಐಎಎಸ್ ಅಧಿಕಾರಿಗಳನ್ನು ನಿಯೋಜನೆ ಮಾಡಿದ್ದು ಅಷ್ಟೇ.
ಇದಕ್ಕೆ ಇಡೀ ದಿನ ರಂಪ ಮಾಡಿದ್ದಾರೆ " ಎಂದರು. ಡೆಪ್ಯುಟಿ ಸ್ಪೀಕರ್ ಮುಖಕ್ಕೆ ಪೇಪರ್ ಎಸೆದಿದ್ದಾರೆ. ಬಹಳ ಅಸಭ್ಯವಾಗಿ ನಡೆದುಕೊಂಡಿದ್ದಾರೆ. ಅನಾಗರಿಕವಾಗಿ ನಡೆದುಕೊಂಡಿದ್ದಾರೆ. ವಿರೋಧ ಪಕ್ಷವಾಗಿರುವಾಗ ಬಹಳ ಗೌರವಯುತವಾಗಿ ನಡೆದುಕೊಳ್ಳಬೇಕು. ನಾವು ಹಿಂದೆ ವಿಪಕ್ಷದ ಸ್ಥಾನದಲ್ಲಿದ್ದಾಗ ಗೌರವಯುತವಾಗಿ ನಡೆದುಕೊಂಡಿದ್ದೇವೆ ಎಂದು ಹೇಳಿದರು.
ಅಂಬೇಡ್ಕರ್, ಬುದ್ದ, ಬಸವ ಮುಂತಾದ ಮಹನೀಯರ ಪ್ರಜಾಪ್ರಭುತ್ವವಾದಿ ಮೌಲ್ಯಗಳ ಮುಂದುವರೆದ ಪರಂಪರೆಯ ಪ್ರಾತಿನಿಧಿಕ ಸಂಸ್ಥೆಯಾಗಿದ್ದ ವಿಧಾನಸಭೆಗೆ ಅಗೌರವ ಸಲ್ಲಿಸಿದ್ದಾರೆ. ಪ್ರಜಾಪ್ರಭುತ್ವ ಮಾದರಿಯಲ್ಲಿ ಮತ್ತು ಸದನದ ನಿಯಮಾವಳಿಗಳ ಆಧಾರದಲ್ಲಿ ಪ್ರತಿಭಟನೆ ನಡೆಸಲು ಬಿಜೆಪಿಯವರಿಗೆ ಅವಕಾಶ ಇತ್ತು. ಆದರೆ ಸ್ಪೀಕರ್ ಮುಖಕ್ಕೆ ಪತ್ರ ಎಸೆಯುವುದು, ಸ್ಪೀಕರ್ ಪೀಠಕ್ಕೆ ಎಸೆಯುವುದು, ಅವಮಾನ ಮಾಡುವುದು ನಿಯಮ ಬಾಹಿರ. ಇದು ಅನಾಗರೀಕ ನಡವಳಿಕೆಯಲ್ಲವೇ ಎಂದು ಪ್ರಶ್ನಿಸಿದರು.
ಬಿಜೆಪಿಯವರಿಗೆ ಗ್ಯಾರಂಟಿಗಳನ್ನು ತಡೆದುಕೊಳ್ಳಕೆ ಆಗ್ತಿಲ್ಲ ನಾವು ಐದು ಗ್ಯಾರಂಟಿಗಳನ್ನು ಕೊಟ್ಟಿರೋದೇ ಅವರಿಗೆ ತಡೆದುಕೊಳ್ಳೋಕೆ ಆಗ್ತಿಲ್ಲ. ಬಿಜೆಪಿಯವರು ಬಹಳ ಹತಾಶರಾಗಿದ್ದಾರೆ. ಕೊಟ್ಟ ಮಾತಿನ ವೇಳೆ ಅವರು ನಡೆದುಕೊಳ್ಳೋರು ಅಲ್ಲ. ಆದರೆ ನಾವು ಕಾಯಕವೇ ಕೈಲಾಸದಂತೆ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ಜನರು ಖುಷಿಯಾಗಿದ್ದಾರೆ, ಇವರಿಗೆ ತಡೆದುಕೊಳ್ಳೋಕೆ ಆಗ್ತಿಲ್ಲ ಎಂದು ಕಿಡಿಕಾರಿದರು.
ಇವರ ಯೋಗ್ಯತೆಗೆ ವಿರೋಧ ಪಕ್ಷದ ನಾಯಕ ಆಯ್ಕೆ ಮಾಡಕ್ಕಾಗಿಲ್ಲ ;
ಇವರ ಯೋಗ್ಯತೆ ಒಬ್ಬ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳೋಕೆ ಆಗಿಲ್ಲ. ಬಜೆಟ್ ಮೇಲೆ ಚರ್ಚೆ ನಡೀತ್ತಿದೆ, ವಿಪಕ್ಷ ನಾಯಕ ಇಲ್ಲ ಅಂದರೆ ಇದು ಪ್ರಜಾಪ್ರಭುತ್ವ , ಸಂವಿಧಾನ ವಿರೋಧಿ ಅಲ್ವಾ? ಬಿಜೆಪಿಯವರಿಗೆ ಯೋಗ್ಯತೆ ಇಲ್ಲ. ಯೋಗ್ಯತೆ ಇಲ್ಲದೇ ಇರೋದು ಪಾಠ ಹೇಳಿಕೊಡೋಕೆ ಬರುತ್ತಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.
Siddaramaiah CM Angry over BJP rowdyism inside assembly. They are not even cable of even selecting opposition leader so far he added.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm