ಬ್ರೇಕಿಂಗ್ ನ್ಯೂಸ್
21-07-23 08:18 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 21: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಹೋರಾಟ ನಡೆಸಲು ಬಿಜೆಪಿ ಮತ್ತು ಜೆಡಿಎಸ್ ನಿರ್ಧಾರ ಮಾಡಿವೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಎಚ್.ಡಿ ಕುಮಾರಸ್ವಾಮಿ ಶುಕ್ರವಾರ ಜಂಟಿಯಾಗಿ ಹೇಳಿಕೆ ನೀಡಿದ್ದಾರೆ.
ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ ಅವರು, ರಾಜ್ಯ ಸರ್ಕಾರದ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಸದನದ ಒಳಗೆ ಮತ್ತು ಹೊರಗೆ ನಾನು ಮತ್ತು ಬೊಮ್ಮಾಯಿ ಒಟ್ಟಾಗಿ ಹೋರಾಟ ಮಾಡುತ್ತೇವೆ ಎಂದಿದ್ದಾರೆ. ನಾನು ವಿರೋಧ ಪಕ್ಷದಲ್ಲಿದ್ದೇನೆ, ಬೊಮ್ಮಾಯಿ ಅವರೂ ಜೊತೆಗೆ ಇದ್ದಾರೆ. ನಾಡಿನ ಹಿತಾಸಕ್ತಿ ಕಾಪಾಡುವ ಸಲುವಾಗಿ ಹೋರಾಟ ಮಾಡಲು ನಾವು ಒಗ್ಗಟ್ಟಾಗಿ ಹೋಗುತ್ತಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.


ಜೆಡಿಎಸ್ ಮತ್ತು ಬಿಜೆಪಿ ಎರಡೂ ವಿರೋಧ ಪಕ್ಷಗಳಾಗಿದ್ದು, ಒಟ್ಟಾಗಿ ಕೆಲಸ ಮಾಡುವ ನಿರ್ಧಾರ ಆಗಿದೆ. ಎಲ್ಲರ ಅಭಿಪ್ರಾಯ ಪಡೆದು ಪಕ್ಷದ ಸಂಘಟನೆಗೆ 10 ಜನರ ತಂಡ ರಚನೆ ಮಾಡಲಾಗಿದೆ. ಇಡೀ ರಾಜ್ಯದಲ್ಲಿ ಸರ್ಕಾರದ ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಧ್ವನಿ ಎತ್ತುವಂತೆ ದೇವಗೌಡರು ಸಂದೇಶ ನೀಡಿದ್ದಾರೆ. ದೇವೇಗೌಡರ ಮಾರ್ಗದರ್ಶನ, ಪಕ್ಷ ಸಂಘಟನೆ ಮೂಲಕ ತಂಡ ರಚನೆ ಮಾಡಲಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿ ಏರ್ಪಡುತ್ತದೆ ಎನ್ನುವುದು ಈಗಾಗಲೇ ಕೇಳಿಬರುತ್ತಿರುವ ಮಾತು. ಆದರೆ ಈ ಬಗ್ಗೆ ಅಧಿಕೃತ ನಿರ್ಣಯ ಹೊರಬೀಳದಿದ್ದರೂ ವಿಧಾನಸಭೆ ಅಧಿವೇಶನದಲ್ಲಿ ಜೊತೆ ಜೊತೆಗೆ ಕಾಂಗ್ರೆಸ್ ವಿರುದ್ಧ ಹೋರಾಟ ಕೈಗೆತ್ತಿಕೊಂಡಿರುವುದು ಎರಡು ಪಕ್ಷಗಳು ಮೈತ್ರಿಗೆ ಮುಂದಾಗಿರುವ ಸುಳಿವು ಎನ್ನಲಾಗುತ್ತಿದೆ. ಬಿಜೆಪಿ ಜೊತೆಗೆ ಜೆಡಿಎಸ್ ವಿಲೀನ ಅಥವಾ ಮೈತ್ರಿಗೆ ಮುಂದಾದರೆ ವಿಪಕ್ಷ ನಾಯಕ ಸ್ಥಾನವನ್ನೇ ಕುಮಾರಸ್ವಾಮಿಗೆ ಬಿಟ್ಟು ಕೊಡಲು ಬಿಜೆಪಿ ಹೈಕಮಾಂಡ್ ನಾಯಕರು ಮುಂದಾಗಿದ್ದಾರೆ. ಇದರ ನಡುವಲ್ಲೇ ವಿಧಾನಸಭೆ ಅಧಿವೇಶನ ಕೊನೆಗೊಳ್ಳುವ ಸಂದರ್ಭದಲ್ಲೇ ಎರಡು ಪಕ್ಷಗಳ ಪ್ರಮುಖ ನಾಯಕರು ಜೊತೆಗೂಡಿ ಸುದ್ದಿಗೋಷ್ಟಿ ನಡೆಸಿರುವುದು ಕುತೂಹಲ ಮೂಡಿದೆ.
Former Chief Minister HD Kumaraswamy said that it is ironic that the state Congress government led the budget session when the opposition was out. He spoke at a joint press conference with former CM Basavaraja Bommai at his office in Vidhansouda.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am