ಬ್ರೇಕಿಂಗ್ ನ್ಯೂಸ್
04-11-20 05:29 pm Bangalore Correspondent ಕರ್ನಾಟಕ
ಮೈಸೂರು, ನವೆಂಬರ್ 4: ಉಪ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲಿದೆ, ದೆಹಲಿ ಬಿಜೆಪಿ ನಾಯಕರು ಯಡಿಯೂರಪ್ಪ ಅವರನ್ನು ಬದಲಾಯಿಸಲು ನಿರ್ಧರಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ಆಗುವುದು ಖಂಡಿತ. ಈ ಬಗ್ಗೆ ನನಗೆ ಖಚಿತ ವಿಶ್ವಾಸವಿದೆ. ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯೋದಿಲ್ಲ. ನನಗೆ ದೆಹಲಿಯಿಂದ ಬಂದಿರುವ ಮಾಹಿತಿ ಆಧಾರದ ಮೇಲೆ ಹೇಳುತ್ತಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ ಬದಲಾವಣೆಗೆ, ನಾನು ಯಡಿಯೂರಪ್ಪ ಮೇಲೆ ಭ್ರಷ್ಟಾಚಾರ ಆರೋಪ ಮಾಡಿದ್ದು ಕಾರಣ ಇದ್ದಿರಬಹುದು. ಹಲವು ದಿನಗಳಿಂದ ಸಿಎಂ ಬದಲಾವಣೆ ಮಾಡುವ ಚಿಂತನೆಯಲ್ಲಿ ಬಿಜೆಪಿ ಇದೆ. ಹಾಗಾಗಿ ಉಪ ಚುನಾವಣೆ ಫಲಿತಾಂಶದ ನಂತರ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಉಪ ಚುನಾವಣೆ ನಡೆದ ಶಿರಾ ಮತ್ತು ಆರ್.ಆರ್. ನಗರ ಕ್ಷೇತ್ರದ ಎರಡರಲ್ಲೂ ಕಾಂಗ್ರೆಸ್ ಗೆಲ್ಲಲಿದೆ. ಶಿರಾದಲ್ಲಿ ಕಳೆದ ಬಾರಿ ಅಪಪ್ರಚಾರ ಆಗಿತ್ತು. ಆರ್.ಆರ್ ನಗರದಲ್ಲಿ ಕಾಂಗ್ರೆಸ್ ಗೆದ್ದಿತ್ತು. ಈ ಬಾರಿಯೂ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಪರವಾದ ಅಲೆ ಕಂಡುಬಂದಿದ್ದು ಕಾಂಗ್ರೆಸ್ಸೇ ಗೆಲ್ಲಲಿದೆ ಎಂದಿದ್ದಾರೆ.
ರಾಜ್ಯ ಸರಕಾರ ಶಾಲೆ ಆರಂಭಿಸುವ ಚಿಂತನೆ ಮಾಡಿರುವ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಈ ವರ್ಷ ಶಾಲೆಗಳನ್ನು ಆರಂಭಿಸೋದು ಬೇಡ. ಇದು ಸರಕಾರಕ್ಕೆ ನನ್ನ ನೀಡುತ್ತಿರುವ ವೈಯಕ್ತಿಕ ಸಲಹೆ. ಈ ವರ್ಷ ಆನ್ ಲೈನ್ ಕ್ಲಾಸ್ ಮಾಡಿ ಎಲ್ಲರನ್ನೂ ಪಾಸ್ ಮಾಡಲಿ. ಸಂಪೂರ್ಣ ಕೊರೊನಾ ಮುಕ್ತವಾದ ಬಳಿಕ ಶಾಲೆ ಆರಂಭಿಸಿದರೆ ಸಾಕು ಎಂದು ಸಿದ್ದರಾಮಯ್ಯ ಸಲಹೆ ಮಾಡಿದ್ದಾರೆ.
After the By-Elections of R R Nagar, the Chief Minister of Karnataka BS Yeddyurappa will anymore not be the cm but Karnataka will see a new cm predicts Congress leader Siddaramaiah.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm