ಬ್ರೇಕಿಂಗ್ ನ್ಯೂಸ್
04-11-20 06:09 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 04: ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಕ್ಕೀಡಾಗಿದ್ದ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಹೈಕೋರ್ಟ್ ಕ್ಲೀನ್ ಚಿಟ್ ನೀಡಿದೆ.
ಪ್ರಕರಣದಲ್ಲಿ ಜಾರ್ಜ್ ಪಾತ್ರವಿಲ್ಲ ಎಂದಿರುವ ಹೈಕೋರ್ಟ್, ಆ ಕುರಿತು ಸಲ್ಲಿಕೆಯಾಗಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದೆ. ಪ್ರಕರಣದ ಬಗ್ಗೆ ತನಿಖೆ ನಡೆಸಿದ್ದ ಸಿಬಿಐ ಮತ್ತು ಸಿಐಡಿ ತನಿಖಾ ತಂಡಗಳು ಜಾರ್ಜ್ ಬಗ್ಗೆ ಕ್ಲೀನ್ ಚಿಟ್ ನೀಡಿತ್ತು. ಅಲ್ಲದೆ, ಪ್ರಕರಣದಲ್ಲಿ ಜಾರ್ಜ್ ಪಾತ್ರವಿಲ್ಲ ಎಂದು ತನಿಖಾ ತಂಡಗಳು ನೀಡಿದ್ದ ಬಿ ರಿಪೋರ್ಟನ್ನು ಜಾರ್ಜ್ ಹೈಕೋರ್ಟಿಗೆ ಸಲ್ಲಿಸಿದ್ದಾರೆ. ಇದನ್ನು ಪುರಸ್ಕರಿಸಿದ ಹೈಕೋರ್ಟ್, ಪ್ರತಿವಾದಿಗಳ ಅರ್ಜಿಯನ್ನು ತಳ್ಳಿಹಾಕಿದೆ.

ಮಂಗಳೂರಿನ ಐಜಿ ಕಚೇರಿಯಲ್ಲಿ ಡಿವೈಎಸ್ಪಿ ಆಗಿದ್ದ ಗಣಪತಿ 2016, ಜುಲೈ 17ರಂದು ಮಡಿಕೇರಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿನ ಬಗ್ಗೆ ಭಾರೀ ಶಂಕೆ ವ್ಯಕ್ತವಾಗಿತ್ತು. ಅಲ್ಲದೆ, ಸಾವಿಗೂ ಮುನ್ನ ಗಣಪತಿ, ಮಡಿಕೇರಿಯಲ್ಲಿ ಸ್ಥಳೀಯ ಸುದ್ದಿ ವಾಹಿನಿಗೆ ಸಂದರ್ಶನ ನೀಡಿ, ತನಗೆ ಗೃಹ ಸಚಿವ ಕೆ.ಜೆ. ಜಾರ್ಜ್, ಹಿರಿಯ ಅಧಿಕಾರಿಗಳಾದ ಪ್ರಣವ್ ಮೊಹಂತಿ ಹಾಗೂ ಎ.ಎಂ. ಪ್ರಸಾದ್ ಕಿರುಕುಳ ನೀಡುತ್ತಿದ್ದಾರೆ. ತಾನು ಸಾವನ್ನಪ್ಪಿದರೆ ಅದಕ್ಕೆ ಅವರೇ ಹೊಣೆ ಎಂದು ಹೇಳಿಕೆ ನೀಡಿದ್ದರು. ಅದೇ ದಿನ ಸಂಜೆ ಗಣಪತಿ ಮಡಿಕೇರಿಯ ಲಾಡ್ಜ್ ನಲ್ಲಿ ನಿಗೂಢ ಸಾವು ಕಂಡಿದ್ದರು. ಪ್ರಕರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತಲ್ಲದೆ ಮಂಗಳೂರಿನ ಚರ್ಚ್ ದಾಳಿ ಪ್ರಕರಣದ ಹಿನ್ನೆಲೆಯಲ್ಲಿ ಕೆ.ಜೆ. ಜಾರ್ಜ್, ಡಿವೈಎಸ್ಪಿ ಗಣಪತಿಗೆ ಕಿರುಕುಳ ನೀಡುತ್ತಿದ್ದರೇ ಎಂಬ ಅನುಮಾನ ಕೇಳಿಬಂದಿತ್ತು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm