ಬ್ರೇಕಿಂಗ್ ನ್ಯೂಸ್
29-07-23 06:34 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 29: ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುವವರು ಎಂದು ಕಿಡಿಕಾರಿದರು.
ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಫ್ಐ ಆರ್ ದಾಖಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ. ಈ ಬಗ್ಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದರು.
![]()
ಉಡುಪಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿಯ ವಿಡಿಯೋ ಚಿತ್ರೀಕರಣ ಪ್ರಕರಣ ರಾಜ್ಯಾದ್ಯಂತ ಸಾಕಷ್ಟು ಸದ್ದು ಮಾಡುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸುತ್ತಿದೆ.
/newsdrum-in/media/media_files/FYRH0xdQouTVCGgObbxj.jpg)
ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿನಿಯರ ವಿರುದ್ಧ ಈಗಾಗಲೇ ಪ್ರಕರಣ ದಾಖಲು ಮಾಡಲಾಗಿದೆ. ಈ ನಡುವೆ ಕೇಂದ್ರ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಉಡುಪಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆದರೆ ಶೌಚಾಲಯದಲ್ಲಿ ಗುಪ್ತ ಕ್ಯಾಮೆರಾವನ್ನು ಅಳವಡಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆದರೆ ಮತ್ತೊಂದು ಕಡೆಯಲ್ಲಿ ಉಡುಪಿ ಘಟನೆಯನ್ನು ಎನ್ಐಎಗೆ ನೀಡುವಂತೆ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.
ಜುಲೈ 18ರಂದು ಘಟನೆ ಬೆಳಕಿಗೆ ಬಂದಿದೆ. ಬಿಜೆಪಿ ಪ್ರತಿಭಟನೆ ಬಳಿಕ 26ರಂದು ಎಫ್ಐಆರ್ ಮಾಡಿದ್ದಾರೆ. ಅಗೆದಷ್ಟೂ ವಿಚಾರ ಆಳಕ್ಕೆ ಹೋಗುತ್ತಿದೆ. ಈ ಥರದ ಘಟನೆ ಆರೇಳು ತಿಂಗಳಿಂದ ನಡೆಯುತ್ತಿದೆ ಎಂದು ಕಾಲೇಜು ವಿದ್ಯಾರ್ಥಿನಿಯರೇ ಹೇಳುತ್ತಿದ್ದಾರೆ. ಇದರ ಹಿಂದೆ ದೊಡ್ಡ ಜಾಲ ಇದೆ ಎಂದು ಆರೋಪಿಸಿದರು. ಅದು ಪಿಎಫ್ಐ ಇದೆಯೋ, ಜಿಹಾದಿ ಸಂಘಟನೆಗಳಿವೆಯೇ?- ಇದರ ಬಗ್ಗೆ ತನಿಖೆ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಆಗ್ರಹಿಸಿದ್ದಾರೆ.

ವಿಡಿಯೋ ರೆಕಾರ್ಡ್ ಆದ ಮೊಬೈಲನ್ನು ಹುಡುಗರು ಒಯ್ಯುತ್ತಿದ್ದರೆಂಬ ಮಾಹಿತಿ ಸಿಕ್ಕಿದೆ. ವಿಡಿಯೋ ಪಡೆಯಲು ಬರುತ್ತಿದ್ದ ಹುಡುಗರು ಯಾರು? ಪಿಎಫ್ಐ ಜಾಲದ ಅನೇಕ ಮಹಿಳೆಯರೂ ಇದರಲ್ಲಿ ಇರುವುದಾಗಿ ಗೊತ್ತಾಗುತ್ತಿದೆ. ಸಮಗ್ರ ತನಿಖೆಗಾಗಿ ಎನ್ಐಎಗೆ ಕೊಡಿ ಎಂಬುವುದು ಬಿಜೆಪಿ ವಾದವಾಗಿದೆ.
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಹೆಣಗಳ ಮೇಲೆ ರಾಜಕಾರಣವನ್ನು ಬಿಜೆಪಿ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
Udupi college video case, CM Siddaramaiah slams BJP with his first reaction, Says we will take action as FIR has bern lodged.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 01:19 pm
HK News Staffer
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am