ಬ್ರೇಕಿಂಗ್ ನ್ಯೂಸ್
02-08-23 04:57 pm HK News Desk ಕರ್ನಾಟಕ
ಶಿವಮೊಗ್ಗ, ಆಗಸ್ಟ್ 2: ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಪ್ರತಿಭಟನೆ ವೇಳೆ ಮಲ್ಲಿಕಾರ್ಜುನ ಖರ್ಗೆಯವರ ಹೆಸರು ಪ್ರಸ್ತಾಪಿಸಿ ಖರ್ಗೆಯವರ ಮೈ ಬಣ್ಣದ ಬಗ್ಗೆ ವ್ಯಂಗ್ಯವಾಡಿ ಪೇಚಿಗೆ ಸಿಲುಕಿದ್ದಾರೆ.
ಆರಗ ಜ್ಞಾನೇಂದ್ರ ಅವರ ಸ್ವಕ್ಷೇತ್ರ ತೀರ್ಥಹಳ್ಳಿಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದನ್ನು ವಿರೋಧಿಸಿ ಸ್ಥಳೀಯ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಆರಗ ಜ್ಞಾನೇಂದ್ರ ಅವರು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಸ್ತೂರಿ ರಂಗನ್ ವರದಿ ಜಾರಿ ಮಾಡಿದರೆ ಮಲೆನಾಡು ಭಾಗಕ್ಕೆ ಆಗಬಹುದಾದ ದುಷ್ಪರಿಣಾಮ ಏನು ಎಂಬ ಬಗ್ಗೆ ಸರ್ಕಾರಕ್ಕೆ ಅರಿವಿರಬೇಕು. ಇದಕ್ಕೆ ಸರಿಯಾಗಿ ಕಾಡಿನ ಬಗ್ಗೆ ಅರಿವೇ ಇರದಂತಹ ಜನಪ್ರತಿನಿಧಿಯನ್ನು ಅರಣ್ಯ ಸಚಿವರನ್ನಾಗಿ ಮಾಡಿದ್ದಾರೆ.

ಅವರಿಗೆಲ್ಲ ಮರ, ಗಿಡ ಎನ್ನುವುದರ ಬಗ್ಗೆ ಗೊತ್ತಿಲ್ಲ. ಮರದ ನೆರಳಿನ ಮಹತ್ವ ಗೊತ್ತಿಲ್ಲ. ಸುಟ್ಟು ಕರಕಲಾದಂತೆ ಇರ್ತಾರೆ. ನಮ್ಮ ಖರ್ಗೆಯವರನ್ನ ನೋಡಿದ್ರೇ ಗೊತ್ತಾಗುತ್ತೆ. ಪಾಪ, ತಲೆ ಕೂದಲು ಮುಚ್ಚಿಕೊಂಡಿದ್ದಕ್ಕೆ ಸ್ವಲ್ಪ ಉಳಿದುಕೊಂಡಿದ್ದಾರೆ. ಅದೇ ನೆರಳು ಅವರಿಗೆ. ಮಲೆನಾಡು ಮತ್ತು ಪಶ್ಚಿಮಘಟ್ಟದ ಬದುಕು ಅವರಿಗೆ ಗೊತ್ತಿಲ್ಲ... ಎನ್ನುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಹೆಸರನ್ನು ಪ್ರಸ್ತಾಪಿಸಿಯೇ ಅವರ ಬಣ್ಣದ ಬಗ್ಗೆ ವ್ಯಂಗ್ಯದ ಮಾತನ್ನಾಡಿದ್ದಾರೆ.
ಮಾಜಿ ಗೃಹ ಸಚಿವರಾಗಿರುವ ಆರಗ ಜ್ಞಾನೇಂದ್ರ ಅವರು, ಪರಿಶಿಷ್ಟ ಜಾತಿಗೆ ಸೇರಿದ ಮಲ್ಲಿಕಾರ್ಜುನ ಖರ್ಗೆಯವರನ್ನು ಅನಗತ್ಯವಾಗಿ ಟೀಕಿಸಿದ್ದು ಪೇಚಿಗೆ ಸಿಲುಕುವಂತಾಗಿದೆ. ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದು ಈ ರೀತಿಯ ಹೇಳಿಕೆ ಕೊಟ್ಟವರನ್ನು ನಿಮ್ಹಾನ್ಸ್ ಸೇರಿಸಬೇಕೆಂದು ಹೇಳಿದ್ದಾರೆ.
Former Home Minister and senior BJP leader Araga Jnanendra has made an objectionable comment on All India Congress Committee (AICC) president Mallikarjun Kharge during a protest against Forest Minister Eshwar Khandre for his statement on the K. Kasturirangan report.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 01:19 pm
HK News Staffer
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am