ಬ್ರೇಕಿಂಗ್ ನ್ಯೂಸ್
02-08-23 04:57 pm HK News Desk ಕರ್ನಾಟಕ
ಶಿವಮೊಗ್ಗ, ಆಗಸ್ಟ್ 2: ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಪ್ರತಿಭಟನೆ ವೇಳೆ ಮಲ್ಲಿಕಾರ್ಜುನ ಖರ್ಗೆಯವರ ಹೆಸರು ಪ್ರಸ್ತಾಪಿಸಿ ಖರ್ಗೆಯವರ ಮೈ ಬಣ್ಣದ ಬಗ್ಗೆ ವ್ಯಂಗ್ಯವಾಡಿ ಪೇಚಿಗೆ ಸಿಲುಕಿದ್ದಾರೆ.
ಆರಗ ಜ್ಞಾನೇಂದ್ರ ಅವರ ಸ್ವಕ್ಷೇತ್ರ ತೀರ್ಥಹಳ್ಳಿಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದನ್ನು ವಿರೋಧಿಸಿ ಸ್ಥಳೀಯ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಆರಗ ಜ್ಞಾನೇಂದ್ರ ಅವರು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಸ್ತೂರಿ ರಂಗನ್ ವರದಿ ಜಾರಿ ಮಾಡಿದರೆ ಮಲೆನಾಡು ಭಾಗಕ್ಕೆ ಆಗಬಹುದಾದ ದುಷ್ಪರಿಣಾಮ ಏನು ಎಂಬ ಬಗ್ಗೆ ಸರ್ಕಾರಕ್ಕೆ ಅರಿವಿರಬೇಕು. ಇದಕ್ಕೆ ಸರಿಯಾಗಿ ಕಾಡಿನ ಬಗ್ಗೆ ಅರಿವೇ ಇರದಂತಹ ಜನಪ್ರತಿನಿಧಿಯನ್ನು ಅರಣ್ಯ ಸಚಿವರನ್ನಾಗಿ ಮಾಡಿದ್ದಾರೆ.

ಅವರಿಗೆಲ್ಲ ಮರ, ಗಿಡ ಎನ್ನುವುದರ ಬಗ್ಗೆ ಗೊತ್ತಿಲ್ಲ. ಮರದ ನೆರಳಿನ ಮಹತ್ವ ಗೊತ್ತಿಲ್ಲ. ಸುಟ್ಟು ಕರಕಲಾದಂತೆ ಇರ್ತಾರೆ. ನಮ್ಮ ಖರ್ಗೆಯವರನ್ನ ನೋಡಿದ್ರೇ ಗೊತ್ತಾಗುತ್ತೆ. ಪಾಪ, ತಲೆ ಕೂದಲು ಮುಚ್ಚಿಕೊಂಡಿದ್ದಕ್ಕೆ ಸ್ವಲ್ಪ ಉಳಿದುಕೊಂಡಿದ್ದಾರೆ. ಅದೇ ನೆರಳು ಅವರಿಗೆ. ಮಲೆನಾಡು ಮತ್ತು ಪಶ್ಚಿಮಘಟ್ಟದ ಬದುಕು ಅವರಿಗೆ ಗೊತ್ತಿಲ್ಲ... ಎನ್ನುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಹೆಸರನ್ನು ಪ್ರಸ್ತಾಪಿಸಿಯೇ ಅವರ ಬಣ್ಣದ ಬಗ್ಗೆ ವ್ಯಂಗ್ಯದ ಮಾತನ್ನಾಡಿದ್ದಾರೆ.
ಮಾಜಿ ಗೃಹ ಸಚಿವರಾಗಿರುವ ಆರಗ ಜ್ಞಾನೇಂದ್ರ ಅವರು, ಪರಿಶಿಷ್ಟ ಜಾತಿಗೆ ಸೇರಿದ ಮಲ್ಲಿಕಾರ್ಜುನ ಖರ್ಗೆಯವರನ್ನು ಅನಗತ್ಯವಾಗಿ ಟೀಕಿಸಿದ್ದು ಪೇಚಿಗೆ ಸಿಲುಕುವಂತಾಗಿದೆ. ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದು ಈ ರೀತಿಯ ಹೇಳಿಕೆ ಕೊಟ್ಟವರನ್ನು ನಿಮ್ಹಾನ್ಸ್ ಸೇರಿಸಬೇಕೆಂದು ಹೇಳಿದ್ದಾರೆ.
Former Home Minister and senior BJP leader Araga Jnanendra has made an objectionable comment on All India Congress Committee (AICC) president Mallikarjun Kharge during a protest against Forest Minister Eshwar Khandre for his statement on the K. Kasturirangan report.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm