ಬ್ರೇಕಿಂಗ್ ನ್ಯೂಸ್
02-08-23 11:05 pm HK News Desk ಕರ್ನಾಟಕ
ಕೊಪ್ಪಳ, ಆಗಸ್ಟ್ 2: ದೇವೇಗೌಡರು, ಎಸ್.ಆರ್ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾಗ ಮಿನಿಸ್ಟರ್ ಆಗಿದ್ದವನು ನಾನು. ಆಗ ಈ ಕುಮಾರಸ್ವಾಮಿ ನನ್ನ ಪಕ್ಕ ನಿಲ್ಲೋದಕ್ಕೂ ಹೆದರುತ್ತಿದ್ದ. ಏನ್ ಮಾಡೋದು ಅವನ ಹಣೆ ಬರಹದಲ್ಲಿ ಬರೆದಿತ್ತು. ಮುಖ್ಯಮಂತ್ರಿ ಆಗಿಬಿಟ್ಟ. ಯಾರೋ ಕಟ್ಟಿದ ಪಕ್ಷದಲ್ಲಿ ಇನ್ಯಾರೋ ಪದವಿ ಪಡೆಯುತ್ತಾರೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಅಸಮಾಧಾನ ಹೇಳಿಕೊಂಡಿದ್ದಾರೆ.

ಯಲಬುರ್ಗಾ ತಾಲೂಕಿನ ತಳಕಲ್ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಸಾರ್ವಜನಿಕರ ಸಭೆಯಲ್ಲಿ ಈ ಮಾತುಗಳನ್ನು ಹೇಳಿದ್ದಾರೆ. ನೀವು ಮಂತ್ರಿ ಆಗೋದು ಯಾವಾಗ ಎಂಬ ಕಾರ್ಯಕರ್ತರ ಪ್ರಶ್ನೆಗೆ ಶಾಸಕರು ಈ ರೀತಿ ಪ್ರತಿಕ್ರಿಯೆ ನೀಡಿದರು. ನೀವು ದುಃಖ ಪಡುವ ಅಗತ್ಯವಿಲ್ಲ. ಒಮ್ಮೊಮ್ಮೆ ಮಂತ್ರಿ ಆಗೋದಕ್ಕೆ ಆಗುವುದಿಲ್ಲ. ಅದಕ್ಕೆ ಹಣೆ ಬರಹವೂ ಬೇಕಾಗತ್ತೆ. ಸಿದ್ದರಾಮಯ್ಯ ಕಾಂಗ್ರೆಸ್ಗೆ ಬಂದು ಎರಡು ಬಾರಿ ಸಿಎಂ ಆಗಿದ್ದಾರೆ. ಇದನ್ನು ನೋಡಿ ಕಾಂಗ್ರೆಸ್ನ ಹಳೆ ಮಂದಿ ಏನಂತಿರಬಹುದು? ಇದೆಲ್ಲಾ ಮನುಷ್ಯನ ಅದೃಷ್ಟ. ಹೇಳಕ್ಕೆ ಆಗೋದಿಲ್ಲ. ಎಲ್.ಕೆ.ಅಡ್ವಾಣಿ ಕಟ್ಟಿದ್ದ ಬಿಜೆಪಿಯಲ್ಲಿ ಮೋದಿ ಪ್ರಧಾನ ಮಂತ್ರಿ ಆಗ್ಬಿಟ್ಟ ಎಂದು ಕಾಂಗ್ರೆಸ್, ಬಿಜೆಪಿ ನಾಯಕರ ಬಗ್ಗೆ ಕಾಲೆಳೆದರು.
ನನ್ನ ಹಿಂದೆ ಓಡಾಡಿದವರೆಲ್ಲಾ ಮಂತ್ರಿ ಆಗಿದ್ದಾರೆ. ಅವರ ಅಪ್ಪಂದಿರ ಜತೆ ನಾನು ಕೆಲಸ ಮಾಡಿದವನು. ಇವರು, ಈಗ ನಮ್ಮ ಮುಂದೆ ಧಿಮಾಕು ಮಾಡ್ಕೊಂಡು ಓಡಾಡುತ್ತಿದ್ದಾರೆ. ದೇವೇಗೌಡರ ಕ್ಯಾಬಿನೆಟ್ನಲ್ಲಿ ನಾನು ಮಿನಿಸ್ಟರ್ ಆಗಿದ್ದವನು. ಈ ಕುಮಾರಸ್ವಾಮಿ ನನ್ನ ಪಕ್ಕ ನಿಲ್ಲೋದಕ್ಕೂ ಹೆದರುತ್ತಿದ್ದ. ಏನ್ ಮಾಡೊದು ಅವನ ಹಣೆ ಬರಹದಲ್ಲಿ ಬರೆದಿತ್ತು. ಮುಖ್ಯಮಂತ್ರಿ ಆಗಿಬಿಟ್ಟ ಎಂದು ಹೇಳಿದ್ದಾರೆ.
I was a minister in Deve Gowda's cabinet. This Kumaraswamy was afraid to stand beside me. Senior Congress MLA Basavaraja Rayareddy said that what he did was written on his forehead, he became the Chief Minister.The MLA responded to the activists' question when you will become a minister in a public meeting organized at Talakal village of Yalaburga taluk on Wednesday.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm