ಬ್ರೇಕಿಂಗ್ ನ್ಯೂಸ್
08-08-23 12:52 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 8: ಮಂಡ್ಯ ಜಿಲ್ಲೆಯ ಅಧಿಕಾರಿಗಳೆಂದು ಬಿಂಬಿಸಿ ರಾಜ್ಯಪಾಲರಿಗೆ ನನ್ನ ವಿರುದ್ಧ ದೂರು ನೀಡಿರುವುದು ನಕಲಿ ವ್ಯಕ್ತಿಗಳು ಮಾಡಿರುವ ಯೋಜಿತ ಸಂಚಿನ ಭಾಗ. ಇದರಲ್ಲಿ ಹುರುಳಿಲ್ಲ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ.
ಈ ಕುರಿತಾಗಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೃಷಿ ಇಲಾಖೆಯಲ್ಲಿ ವರ್ಗಾವಣೆಗಾಗಿ ಲಂಚಕ್ಕೆ ಒತ್ತಾಯಿಸಲಾಗಿದೆ ಎಂದು ಕೆಲವು ಮಾಧ್ಯಮದಲ್ಲಿ ಪ್ರಸಾರವಾಗಿರುವ ವರದಿ ಸತ್ಯಕ್ಕೆ ದೂರವಾಗಿದೆ. ರಾಜ್ಯಪಾಲರಿಗೆ ನೀಡಿರುವ ದೂರು ಪಿತೂರಿ ಸ್ವರೂಪದಲ್ಲಿದ್ದು ನಕಲಿ ವ್ಯಕ್ತಿಗಳು ಮಾಡಿರುವ ಯೋಜಿತ ಸಂಚಾಗಿದೆ. ನಮ್ಮ ಸರ್ಕಾರದ ಜನಪರ ಆಡಳಿತಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಇಂತಹ ಪ್ರಯತ್ನ ಮಾಡುತ್ತಲೇ ಬಂದಿದ್ದಾರೆ ಎಂದು ಕಿಡಿಕಾರಿದ್ದಾರೆ.

ರಾಜ್ಯಪಾಲರಿಗೆ ಸಲ್ಲಿಸಿರುವ ದೂರಿನ ಬಗ್ಗೆ ಮುಖ್ಯ ಕಾರ್ಯದರ್ಶಿ ಮೂಲಕ ತನಿಖೆ ಮಾಡಿ ವರದಿ ಪಡೆಯುವಂತೆ ಚಲುವರಾಯಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
ರಾಜ್ಯಪಾಲರ ಕಚೇರಿಯಿಂದ ಮುಖ್ಯ ಕಾರ್ಯದರ್ಶಿ ಅವರಿಗೆ ಬರೆದ ಪತ್ರದಲ್ಲಿ "ಮಾನ್ಯ ರಾಜ್ಯಪಾಲರಿಗೆ ಮಂಡ್ಯ ಜಿಲ್ಲೆಯ ಮಂಡ್ಯ, ಮಳವಳ್ಳಿ, ಕೃಷ್ಣರಾಜಪೇಟೆ, ಪಾಂಡವಪುರ, ನಾಗಮಂಗಲ, ಶ್ರೀರಂಗಪಟ್ಟಣ ಮತ್ತು ಮದ್ದೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಮತ್ತು ಸಿಬ್ಬಂದಿ ಉಲ್ಲೇಖಿತ ದೂರರ್ಜಿಯನ್ನು ಸಲ್ಲಿಸಿರುತ್ತಾರೆ. ದೂರರ್ಜಿಯಲ್ಲಿ ಮೇಲಿನ ಅಧಿಕಾರಿಗಳು ಉಲ್ಲೇಖಿಸಿರುವಂತೆ ಅಧಿಕಾರಿ ಮತ್ತು ಸಿಬ್ಬಂದಿಗಳಿಂದ 6-8 ಲಕ್ಷ ರೂಪಾಯಿಗಳನ್ನು ನೀಡುವಂತೆ ಮಾನ್ಯ ಸಚಿವರು ಮಂಡ್ಯ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಮೂಲಕ ಒತ್ತಡ ಹೇರುತ್ತಿದ್ದಾರೆಂದು ಆರೋಪಿಸಿರುತ್ತಾರೆ. ಲಂಚ ಕೇಳುವ ಇಂತಹ ಅನಿಷ್ಠ ಪದ್ಧತಿಗೆ ಕಡಿವಾಣ ಹಾಕುವ ಸಂಬಂಧ ಕ್ರಮ ವಹಿಸದಿದ್ದಲ್ಲಿ ಅಧಿಕಾರಿಗಳು ಕುಟುಂಬದ ಸದಸ್ಯರ ಜೊತೆಗೆ ವಿಷ ಕುಡಿಯುವುದಾಗಿ ತಿಳಿಸಿರುತ್ತಾರೆ. ಈ ದೂರರ್ಜಿಯನ್ನು ನಿಮಾನುಸಾರ ಪರಿಶೀಲಿಸಿ, ಸೂಕ್ತ ಕ್ರಮ ವಹಿಸುವಂತೆ ತಮ್ಮನ್ನು ಕೋರಲು ನಿರ್ದೇಶಿಸಿದ್ದೇನೆ ಎಂದು ಉಲ್ಲೇಖಿಸಲಾಗಿತ್ತು.
Mr. Cheluvarayaswamy said he had asked the Superintendent of Police, Mandya, to hold a preliminary inquiry into the matter. “Prima facie it appears to be fake. But, we have to find out who has written the letter,” he said.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am