ಬ್ರೇಕಿಂಗ್ ನ್ಯೂಸ್
08-08-23 12:52 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 8: ಮಂಡ್ಯ ಜಿಲ್ಲೆಯ ಅಧಿಕಾರಿಗಳೆಂದು ಬಿಂಬಿಸಿ ರಾಜ್ಯಪಾಲರಿಗೆ ನನ್ನ ವಿರುದ್ಧ ದೂರು ನೀಡಿರುವುದು ನಕಲಿ ವ್ಯಕ್ತಿಗಳು ಮಾಡಿರುವ ಯೋಜಿತ ಸಂಚಿನ ಭಾಗ. ಇದರಲ್ಲಿ ಹುರುಳಿಲ್ಲ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ.
ಈ ಕುರಿತಾಗಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೃಷಿ ಇಲಾಖೆಯಲ್ಲಿ ವರ್ಗಾವಣೆಗಾಗಿ ಲಂಚಕ್ಕೆ ಒತ್ತಾಯಿಸಲಾಗಿದೆ ಎಂದು ಕೆಲವು ಮಾಧ್ಯಮದಲ್ಲಿ ಪ್ರಸಾರವಾಗಿರುವ ವರದಿ ಸತ್ಯಕ್ಕೆ ದೂರವಾಗಿದೆ. ರಾಜ್ಯಪಾಲರಿಗೆ ನೀಡಿರುವ ದೂರು ಪಿತೂರಿ ಸ್ವರೂಪದಲ್ಲಿದ್ದು ನಕಲಿ ವ್ಯಕ್ತಿಗಳು ಮಾಡಿರುವ ಯೋಜಿತ ಸಂಚಾಗಿದೆ. ನಮ್ಮ ಸರ್ಕಾರದ ಜನಪರ ಆಡಳಿತಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಇಂತಹ ಪ್ರಯತ್ನ ಮಾಡುತ್ತಲೇ ಬಂದಿದ್ದಾರೆ ಎಂದು ಕಿಡಿಕಾರಿದ್ದಾರೆ.

ರಾಜ್ಯಪಾಲರಿಗೆ ಸಲ್ಲಿಸಿರುವ ದೂರಿನ ಬಗ್ಗೆ ಮುಖ್ಯ ಕಾರ್ಯದರ್ಶಿ ಮೂಲಕ ತನಿಖೆ ಮಾಡಿ ವರದಿ ಪಡೆಯುವಂತೆ ಚಲುವರಾಯಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
ರಾಜ್ಯಪಾಲರ ಕಚೇರಿಯಿಂದ ಮುಖ್ಯ ಕಾರ್ಯದರ್ಶಿ ಅವರಿಗೆ ಬರೆದ ಪತ್ರದಲ್ಲಿ "ಮಾನ್ಯ ರಾಜ್ಯಪಾಲರಿಗೆ ಮಂಡ್ಯ ಜಿಲ್ಲೆಯ ಮಂಡ್ಯ, ಮಳವಳ್ಳಿ, ಕೃಷ್ಣರಾಜಪೇಟೆ, ಪಾಂಡವಪುರ, ನಾಗಮಂಗಲ, ಶ್ರೀರಂಗಪಟ್ಟಣ ಮತ್ತು ಮದ್ದೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಮತ್ತು ಸಿಬ್ಬಂದಿ ಉಲ್ಲೇಖಿತ ದೂರರ್ಜಿಯನ್ನು ಸಲ್ಲಿಸಿರುತ್ತಾರೆ. ದೂರರ್ಜಿಯಲ್ಲಿ ಮೇಲಿನ ಅಧಿಕಾರಿಗಳು ಉಲ್ಲೇಖಿಸಿರುವಂತೆ ಅಧಿಕಾರಿ ಮತ್ತು ಸಿಬ್ಬಂದಿಗಳಿಂದ 6-8 ಲಕ್ಷ ರೂಪಾಯಿಗಳನ್ನು ನೀಡುವಂತೆ ಮಾನ್ಯ ಸಚಿವರು ಮಂಡ್ಯ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಮೂಲಕ ಒತ್ತಡ ಹೇರುತ್ತಿದ್ದಾರೆಂದು ಆರೋಪಿಸಿರುತ್ತಾರೆ. ಲಂಚ ಕೇಳುವ ಇಂತಹ ಅನಿಷ್ಠ ಪದ್ಧತಿಗೆ ಕಡಿವಾಣ ಹಾಕುವ ಸಂಬಂಧ ಕ್ರಮ ವಹಿಸದಿದ್ದಲ್ಲಿ ಅಧಿಕಾರಿಗಳು ಕುಟುಂಬದ ಸದಸ್ಯರ ಜೊತೆಗೆ ವಿಷ ಕುಡಿಯುವುದಾಗಿ ತಿಳಿಸಿರುತ್ತಾರೆ. ಈ ದೂರರ್ಜಿಯನ್ನು ನಿಮಾನುಸಾರ ಪರಿಶೀಲಿಸಿ, ಸೂಕ್ತ ಕ್ರಮ ವಹಿಸುವಂತೆ ತಮ್ಮನ್ನು ಕೋರಲು ನಿರ್ದೇಶಿಸಿದ್ದೇನೆ ಎಂದು ಉಲ್ಲೇಖಿಸಲಾಗಿತ್ತು.
Mr. Cheluvarayaswamy said he had asked the Superintendent of Police, Mandya, to hold a preliminary inquiry into the matter. “Prima facie it appears to be fake. But, we have to find out who has written the letter,” he said.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm