ಬ್ರೇಕಿಂಗ್ ನ್ಯೂಸ್
08-08-23 03:55 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 8: ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಬಿಜೆಪಿ ಅಭ್ಯರ್ಥಿಗಳು ಈಗ ಲೋಕಸಭಾ ಚುನಾವಣೆ ಮೇಲೆ ಕಣ್ಣೀಟ್ಟಿದ್ದು, ಟಿಕೆಟ್ ಗಿಟ್ಟಿಸಿಕೊಳ್ಳಲು ಕಸರತ್ತು ಆರಂಭಿಸಿದ್ದಾರೆ. ರಾಜ್ಯದಲ್ಲಿ ಹತ್ತಕ್ಕೂ ಹೆಚ್ಚು ಕಡೆ ಕಳೆದ ಬಾರಿ ವಿಧಾನಸಭೆ ಚುನಾವಣೆ ಸೋತವರೇ ಲೋಕಸಭೆ ಅಭ್ಯರ್ಥಿ ಸ್ಥಾನಕ್ಕೆ ಲಾಬಿ ನಡೆಸುತ್ತಿದ್ದಾರೆ. ಹಾಲಿ ಸಂಸದರ ಪೈಕಿ ಬಹುತೇಕರಿಗೆ ಮರು ಸ್ಪರ್ಧೆಗೆ ಅವಕಾಶ ಇಲ್ಲವೆಂಬ ಸುಳಿವು ಹಿನ್ನೆಲೆಯಲ್ಲಿ ಮಾಜಿ ಶಾಸಕರೇ ಲೋಕಸಭೆ ಟಿಕೆಟಿಗಾಗಿ ಲಾಬಿಗೆ ಮುಂದಾಗಿದ್ದಾರೆ.
ಮಾಜಿ ಸಚಿವರು, ಶಾಸಕರು ಲೋಕಸಭಾ ಟಿಕೆಟ್ ಪಡೆಯಲು ಬಿಜೆಪಿ ವರಿಷ್ಠರ ಮೇಲೆ ಒತ್ತಡ ಹೇರುತ್ತಿದ್ದು, ಟಿಕೆಟ್ ನೀಡಿದರೆ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸುತ್ತಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸೋತಿರುವ ಮಾಜಿ ಸಚಿವರಾದ ವಿ.ಸೋಮಣ್ಣ, ಸಿ.ಟಿ.ರವಿ, ಬಿ.ಸಿ.ಪಾಟೀಲ್, ಡಾ.ಸುಧಾಕರ್, ಮುರುಗೇಶ್ ನಿರಾಣಿ, ಬಿ.ಶ್ರೀರಾಮುಲು, ಗೋವಿಂದ ಕಾರಜೋಳ, ಕರುಣಾಕರ ರೆಡ್ಡಿ, ಎಂ.ಪಿ.ರೇಣುಕಾಚಾರ್ಯ ಹಾಗು ಹಾಸನದ ಪ್ರೀತಂ ಗೌಡ ಸೇರಿದಂತೆ ಹಲವು ನಾಯಕರು ಲೋಕಸಭೆ ಟಿಕೆಟ್ ಪಡೆಯಲು ದೆಹಲಿ ಮಟ್ಟದಲ್ಲಿ ಲಾಬಿ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.



ಮಾಜಿ ಶಾಸಕ ಸಿ.ಟಿ.ರವಿ ಉಡುಪಿ-ಚಿಕ್ಕಮಗಳೂರು ಇಲ್ಲವೇ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆಗೆ ಆಸಕ್ತಿ ತೋರಿದ್ದಾರೆ. ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಚಿಂತನೆ ನಡೆಸಿದ್ದಾರೆ. ಈ ಕ್ಷೇತ್ರದ ಸಂಸದರಾಗಿರುವ ಬಿ.ಎನ್.ಬಚ್ಚೇಗೌಡ ಅವರಿಗೆ ವಯಸ್ಸಿನ ಕಾರಣಕ್ಕೆ ಟಿಕೆಟ್ ದೊರೆಯುವುದು ಅನುಮಾನವಾಗಿದೆ. ವಿ.ಸೋಮಣ್ಣ ಬೆಂಗಳೂರು ದಕ್ಷಿಣ ಅಥವಾ ತುಮಕೂರು ಲೋಕಸಭಾ ಕ್ಷೇತ್ರದ ಆಕಾಂಕ್ಷಿಯಾಗಿದ್ದಾರೆ. ಎಂ.ಪಿ.ರೇಣುಕಾಚಾರ್ಯ ದಾವಣಗೆರೆ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಇನ್ನು ಹಾಲಿ ಸಂಸದ ಶಿವಕುಮಾರ್ ಉದಾಸಿ ಅವರ ಕ್ಷೇತ್ರ ಹಾವೇರಿ ಮೇಲೆ ಬಿ.ಸಿ.ಪಾಟೀಲ್ ಕಣ್ಣಿಟ್ಟಿದ್ದಾರೆ. ಬಾಗಲಕೋಟೆಯಿಂದ ಮುರುಗೇಶ್ ನಿರಾಣಿ, ಬಳ್ಳಾರಿ ಕ್ಷೇತ್ರಕ್ಕಾಗಿ ಶ್ರೀರಾಮುಲು ಹಾಗೂ ಕರುಣಾಕರ ರೆಡ್ಡಿ ನಡುವೆ ಪೈಪೋಟಿ ನಡೆದಿದೆ. ಗೋವಿಂದ ಕಾರಜೋಳ ವಿಜಯಪುರ ಕ್ಷೇತ್ರಕ್ಕೆ, ವಿಶ್ವೇಶ್ವರ ಹೆಗಡೆ ಕಾಗೇರಿ ಉತ್ತರ ಕನ್ನಡ ಕ್ಷೇತ್ರದ ಟಿಕೆಟ್ ಗಾಗಿ ಲಾಬಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.


ಇದೇ ವೇಳೆ, ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಯಿಂದಾಗಿ ಜನರ ಒಲವು ಬದಲಾಗಿದೆ ಎನ್ನಲಾಗುತ್ತಿದ್ದು ಹೀಗಾಗಿ ಕೆಲವು ಕಡೆ ಬಿಜೆಪಿಯ ಹಾಲಿ ಲೋಕಸಭೆ ಸದಸ್ಯರೇ ಮತ್ತೆ ಸ್ಪರ್ಧೆಗೆ ನಿರಾಸಕ್ತಿ ತೋರಿದ್ದಾರೆ. ವಿರೋಧಿ ಅಲೆ ಮತ್ತು ವಯೋಮಾನದ ಕಾರಣಕ್ಕೆ ಈ ಬಾರಿ ಲೋಕಸಭಾ ಟಿಕೆಟ್ ಕೈತಪ್ಪುವ ಸಾಧ್ಯತೆ ಇರುವುದರಿಂದ ಆ ಕ್ಷೇತ್ರಗಳ ಮೇಲೆ ಹೊಸಬರು ಕಣ್ಣು ಹಾಕಿದ್ದಾರೆ. ಕರಾವಳಿ ಸೇರಿದಂತೆ ಬಹುತೇಕ ಬಿಜೆಪಿ ಹಾಲಿ ಸದಸ್ಯರನ್ನು ಬದಲಾಯಿಸಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ ಎನ್ನುವ ಮಾಹಿತಿಯಿದೆ. ಈ ಸುಳಿವು ಅರಿತ ಕೆಳ ಹಂತದ ನಾಯಕರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಲೋಕಸಭೆ ಟಿಕೆಟಿಗೆ ಲಾಬಿ ನಡೆಸಿದ್ದಾರೆ.
Many MLAs plan for master plan to get ticket for MP elections in Karnataka.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm