ಬ್ರೇಕಿಂಗ್ ನ್ಯೂಸ್
11-08-23 10:19 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 11: ಬಿಬಿಎಂಪಿ ಕಚೇರಿಯ ಗುಣಮಟ್ಟ ಪರೀಕ್ಷೆಯ ಪ್ರಯೋಗಾಲಯಕ್ಕೆ ಬೆಂಕಿ ಬಿದ್ದಿರುವ ಘಟನೆ ಆಕಸ್ಮಿಕ ಅಲ್ಲ. ಇದರ ಹಿಂದೆ ಬಿಜೆಪಿ ಕೈವಾಡ ಇರುವ ಶಂಕೆಯಿದೆ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಬಿಬಿಎಂಪಿ ಕಾಮಗಾರಿಗಳ ಗುಣಮಟ್ಟ ನಿಯಂತ್ರಣ ಪ್ರಯೋಗಾಲಯದಲ್ಲಿ ಕಾಮಗಾರಿಗಳ ದಾಖಲೆ ಇದ್ದಂತಹ ಕೊಠಡಿಗೆ ಬೆಂಕಿ ಬಿದ್ದಿರುವುದು ಆಕಸ್ಮಿಕವಲ್ಲ, ಷಡ್ಯಂತ್ರ. 40% ಕಮಿಷನ್ನಿನ ಕಳಪೆ ಕಾಮಗಾರಿಗಳ ಬಗ್ಗೆ ನ್ಯಾಯಾಂಗ ತನಿಖೆಗೆ ವಹಿಸಿದ ಬೆನ್ನಲ್ಲೇ ದಾಖಲೆಗಳಿದ್ದ ಕೊಠಡಿಗೆ ಬೆಂಕಿ ಹಚ್ಚಿರುವ ದುಷ್ಕರ್ಮಿಗಳನ್ನು, ಇದರ ಹಿಂದಿರುವ ರಾಜ್ಯ ಬಿಜೆಪಿಯ ಭ್ರಷ್ಟರನ್ನು ಹೆಡೆಮುರಿ ಕಟ್ಟುವುದು ನಿಶ್ಚಿತ ಎಂದು ಬರೆದುಕೊಂಡಿದ್ದಾರೆ.
ಘಟನೆ ಬೆನ್ನಲ್ಲೇ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ಇಂಧನ ಸಚಿವ ಕೆ.ಜೆ ಜಾರ್ಜ್, ಘಟನೆಯಾದ ನಂತರ ಎಲ್ಲರನ್ನೂ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಎಲ್ಲರೂ ಔಟ್ ಆಫ್ ಡೇಂಜರ್. ಎಲ್ಲರಿಗೂ ಚಿಕಿತ್ಸೆ ನೀಡಲಾಗ್ತಿದೆ ಎಂದು ಹೇಳಿದರು. ಉದ್ದೇಶಪೂರ್ವಕ ನಡೆದಿರುವ ಆರೋಪ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ತನಿಖೆ ನಡೆಯುತ್ತಿದೆ, ಪೊಲೀಸರು ಮತ್ತು ಫಾರೆನ್ಸಿಕ್ ನವರು ತನಿಖೆ ನಡೆಸ್ತಿದ್ದಾರೆ. ತನಿಖೆ ನಂತರ ಎಲ್ಲಾ ಮಾಹಿತಿ ಹೊರ ಬರುತ್ತೆ. ನನಗೆ ಇರೋ ಮಾಹಿತಿ ಪ್ರಕಾರ ಲ್ಯಾಬ್ ಗೆ ಬೆಂಕಿ ಬಿದ್ದಿದೆ. ಲ್ಯಾಬ್ ನಲ್ಲಿ ಕೆಲವು ಕೆಮಿಕಲ್ಸ್ ಇತ್ತು, ಟೆಸ್ಟ್ ನಡೆಸುವ ವೇಳೆ ಬೆಂಕಿ ಅವಘಡ ಸಂಭವಿಸಿದೆ. ತನಿಖೆ ನಂತರ ಅಸಲಿ ವಿಚಾರ ಹೊರ ಬರುತ್ತೆ. ಗಾಯಾಳುಗಳಿಗೆ ಮೊದಲ ಆದ್ಯತೆ ಕೊಡಲಾಗಿದೆ ಎಂದು ತಿಳಿಸಿದ್ದಾರೆ.
A fire broke out in the quality testing laboratory of the BBMP office in Bengaluru. The state Congress has alleged that the BJP is suspected to be behind it. In a tweet, the Karnataka Congress said, "The fire broke out in a room in bbmp works quality control laboratory where records of works were kept, it was not an accident but a conspiracy.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm