ಬ್ರೇಕಿಂಗ್ ನ್ಯೂಸ್
13-08-23 12:38 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 13: ಮಹಿಳೆಯರಿಗೆ ಉಚಿತ ಪ್ರಯಾಣದ ಸೇವೆ ನೀಡಿದ ರಾಜ್ಯ ಸರ್ಕಾರದ 'ಶಕ್ತಿ ಯೋಜನೆ' ವಿರುದ್ಧ ರಾಜ್ಯದಲ್ಲಿ ಖಾಸಗಿ ಸಾರಿಗೆ ಸಂಘಟನೆಗಳು ಮತ್ತೆ ಸಿಡಿದೆದ್ದಿದ್ದು, ಆ.19ರಂದು ರಾಜ್ಯಾದ್ಯಂತ ಖಾಸಗಿ ಬಸ್, ಆಟೋ ಮುಷ್ಕರ ನಡೆಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿವೆ.
ಖಾಸಗಿ ಬಸ್, ಆಟೋ, ಟ್ಯಾಕ್ಸಿ ಚಾಲಕರಿಗೆ ಇದುವರೆಗೂ ರಾಜ್ಯ ಸರ್ಕಾರ ಯಾವುದೇ ಪರಿಹಾರ ನೀಡದೇ ಇರುವ ಹಿನ್ನೆಲೆ ಸಂಘಟನೆಗಳು ಮುಷ್ಕರ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದೆ. ಅಂದು ಬಹುತೇಕ ಆಟೋ, ಖಾಸಗಿ ಬಸ್ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಶಕ್ತಿ ಯೋಜನೆಯಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಆಟೋರಿಕ್ಷಾ ಸೇರಿ ಸಾರ್ವ ಜನಿಕ ಸೇವೆಯ ಖಾಸಗಿ ವಾಹನ ಚಾಲಕರಿಗೆ ಮಾಸಿಕ 10 ಸಾವಿರ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿತ್ತು.
ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಯಿಂದ ನಷ್ಟಕ್ಕೆ ಒಳಗಾದ ಖಾಸಗಿ ಬಸ್, ಕ್ಯಾಬ್, ರಿಕ್ಷಾ ಚಾಲಕರಿಗೆ ಪರಿಹಾರ ಘೋಷಣೆ ಮಾಡಬೇಕೆಂಬ ಬೇಡಿಕೆ ಇದೆ. ಖಾಸಗಿ ಸಾರಿಗೆ ಉದ್ಯಮ ವಿವಿಧ ಕಾರಣಗಳಿಂದ ಸಂಕಷ್ಟಕ್ಕೆ ಒಳಗಾಗಿದ್ದು, ರಾಜ್ಯ ಸರ್ಕಾರದಿಂದ ಇದಕ್ಕಾಗಿ ಕೈಗೊಳ್ಳಬೇಕಿರುವ ಪರಿಹಾರ ಕ್ರಮಗಳು ಮತ್ತು ಸಾರಿಗೆ ಉದ್ಯಮದ ನಷ್ಟದ ಬಗ್ಗೆ ವರದಿ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ವರದಿ ಆಧರಿಸಿ ಪರಿಹಾರ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೊರೋನಾ ಸೇರಿ ವಿವಿಧ ಕಾರಣದಿಂದ 3-4 ವರ್ಷಗಳಿಂದ ಸಾರಿಗೆ ಕ್ಷೇತ್ರ ಸಂಕಷ್ಟಕ್ಕೆ ಸಿಲುಕಿದೆ. ಸರ್ಕಾರದ ಶಕ್ತಿ ಯೋಜನೆಯ ಉಚಿತ ಪ್ರಯಾಣದಿಂದ ಸಮಸ್ಯೆ ಹೆಚ್ಚಾಗಿದೆ. ಖಾಸಗಿ ಬಸ್, ಕ್ಯಾಬ್, ಆಟೋಗಳಿಗೆ ಪ್ರಯಾಣಿಕರ ತೀವ್ರ ಕೊರತೆ ಎದುರಾಗಿ ನಷ್ಟಕ್ಕೊಳಗಾಗಿದೆ. ಹೀಗಾಗಿ ಪರಿಹಾರ ಕೊಡಬೇಕೆಂದು ಸಂಘಟನೆಗಳು ಹೋರಾಟ ನಡೆಸಿದ್ದವು. ಸಾರಿಗೆ ಸಚಿವರು ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದು, ಸಿಎಂ ಜೊತೆಗೆ ಚರ್ಚಿಸಿದ್ದರು. ಈ ಹಿನ್ನೆಲೆಯಲ್ಲಿ ಪರಿಹಾರ ಕ್ರಮಗಳ ಕುರಿತು ಸಾರಿಗೆ ಇಲಾಖೆಗೆ ವರದಿ ನೀಡಲು ಸಿಎಂ ಸೂಚಿಸಿದ್ದಾರೆ. ವರದಿ ಆಧರಿಸಿ ಪರಿಹಾರ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
Chief Minister Siddaramaiah has asked the transport department to submit a report on the relief measures that can be taken by the state government and the losses incurred by the transport industry as the private transport industry in the state is in distress due to the 'Shakti' project and other reasons. They are likely to announce compensation based on the report.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm