ಬ್ರೇಕಿಂಗ್ ನ್ಯೂಸ್
14-08-23 07:12 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್14: ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕೇಸ್ಗೆ ಸಂಬಂಧಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್ನ ಶಾಲೆಗೆ ಬೀಗ ಹಾಕಲಾಗಿದೆ. ಅನಧಿಕೃತವಾಗಿ ಶಾಲೆ ನಿರ್ಮಾಣ ಮಾಡಿರುವ ಹಿನ್ನೆಲೆ ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶದ ಮೇರೆಗೆ ಶಾಲೆ ಬಂದ್ ಮಾಡಲಾಗಿದೆ. ಇದರಿಂದ ಶಾಲೆಯಲ್ಲಿ ಓದುತ್ತಿದ್ದ 140ಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ.
ಆರೋಪಿ ಲ್ಯಾಂಬರ್ಟ್ ಪುಷ್ಪರಾಜ್ ಕೋರಮಂಗಲದಲ್ಲಿ ಶಾಲೆ ಕಟ್ಟಲು ಅನುಮತಿ ಪಡೆದಿದ್ದ. ಆದ್ರೆ ಅನಧಿಕೃತವಾಗಿ ವರ್ತೂರು ಸಮೀಪ ಶಾಲೆ ನಿರ್ಮಾಣ ಮಾಡಿದ್ದಾನೆ. ಈ ಹಿನ್ನೆಲೆ ಶಾಲೆಗೆ ಬೀಗ ಹಾಕಲಾಗಿದೆ. ಇದರಿಂದ ಶಾಲೆಯಲ್ಲಿ ಓದುತ್ತಿದ್ದ 140ಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಸದ್ಯ ಮಕ್ಕಳನ್ನ ಬೇರೆ ಶಾಲೆಗೆ ಸೇರಿಸಲು ಅವಕಾಶ ನೀಡಲಾಗಿದ್ದು ತಾವು ಹೇಳಿದ ಶಾಲೆಗೆ ಸರ್ಕಾರದಿಂದಲೇ ದರ ನಿಗದಿ ಮಾಡಿ ಸೀಟ್ ವ್ಯವಸ್ಥೆ ಮಾಡಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಜ್ಞಾನ ದೇಗುಲದಲ್ಲೇ ಪೈಶಾಚಿಕ ಕೃತ್ಯ;
ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್ ತನ್ನದೇ ಶಾಲೆಯ 10 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದ. 10 ವರ್ಷದ ಬಾಲಕಿ ನರದೌರ್ಬಲ್ಯ ಕಾಯಿಲೆಯಿಂದ ಬಳಲುತ್ತಿದ್ದು ಗುಂಜೂರು ಸಮೀಪದ ಖಾಸಗಿ ಶಾಲೆಯಲ್ಲಿ 2ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದಳು. ಆಗಸ್ಟ್ 3 ರ ಬೆಳಗ್ಗೆ 8.30 ಕ್ಕೆ ಬಾಲಕಿ ಶಾಲೆಗೆ ತೆರಳಿದ್ದಾಳೆ.11.30 ಕ್ಕೆ ಶಾಲೆಯಿಂದ ತನ್ನ ಕೊಠಡಿಗೆ ಕರೆದೊಯ್ದ ಪ್ರಾಂಶುಪಾಲ ವಿಶ್ರಾಂತಿ ಪಡೆಯುವಂತೆ ಹೇಳಿ ಅತ್ಯಾಚಾರ ಎಸಗಿದ್ದ. ಮಧ್ಯಾಹ್ನ 3.30 ಕ್ಕೆ ಶಾಲೆಯಿಂದ ಮನೆಗೆ ವಾಪಸ್ಸಾಗಿದ್ದ ಬಾಲಕಿ, ತನ್ನ ತಾಯಿಗೆ ಹೊಟ್ಟೆ ನೋವು ಎಂದು ಹೇಳಿಕೊಂಡಳು. ಸ್ನಾನ ಮಾಡಿಸಿ ಕರೆತರುವಾಗ ರಕ್ತದ ಕಲೆಗಳು ಕಂಡುಬಂದಿದೆ. ಇದೇ ವಿಚಾರವಾಗಿ ಮಗುವನ್ನು ತಾಯಿ ಕೇಳಿದಾಗ ನಡೆದ ಘಟನೆ ಬಗ್ಗೆ ಪುಟ್ಟ ಬಾಲಕಿ ವಿವರಿಸಿದ್ದಾಳೆ. ಘಟನೆ ಸಂಬಂಧ ಬಾಲಕಿ ತಾಯಿ ದೂರಿನ ಮೇರೆಗೆ ವರ್ತೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು. ಆರೋಪಿ ಪ್ರಾಂಶುಪಾಲನನ್ನ ಬಂಧಿಸಲಾಗಿತ್ತು. ಈ ಘಟನೆ ಬೆನ್ನಲ್ಲೇ ಈಗ ಶಾಲೆಗೆ ಬೀಗ ಬಿದ್ದಿದೆ.
The school of principal Lambert Pushparaj, who was accused of sexually assaulting a girl in Varthur police station limits, has been locked. The school was closed on the orders of the block education officer as the school was constructed unauthorisedly. The future of more than 140 students studying in the school is uncertain.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am