ಬ್ರೇಕಿಂಗ್ ನ್ಯೂಸ್
16-08-23 09:54 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 16: ಕಟ್ಟಡವೊಂದಕ್ಕೆ 23 ಕಿಲೋವಾಟ್ ಸಾಮರ್ಥ್ಯದ ವಿದ್ಯುತ್ ಸಂಪರ್ಕಕ್ಕೆ ಮಂಜೂರಾತಿ ನೀಡಲು 3.5 ಲಕ್ಷ ಲಂಚ ಪಡೆಯುತ್ತಿದ್ದ ಬೆಸ್ಕಾಂ ಎಸ್–1 ಜಯನಗರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಧನಂಜಯ ಮತ್ತು ಅವರ ಪರವಾಗಿ ಹಣ ಪಡೆದ ಸೈಯದ್ ನಿಜಾಮ್ ಎಂಬ ಖಾಸಗಿ ವ್ಯಕ್ತಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಕಟ್ಟಡವೊಂದಕ್ಕೆ 23 ಕೆವಿ ಸಾಮರ್ಥ್ಯದ ವಿದ್ಯುತ್ ಸಂಪರ್ಕ ಕೋರಿ ಭರತ್ ಕುಮಾರ್ ಎನ್.ಎಂ. ಎಂಬ ಎಲೆಕ್ಟ್ರಿಕ್ ಕಾಮಗಾರಿಗಳ ಗುತ್ತಿಗೆದಾರ ಬೆಸ್ಕಾಂನ ಜಯನಗರ ಉಪ ವಿಭಾಗ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಮಂಜೂರಾತಿ ನೀಡಲು 13 ಲಕ್ಷ ಲಂಚ ನೀಡುವಂತೆ ಧನಂಜಯ ಬೇಡಿಕೆ ಇಟ್ಟಿದ್ದರು. 3.5 ಲಕ್ಷವನ್ನು ಬುಧವಾರವೇ ತಲಪಿಸುವಂತೆ ಅರ್ಜಿದಾರರಿಗೆ ಸೂಚಿಸಿದ್ದರು.

ಈ ಕುರಿತು ಭರತ್ ಕುಮಾರ್ ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಪೊಲೀಸರಿಗೆ ದೂರು ನೀಡಿದ್ದರು. ಬೆಸ್ಕಾಂನ ಜಯನಗರ ಉಪ ವಿಭಾಗದ ಕಚೇರಿಯಲ್ಲಿ ದೂರುದಾರರು ಲಂಚದ ಹಣದೊಂದಿಗೆ ಧನಂಜಯ ಅವರನ್ನು ಬುಧವಾರ ಸಂಜೆ 4 ಗಂಟೆಗೆ ಭೇಟಿಮಾಡಿದ್ದರು. ಲಂಚದ ಹಣವನ್ನು ಅಲ್ಲಿಯೇ ಇದ್ದ ಸೈಯದ್ ನಿಜಾಮ್ ಅವರಿಗೆ ತಲುಪಿಸುವಂತೆ ಅಧಿಕಾರಿ ಸೂಚಿಸಿದರು. ಅದರಂತೆಯೇ ಭರತ್ ಕುಮಾರ್ ಹಣವನ್ನು ನೀಡಿದರು. ತಕ್ಷಣ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಧನಂಜಯ ಮತ್ತು ಸೈಯದ್ ನಿಜಾಮ್ ಇಬ್ಬರನ್ನೂ ಬಂಧಿಸಿದ್ದಾರೆ.
ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಎಸ್ಪಿ ಕೆ.ವಿ. ಅಶೋಕ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ಗಳಾದ ವೆಂಕಟೇಶ್ ಕೆ., ವಿಜಯಕೃಷ್ಣ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
An Assistant Executive Engineer of BESCOM and a middleman were arrested by Lokayukta officials on Wednesday while they were accepting bribes from an electricity contractor. The AEE, Dhananjaya, and the middleman, Sayid Nizam, were arrested from the BESCOM Sub division office in Jayanagar.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm