ಬ್ರೇಕಿಂಗ್ ನ್ಯೂಸ್
16-08-23 09:54 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 16: ಕಟ್ಟಡವೊಂದಕ್ಕೆ 23 ಕಿಲೋವಾಟ್ ಸಾಮರ್ಥ್ಯದ ವಿದ್ಯುತ್ ಸಂಪರ್ಕಕ್ಕೆ ಮಂಜೂರಾತಿ ನೀಡಲು 3.5 ಲಕ್ಷ ಲಂಚ ಪಡೆಯುತ್ತಿದ್ದ ಬೆಸ್ಕಾಂ ಎಸ್–1 ಜಯನಗರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಧನಂಜಯ ಮತ್ತು ಅವರ ಪರವಾಗಿ ಹಣ ಪಡೆದ ಸೈಯದ್ ನಿಜಾಮ್ ಎಂಬ ಖಾಸಗಿ ವ್ಯಕ್ತಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಕಟ್ಟಡವೊಂದಕ್ಕೆ 23 ಕೆವಿ ಸಾಮರ್ಥ್ಯದ ವಿದ್ಯುತ್ ಸಂಪರ್ಕ ಕೋರಿ ಭರತ್ ಕುಮಾರ್ ಎನ್.ಎಂ. ಎಂಬ ಎಲೆಕ್ಟ್ರಿಕ್ ಕಾಮಗಾರಿಗಳ ಗುತ್ತಿಗೆದಾರ ಬೆಸ್ಕಾಂನ ಜಯನಗರ ಉಪ ವಿಭಾಗ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಮಂಜೂರಾತಿ ನೀಡಲು 13 ಲಕ್ಷ ಲಂಚ ನೀಡುವಂತೆ ಧನಂಜಯ ಬೇಡಿಕೆ ಇಟ್ಟಿದ್ದರು. 3.5 ಲಕ್ಷವನ್ನು ಬುಧವಾರವೇ ತಲಪಿಸುವಂತೆ ಅರ್ಜಿದಾರರಿಗೆ ಸೂಚಿಸಿದ್ದರು.

ಈ ಕುರಿತು ಭರತ್ ಕುಮಾರ್ ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಪೊಲೀಸರಿಗೆ ದೂರು ನೀಡಿದ್ದರು. ಬೆಸ್ಕಾಂನ ಜಯನಗರ ಉಪ ವಿಭಾಗದ ಕಚೇರಿಯಲ್ಲಿ ದೂರುದಾರರು ಲಂಚದ ಹಣದೊಂದಿಗೆ ಧನಂಜಯ ಅವರನ್ನು ಬುಧವಾರ ಸಂಜೆ 4 ಗಂಟೆಗೆ ಭೇಟಿಮಾಡಿದ್ದರು. ಲಂಚದ ಹಣವನ್ನು ಅಲ್ಲಿಯೇ ಇದ್ದ ಸೈಯದ್ ನಿಜಾಮ್ ಅವರಿಗೆ ತಲುಪಿಸುವಂತೆ ಅಧಿಕಾರಿ ಸೂಚಿಸಿದರು. ಅದರಂತೆಯೇ ಭರತ್ ಕುಮಾರ್ ಹಣವನ್ನು ನೀಡಿದರು. ತಕ್ಷಣ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಧನಂಜಯ ಮತ್ತು ಸೈಯದ್ ನಿಜಾಮ್ ಇಬ್ಬರನ್ನೂ ಬಂಧಿಸಿದ್ದಾರೆ.
ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಎಸ್ಪಿ ಕೆ.ವಿ. ಅಶೋಕ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ಗಳಾದ ವೆಂಕಟೇಶ್ ಕೆ., ವಿಜಯಕೃಷ್ಣ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
An Assistant Executive Engineer of BESCOM and a middleman were arrested by Lokayukta officials on Wednesday while they were accepting bribes from an electricity contractor. The AEE, Dhananjaya, and the middleman, Sayid Nizam, were arrested from the BESCOM Sub division office in Jayanagar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am