ಬ್ರೇಕಿಂಗ್ ನ್ಯೂಸ್
17-08-23 10:56 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಟೊಮೆಟೊ, ತರಕಾರಿ ಬೆಲೆ ಏರಿಕೆ ಬಿಸಿಯಿಂದ ಹೊರಬಾರದ ಜನರಿಗೆ ಈಗ ಬಾಳೆಹಣ್ಣಿನ ಬೆಲೆ ಹೆಚ್ಚಳ ಮತ್ತೊಂದು ಆಘಾತ ಉಂಟುಮಾಡಿದೆ.
ಶ್ರಾವಣ ಮಾಸದಲ್ಲಿ ಹಬ್ಬಗಳ ಸೀಸನ್ ಆರಂಭವಾಗುತ್ತಿದ್ದಂತೆಯೇ ಬಾಳೆ ಬೆಲೆ ಸದ್ದಿಲ್ಲದೇ ಹೆಚ್ಚಾಗಿದೆ. ಬಹುಮುಖ್ಯ ಬೇಡಿಕೆಯುಳ್ಳ ಈ ಹಣ್ಣಿನ ಬೆಲೆ ಶತಕ ದಾಟಿರುವುದು ಗ್ರಾಹಕರಿಗೆ ತಲೆಬಿಸಿ ತರಿಸಿದೆ. ಬೇಡಿಕೆ ಹಾಗೂ ಪೂರೈಕೆ ವ್ಯತ್ಯಾಸದಿಂದ ಈ ವಾರ ನಗರದಲ್ಲಿ ಒಂದು ಕೆ.ಜಿ. ಏಲಕ್ಕಿ ಬಾಳೆಹಣ್ಣಿನ ದರ 100 ರಿಂದ 140 ರೂ ಆಗಿದೆ.
ಬೆಂಗಳೂರು ಎಪಿಎಂಸಿ ಘಟಕಕ್ಕೆ ತುಮಕೂರು, ರಾಮನಗರ ಚಿಕ್ಕಬಳ್ಳಾಪುರ ಹಾಗು ಬೆಂಗಳೂರು ಗ್ರಾಮಾಂತರದಿಂದ ಬಾಳೆಹಣ್ಣು ಪೂರೈಕೆಯಾಗುತ್ತದೆ. ಹಾಗೆಯೇ ತಮಿಳುನಾಡಿಗೆ ಹೊಸೂರು ಹಾಗೂ ಕೃಷ್ಣಗಿರಿಯಿಂದ ಹಣ್ಣುಗಳು ಪೂರೈಕೆಯಾಗುತ್ತವೆ. ಹೊರರಾಜ್ಯಗಳಿಂದ ಪೂರೈಕೆ ಕಡಿಮೆ ಇರುವುದರಿಂದ ಏಲಕ್ಕಿ ಬಾಳೆಯ ಸಗಟು ಮಾರಾಟ ಬೆಲೆ ಪ್ರತಿ ಕೆಜಿಗೆ 80 ರೂ ಇದ್ದರೆ ಪಚ್ಚಬಾಳೆ 20 ರೂ ಇದೆ. ಆದರೆ ಸಾಗಾಣಿಕೆ ವೆಚ್ಚವನ್ನೂ ಸೇರಿಸಿ ಚಿಲ್ಲರೆ ಮಾರಾಟ ಬೆಲೆ 100 ರಿಂದ 140 ರೂ ತಲುಪಿದೆ.
ಕೊಡಗು, ಮೈಸೂರು, ಬೆಂಗಳೂರು ಗ್ರಾಮಾಂತರ ಹತ್ತಿರದಲ್ಲಿಯೇ ಇದ್ದರೂ ಅವರು ಬೆಳೆದಂತಹ ಉತ್ಪನ್ನಗಳು ನಗರ ತಲುಪುತ್ತಿಲ್ಲ. ಸಣ್ಣ ಹಿಡುವಳಿದಾರರು ಸಾಗಾಣಿಕಾ ವಾಹನ ಭರ್ತಿಯಾಗುವವರೆಗೂ ಕಾಯುತ್ತಿಲ್ಲ. ಬೇರೆ ಮಾರ್ಗವಿಲ್ಲದ ಕಾರಣ, ರೈತರು ಗ್ರಾಹಕರನ್ನು ತಲುಪಲು ಸಾಧ್ಯವಾಗುತ್ತಿಲ್ಲ. ಓಣಂ, ಗಣೇಶ ಚತುರ್ಥಿ ಸೇರಿದಂತೆ ಹಬ್ಬಗಳು ಸಮೀಪಿಸುತ್ತಿದ್ದು ಬೇಡಿಕೆಯಲ್ಲಿಯೂ ಹೆಚ್ಚಳ ಕಂಡುಬರುತ್ತಿದೆ. ಬೆಲೆ ಏರಿಕೆಯ ಹಿಂದೆ ಮಧ್ಯವರ್ತಿಗಳ ಕೈವಾಡವಿದೆ ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ.
ನಗರದಲ್ಲಿ ಹೆಚ್ಚಾಗಿ ತಮಿಳುನಾಡಿನಿಂದ ಪೂರೈಕೆಯಗುತ್ತಿದ್ದ ಏಲಕ್ಕಿ ಬಾಳೆ, ಪಚ್ಚ ಬಾಳೆ ಹಣ್ಣಿಗೆ ಬೇಡಿಕೆಯಿದ್ದು, ಈ ಬಾರಿ ತಮಿಳುನಾಡಿನಿಂದ ಪೂರೈಕೆಯಾಗುವ ಪ್ರಮಾಣದಲ್ಲಿ ಗಣನೀಯ ಕುಸಿತ ಕಂಡುಬಂದಿರುವುದು ಬೆಲೆ ಏರಿಕೆಗೆ ಕಾರಣ. ಈ ಮೊದಲು ಮಾರುಕಟ್ಟೆಗೆ ತಮಿಳುನಾಡಿನಿಂದ 1,500 ಕ್ವಿಂಟಲ್ ಬಾಳೆಹಣ್ಣುಗಳು ಪೂರೈಕೆಯಾಗುತ್ತಿತ್ತು. ಆದರೆ ಈ ಬಾರಿ ಕೇವಲ 1,000 ಕ್ವಿಂಟಲ್ ಮಾತ್ರ ಪೂರೈಕೆಯಾಗಿದೆ ಎಂದು ಬೆಂಗಳೂರು ಎಪಿಎಂಸಿ ಕಾರ್ಯದರ್ಶಿ ರಾಜಣ್ಣ ತಿಳಿಸಿದರು.
Bannana price hiked to 140 per kilo in Karnataka after tomato price.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am