ಬ್ರೇಕಿಂಗ್ ನ್ಯೂಸ್
19-08-23 07:38 pm HK News Desk ಕರ್ನಾಟಕ
ದಾವಣಗೆರೆ, ಆಗಸ್ಟ್ 19: ದಾವಣೆಗೆರೆ ಮೂಲದ ಒಂದೇ ಕುಟುಂಬದ ಮೂವರು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ಅಮೆರಿಕಾದ ಮೇರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್ ಎಂಬ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಮೃತರನ್ನು ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಹಾಲೆಕಲ್ಲು ಗ್ರಾಮದ ಯೋಗೇಶ್ ಹೊನ್ನಾಳ(37), ಅವರ ಪತ್ನಿ ಪ್ರತಿಭಾ ಹೊನ್ನಾಳ(35), ಅವರ ಪುತ್ರ ಯಶ್ ಹೊನ್ನಾಳ(06) ಎಂದು ಗುರುತಿಸಲಾಗಿದೆ.
ಸಾವಿನ ಸುತ್ತ ಅನುಮಾನದ ಹುತ್ತ ;
ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಯೋಗೇಶ್-ಪ್ರತಿಭಾ ದಂಪತಿಗೆ 9 ವರ್ಷಗಳ ಹಿಂದೆ ಮದುವೆ ಮಾಡಲಾಗಿತ್ತು. ದಂಪತಿಗೆ ಆರು ವರ್ಷದ ಪುತ್ರನಿದ್ದಾನೆ. ಮದುವೆಯ ನಂತರ ದಂಪತಿಗಳು ಅಮೆರಿಕಾದ ಮೇರಿಲ್ಯಾಂಡ್ ರಾಜ್ಯದಲ್ಲಿರುವ ಬಾಲ್ಟಿಮೋರ್ ಎಂಬ ಪ್ರದೇಶದಲ್ಲಿ ನೆಲೆಸಿದ್ದರು. ಎರಡು ದಿನಗಳಿಂದ ಮನೆಯಿಂದ ಯಾರು ಹೊರಬಾರದೆ ಇದ್ದುದ್ದನ್ನು ಗಮನಿಸಿದ ನೆರೆಹೊರೆಯವರು ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ದಂಪತಿಗಳ ಯೋಗಕ್ಷೇಮ ವಿಚಾರಿಸಲೆಂದು ಅವರ ಮನೆಯ ದೂರವಾಣಿ ಸಂಖ್ಯೆಗೆ ಕರೆ ಮಾಡಿದ್ದು, ಯಾರು ಕರೆಯನ್ನು ಸ್ವೀಕರಿಸದೆ ಇದ್ದಾಗ ಅನುಮಾನಗೊಂಡು ಮನೆಯ ಬಳಿ ಬಂದು ಪರಿಶೀಲನೆ ನಡೆಸಿದಾಗ ಮೂವರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಕೂಡಲೇ ಅಧಿಕಾರಿಗಳು ಬೆಂಗಳೂರಿನಲ್ಲಿ ವಾಸವಿರುವ ಯೋಗೇಶ್ ಅವರ ಸಹೋದರನಿಗೆ ವಿಷಯವನ್ನು ತಿಳಿಸಿದ್ದಾರೆ.
ಮೂವರ ಸಾವು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ತನಿಖೆ ನಡೆಸಿ ಸತ್ಯಾಸತ್ಯತೆ ತಿಳಿಸುವಂತೆ ಹಾಗೂ ಮೃತದೇಹಗಳನ್ನು ಆದಷ್ಟು ಬೇಗ ಭಾರತಕ್ಕೆ ತರಿಸಿಕೊಡುವಂತೆ ಯೋಗೇಶ್ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
Davanagere Techie couple along with six year old son found dead at America.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm