ಬ್ರೇಕಿಂಗ್ ನ್ಯೂಸ್
20-08-23 09:45 pm HK News Desk ಕರ್ನಾಟಕ
ದಾವಣಗೆರೆ, ಆಗಸ್ಟ್ 20: ರಾಜ್ಯದ ದಾವಣಗೆರೆ ಮೂಲದ ಯೋಗೇಶ್ ಕುಟುಂಬದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಯೋಗೇಶ್ ಕುಟುಂಬ ಅಮೆರಿಕಾದಲ್ಲಿ ವಾಸವಾಗಿತ್ತು. ಮೂವರ ಶವ ಮನೆಯಲ್ಲಿ ಪತ್ತೆಯಾಗಿದ್ದು, ಆರಂಭದಲ್ಲಿ ಆತ್ಮಹತ್ಯೆ ಎಂದು ವರದಿಯಾಗಿತ್ತು. ಇದೀಗ ಪತ್ನಿ ಪ್ರತಿಭಾ, ಮಗು ಯಶ್ಗೆ ಗುಂಡಕ್ಕಿ ಹತ್ಯೆ ಮಾಡಿ ಕೊನೆಗೆ ಯೋಗೇಶ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಬಾಲ್ಟಿಮೋರ್ ಪೊಲೀಸರು ಸ್ಥಳೀಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಆದರೆ ಕೊಲೆ ಮಾಡಿ ಆತ್ಮಹತ್ಯೆ ಯಾಕೆ ಮಾಡಿಕೊಂಡಿದ್ದು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಆಗಸ್ಟ್ 18 ರಂದು ಪಕ್ಕದ ಮನೆಯವರ ಮಾಹಿತಿ ಮೇರೆ ಯೋಗೇಶ್ ಮನೆಗೆ ಪೊಲೀಸರು ಬಂದಿದ್ದರು. ಒಳಗಿನಿಂದ ಯಾರೂ ಪ್ರತಿಕ್ರಿಯೆ ನೀಡದ ಹಿನ್ನೆಲೆ ಬಾಗಿಲು ಒಡೆದು ನೋಡಿದಾಗ ಯೋಗೇಶ್, ಪ್ರತಿಭಾ ಮತ್ತು ಯಶ್ ಮೃತದೇಹ ಪತ್ತೆಯಾಗಿತ್ತು.
ಡೆತ್ ನೋಟ್ ಪತ್ತೆ ?
ಮೃತಪಟ್ಟ ಜಾಗದಲ್ಲಿ ಡೆತ್ ನೋಟ್ ಪತ್ತೆಯಾಗಿದೆ ಎನ್ನಲಾಗಿದ್ದು, ಈ ಬಗ್ಗೆ ಬಾಲ್ಟಿಮೋರ್ ಪೊಲೀಸರು ಸ್ಪಷ್ಟ ಮಾಹಿತಿ ನೀಡಿಲ್ಲ ಎನ್ನಲಾಗಿದೆ. ಸಾವಿಗೆ ನಿಖರ ಕಾರಣ ಮತ್ತು ಮೃತದೇಹ ತಾಯ್ನಾಡಿಗೆ ತರೆಸುವಂತೆ ಯೋಗೇಶ್ ಕುಟುಂಬಸ್ಥರು ಒತ್ತಾಯಿಸಿದ್ದಾರೆ.
ಕಣ್ಣೀರಿಡುತ್ತಾ ಸರ್ಕಾರಕ್ಕೆ ಮನವಿ ಮಾಡಿರುವ ಮೃತ ಯೋಗೇಶ್ ತಾಯಿ ಶೋಭಾ, ನಮ್ಮ ಬಳಿ ಮಗ ಮತ್ತು ಸೊಸೆ ಯಾವುದೇ ತೊಂದರೆ ಆಗಿರುವ ಬಗ್ಗೆ ಹೇಳಿಕೊಂಡಿಲ್ಲ. ಮದುವೆಯಾಗಿ 9 ವರ್ಷ ಆಗಿದೆ. ಮದುವೆಯಾದ ಸಮಯದಿಂದ ಅಲ್ಲಿಯೇ ಇದ್ದಾರೆ. ನಮ್ಮ ಸೊಸೆ ಬೆಂಗಳೂರು ಮೂಲದವರು, ಯಾವಾಗ? ಏನಾಗಿದೆ ಅಂತ ನಮಗೆ ಮಾಹಿತಿ ಇಲ್ಲ ಎಂದು ಕಣ್ಣೀರಿಟ್ಟಿದ್ದಾರೆ.
Couple from Davangere, son, found dead at home in America, twist of double murder and suicide. Based on the initial investigation, the incident is believed to be a double murder-suicide that Nagarajappa committed," Baltimore County Police spokesperson Anthony Shelton was quoted as saying by The Baltimore Sun newspaper.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm