ಬ್ರೇಕಿಂಗ್ ನ್ಯೂಸ್
07-11-20 10:56 am Bangalore Correspondent ಕರ್ನಾಟಕ
ಬೆಂಗಳೂರು, ನ.07: ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಬಾಧಿತರಾದ ನೌಕರರು ಅಥವಾ ಕಾರ್ಮಿಕರು ಕ್ವಾರಂಟೈನ್ನಲ್ಲಿ ಇರುವ ಅವಧಿಯನ್ನು ಗೈರು ಹಾಜರಿ ಎನ್ನದೆ ರಜೆಯೆಂದು ಪರಿಗಣಿಸುವಂತೆ ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳಿಗೆ ಸರ್ಕಾರ ಆದೇಶಿಸಿದೆ.
ಕೊರೋನಾ ವೈರಸ್ನಿಂದ ಬಾಧಿತರಾಗುವ ವ್ಯಕ್ತಿಗಳು ಕ್ವಾರಂಟೈನ್ನಲ್ಲಿ ಇರಬೇಕಾಗುತ್ತದೆ. ಯಾವುದೇ ಸಂಸ್ಥೆಯ ಕಾರ್ಮಿಕರು ಅವರ ಹಕ್ಕಿನಲ್ಲಿರುವ ರಜೆಗಳನ್ನು ಉಪಯೋಗಿಸಿಕೊಳ್ಳಲು ಅನುವು ಮಾಡಿಕೊಡಬೇಕು. ಇಎಸ್ಐ ವ್ಯಾಪ್ತಿಗೆ ಒಳಪಡದ ಕೊರೋನಾ ರೋಗದಿಂದ ಬಾಧಿತರಾದ ನೌಕರರ ಸಾಮಾಜಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸ್ವಇಚ್ಛೆಯಿಂದ ಕ್ವಾರಂಟೈನ್ ಅವಧಿಗೆ ಅವರ ಹಕ್ಕಿನಲ್ಲಿ ಲಭ್ಯವಿರುವ ರಜೆಯನ್ನು ಮಂಜೂರು ಮಾಡಬೇಕು ಎಂದು ಆದೇಶಿಸಿದೆ.


ಕ್ವಾರಂಟೈನ್ ಕೇಂದ್ರದಲ್ಲಿ ಊಟ, ತಿಂಡಿ ಸರಿಯಾಗಿ ನೀಡುತ್ತಿಲ್ಲ; ಸೋಂಕಿತರ ಆಕ್ರೋಶ
ಕೊರೋನಾ ಬಾಧಿಕ ನೌಕರರು ಇಲ್ಲವೇ ಕಾರ್ಮಿಕರು ಅವರ ಖಾತೆಯಲ್ಲಿ ರಜೆ ಇಲ್ಲದಿದ್ದಲ್ಲಿ, ಇತರ ಕಾರ್ಮಿಕರ ರಜೆಯನ್ನು ವರ್ಗಾಯಿಸಿಕೊಂಡು ನಿಯಮಾನುಸಾರ ಉಪಯೋಗಿಸಿಕೊಳ್ಳಲು ಅನುವು ಮಾಡಿಕೊಡಬೇಕು.
ಕಾರ್ಮಿಕರ ಹಕ್ಕಿನಲ್ಲಿ ರಜೆಯು ಇಲ್ಲದಿದ್ದ ಪಕ್ಷದಲ್ಲಿ ಅಥವಾ ರಜೆಯನ್ನು ಈಗಾಗಲೇ ಸಂಪೂರ್ಣವಾಗಿ ಬಳಸಿಕೊಂಡಿದ್ದಲ್ಲಿ ಮುಂದಿನ ದಿನಗಳಲ್ಲಿ ಅವರು ಪಡೆಯಬಹುದಾದ ರಜೆಯನ್ನು ಮುಂಗಡವಾಗಿ ಉಪಯೋಗಿಸಿಕೊಳ್ಳಲು ಅವಕಾಶ ನೀಡಬೇಕು. ಮಾಲೀಕರು ಸ್ವ ಇಚ್ಛೆಯಿಂದ ರಜೆ ಮಂಜೂರು ಮಾಡಲು ಅವಕಾಶವಾಗದಿದ್ದಲ್ಲಿ ಕಾರ್ಮಿಕರ ಹಕ್ಕಿನ ರಜೆ ಇಲ್ಲದಿದ್ದಲ್ಲಿ ಸದರಿ ಅವಧಿಗೆ ವಿಶೇಷ ರಜೆಯನ್ನು ನೀಡುವ ಕುರಿತು ಮಾಲೀಕರು ಮತ್ತು ಕಾರ್ಮಿಕರು ಉಭಯ ಸಮಾಲೋಚನೆ ನಡೆಸಿ ಬಗೆಹರಿಸಿಕೊಳ್ಳುವಂತೆ ಸರ್ಕಾರ ಹೊರಡಿಸಿರುವ ರಾಜ್ಯಪತ್ರದಲ್ಲಿ ಸ್ಪಷ್ಟಪಡಿಸಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm