ಬ್ರೇಕಿಂಗ್ ನ್ಯೂಸ್
21-08-23 08:37 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 21: ರಾಜ್ಯದ ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಿಕೊಳ್ಳಲು ಮದ್ಯದ ಬೆಲೆಯನ್ನು ಸಿಕ್ಕಾಪಟ್ಟೆ ಏರಿಸಿದ್ದರು. ಆದರೆ ದರ ಏರಿಕೆಯ ಬೆನ್ನಲ್ಲೇ ಮದ್ಯಪ್ರಿಯರು ಕುಡಿಯುವ ಪ್ರಮಾಣವನ್ನೇ ಕಡಿಮೆ ಮಾಡಿದ್ದು ಸರ್ಕಾಕ್ಕೆ ಶಾಕ್ ನೀಡಿದ್ದಾರೆ.
ರಾಜ್ಯ ಸರಕಾರ ಜುಲೈ ತಿಂಗಳಲ್ಲಿ ಮದ್ಯ ಹಾಗೂ ಬಿಯರ್ ಮೇಲಿನ ಅಬಕಾರಿ ಸುಂಕ ಹೆಚ್ಚಿಸಿತ್ತು. ಈ ಮೂಲಕ ಗ್ಯಾರಂಟಿ ಯೋಜನೆಗಳಿಗೆ ಸುಲಭವಾಗಿ ಹಣ ಹೊಂದಾಣಿಕೆ ಮಾಡಲು ಸರ್ಕಾರ ಮಾಸ್ಟರ್ ಪ್ಲಾನ್ ಮಾಡಿತ್ತು. ಆದರೆ ಮದ್ಯಪ್ರಿಯರು ಕುಡಿಯುವ ಪ್ರಮಾಣವನ್ನೇ ಕಡಿಮೆ ಮಾಡಿದ್ದು ಸರ್ಕಾರಕ್ಕೆ ಶಾಕ್ ಕೊಟ್ಟಿದ್ದಾರೆ.
ಕಳೆದ ಒಂದು ತಿಂಗಳಲ್ಲಿ ಮದ್ಯ ಮಾರಾಟದ ಪ್ರಮಾಣವೇ ಶೇ.15ರಷ್ಟು ಕುಸಿತ ಕಂಡಿದೆ. ಹೆಚ್ಚು ಬಿಕರಿಯಾಗುತ್ತಿದ್ದ ಬಿಯರ್ ಮಾರಾಟದಲ್ಲೂ ದಿಢೀರ್ ಕುಸಿತವಾಗಿದೆ. ಮದ್ಯ ಮಾರಾಟದಿಂದ ಪ್ರತಿ ತಿಂಗಳು 2,500 ಕೋಟಿ ರೂ. ಬರುತ್ತಿದ್ದ ಆದಾಯ ಆಗಸ್ಟ್ ತಿಂಗಳಲ್ಲಿ 962 ಕೋಟಿ ರೂ.ಗೆ ಕುಸಿದಿದೆ. ಅಬಕಾರಿ ಸುಂಕ ಹೆಚ್ಚಳ ಆಗುತ್ತಿದ್ದಂತೆ ಬಾರ್, ಚಿಲ್ಲರೆ ಮದ್ಯದ ಅಂಗಡಿಗಳಲ್ಲಿ ಮಾರಾಟ ಕುಸಿದಿದ್ದು ಮದ್ಯ ಪ್ರಿಯರೇ ಕುಡಿಯುವುದನ್ನು ಕಡಿಮೆ ಮಾಡಿರುವುದು ಕಂಡುಬಂದಿದೆ.
ಇದೇ ವೇಳೆ, ಬೆಲೆ ಏರಿಕೆ ಪರಿಣಾಮ ಕಡಿಮೆ ಬೆಲೆಯ ಮದ್ಯಕ್ಕೆ ಬೇಡಿಕೆ ಹೆಚ್ಚಾಗಿದೆ. ಸ್ಕಾಚ್ ಕುಡಿಯುತ್ತಿದ್ದ ಸಿರಿವಂತರು ಪ್ರೀಮಿಯಮ್ ಬ್ರ್ಯಾಂಡ್ಗೆ ಶಿಫ್ಟ್ ಆಗಿದ್ದರೆ, ಪ್ರೀಮಿಯಮ್ ಬ್ರಾಂಡ್ನವರು ನಾರ್ಮಲ್ ಬ್ರ್ಯಾಂಡ್ಗೆ ಶಿಫ್ಟ್ ಆಗಿದ್ದಾರೆ. ಇದರಿಂದ ಸರ್ಕಾರದ ಆದಾಯ ಸಂಗ್ರಹದ ಮೇಲೂ ವ್ಯತಿರಿಕ್ತ ಪರಿಣಾಮ ಆಗಿದೆ.
ಹೀಗಾಗಿ ರಾಜ್ಯ ಪಾನೀಯ ನಿಗಮಕ್ಕೆ ಸಗಟು ವ್ಯಾಪಾರಿಗಳು ಮದ್ಯಕ್ಕಾಗಿ ಸಲ್ಲಿಸುವ ಖರೀದಿ ಬೇಡಿಕೆಯೂ ಒಟ್ಟಾರೆ ಇಳಿಕೆಯಾಗಿದೆ. ಅಬಕಾರಿ ಇಲಾಖೆ ಅಂಕಿ ಅಂಶಗಳ ಪ್ರಕಾರ ಮದ್ಯ ಮಾರಾಟ ಶೇ.15ರಷ್ಟು ಕುಸಿತವಾಗಿದ್ದರೆ, ಬಿಯರ್ ಶೇ.5ರಷ್ಟು ಕುಸಿದಿದೆ. ಇದು ಸರಕಾರದ ಆದಾಯ ಸಂಗ್ರಹದ ಮೇಲೆ ತೀವ್ರ ಪರಿಣಾಮ ಬೀರಿದ್ದು ಸರ್ಕಾರದ ಯೋಜನೆಗಳಿಗೆ ಹಣ ಹೊಂದಿಸಿಕೊಳ್ಳಲು ತೊಡಕಾಗಲಿದೆ.
The state government has increased the price of liquor to accumulate funds for the guarantee schemes that were announced by it as it assumed power. However, the liquor buyers have shocked the government by not buying liquor in quantities that was expected.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm