ಬ್ರೇಕಿಂಗ್ ನ್ಯೂಸ್
21-08-23 10:52 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 21: ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿಗಳ ಅಧ್ಯಕ್ಷರ ಅಧಿಕಾರದ ಅವಧಿಯನ್ನು ಈಗ ಇರುವ ಎರಡೂವರೆ ವರ್ಷದ ಬದಲು ಐದು ವರ್ಷಗಳಿಗೆ ಹೆಚ್ಚಿಸಲು ಕಾಯ್ದೆಗೆ ತಿದ್ದುಪಡಿ ತರುವ ಇಂಗಿತವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಗಳ ಪ್ರಮುಖ ವಿಷಯಗಳಿಗೆ ಸಂಬಂಧಿಸಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸೋಮವಾರ ಉನ್ನತ ಮಟ್ಟದ ಸಭೆ ನಡೆಯಿತು. ಕಾಂಗ್ರೆಸ್ ನೇತೃತ್ವದ ಸರ್ಕಾರವು ಹಿಂದಿನ ಅವಧಿಯಲ್ಲಿ ರೂಪಿಸಿದ್ದ ಕಾಯ್ದೆಯಂತೆ ಪಂಚಾಯಿತಿ ಅಧ್ಯಕ್ಷರಿಗೆ ಐದು ವರ್ಷಗಳ ಅಧಿಕಾರ ಅವಧಿ ನೀಡಲು ಕಾಯ್ದೆಗೆ ಪುನಃ ತಿದ್ದುಪಡಿ ತರುವ ವಿಷಯ ಸಭೆಯಲ್ಲಿ ಪ್ರಸ್ತಾಪವಾಯಿತು.
ಈ ವಿಷಯವನ್ನು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಂಡಿಸಿ, ಶಾಸಕರ ಅಭಿಪ್ರಾಯ ಆಲಿಸಿದ ಬಳಿಕ ಮುಂದುವರಿಯಬೇಕು ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ.
ಹಿಂದಿನ ಐದು ವರ್ಷಗಳ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ₹ 10,500 ಕೋಟಿ ಮೊತ್ತದ 37,000 ಕಾಮಗಾರಿಗಳಿಗೆ ಮಂಜೂರಾತಿ ನೀಡಲಾಗಿದೆ. ₹ 3,500 ಕೋಟಿ ಮಾತ್ರ ಅನುದಾನ ಒದಗಿಸಲಾಗಿತ್ತು. ಈ ಕಾಮಗಾರಿಗಳಿಗೆ ₹ 7,000 ಕೋಟಿ ಬಿಡುಗಡೆ ಮಾಡಬೇಕಿದೆ. ಹಳೆಯ ಬಾಕಿ ಬಿಲ್ ಭಾರ ಹೆಚ್ಚಿರುವುದರಿಂದ ಈ ವರ್ಷವೇ ₹ 3,500 ಕೋಟಿ ಅಗತ್ಯವಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ವರ್ಗಾವಣೆಗೆ ಶಾಸಕರಿಂದ ಮನವಿಗಳು ಬರುತ್ತಲೇ ಇವೆ. ಮುಂದಿನ ವರ್ಷದಿಂದ ಕೌನ್ಸೆಲಿಂಗ್ ಮೂಲಕ ಪಿಡಿಒಗಳ ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದಲ್ಲಿ (ಕೆಆರ್ಐಡಿಎಲ್) ಅಗತ್ಯವಿಲ್ಲದಿದ್ದರೂ 800 ಮಂದಿಯನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡಿದ್ದು, ಈ ಹೊರೆಯನ್ನು ತಗ್ಗಿಸಬೇಕು ಎಂದು ಖರ್ಗೆ ಪ್ರಸ್ತಾಪಿಸಿದ್ದಾರೆ. ಇದಲ್ಲದೆ, ಕಲ್ಯಾಣ ಕರ್ನಾಟಕ ಭಾಗದ ಗ್ರಾಮ ಪಂಚಾಯಿತಿಗಳಿಗೆ ಮುಂದಿನ ವರ್ಷದಿಂದ ತಲಾ ₹ 1 ಕೋಟಿ ಅನುದಾನ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.
Chief Minister Siddaramaiah has proposed to amend the Act to increase the tenure of presidents of gram panchayats, taluk panchayats and zilla panchayats to five years from the existing two-and-a-half years.
28-08-26 12:13 pm
HK News Staffer
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am