ಬ್ರೇಕಿಂಗ್ ನ್ಯೂಸ್
23-08-23 03:35 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 23: ವಿಕ್ರಮ್ ಲ್ಯಾಂಡರ್ ನಿಗದಿಯಂತೆಯೇ ಚಂದ್ರನ ಅಂಗಳ ತಲುಪಲಿದೆ. ಇದಕ್ಕಾಗಿ ಯಾವುದೇ ಪ್ಲಾನ್ ಬಿ ಯೋಜನೆ ಇಸ್ರೋ ಮುಂದಿಲ್ಲ ಎಂದು ಇಸ್ರೋ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಚಂದ್ರಯಾನ -3 ರ ಯೋಜನೆಯಂತೆಯೇ ಎಲ್ಲವೂ ನಡೆಯಲಿದೆ. ಬುಧವಾರ ನಿಗದಿಯಾದಂತೆ ವಿಕ್ರಮ್ ಚಂದ್ರನ ಅಂಗಳದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಮಾಡಲು ಇಸ್ರೋ ಸನ್ನದ್ದವಾಗಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ಯಾವುದೇ ಪ್ಲಾನ್ ಬಿ ಹೊಂದಿಲ್ಲ ಎಂದು ಇಸ್ರೋದ ಉನ್ನತ ಅಧಿಕಾರಿ ತಿಳಿಸಿದ್ದಾರೆ. ವಿಕ್ರಂ ಸಾಫ್ಟ್ ಲ್ಯಾಂಡಿಂಗ್ನಲ್ಲಿ ಯಾವುದೇ ಮುಂದೂಡಿಕೆ ಅಥವಾ ಪ್ಲಾನ್ ಬಿ ಪ್ಲಾನ್ ಅನ್ನು ಇಸ್ರೋ ಹೊಂದಿಲ್ಲ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಧ್ಯಕ್ಷ ಎಸ್. ಸೋಮನಾಥ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪ್ರೊಪಲ್ಷನ್ ಮಾಡ್ಯೂಲ್ ನಿಂದ ಹೊರ ಬಂದಿರುವ ವಿಕ್ರಮ್, ಇಸ್ರೋ ಯೋಜಿಸಿದಂತೆ ಚಂದ್ರನ ಅಂಗಳ ತಲುಪಲು ಹಂತ ಹಂತವಾಗಿ ಮುಂದಡಿ ಇಡುತ್ತಿದ್ದಾನೆ. ಇನ್ನು ಲ್ಯಾಂಡರ್ನ ಎಲ್ಲಾ ವ್ಯವಸ್ಥೆಗಳು ಉತ್ತಮ ಸ್ಥಿತಿಯಲ್ಲಿದೆ ಎಂದು ಇಸ್ರೋ ದೃಢಪಡಿಸಿದೆ. ಲ್ಯಾಂಡರ್ ವ್ಯವಸ್ಥೆಯಲ್ಲಿ ಸಮಸ್ಯೆಗಳಿದ್ದಲ್ಲಿ ಲ್ಯಾಂಡಿಂಗ್ ಅನ್ನು ಆಗಸ್ಟ್ 27 ಕ್ಕೆ ಮುಂದೂಡಲಾಗುವುದು ಎಂದು ಇಸ್ರೋದ ಹಿರಿಯ ತಂತ್ರಜ್ಞರು ಎರಡು ದಿನಗಳ ಹಿಂದೆ ತಿಳಿಸಿದ್ದರು.
ISRO ಪ್ರಕಾರ, ವಿಕ್ರಂ ಲ್ಯಾಂಡರ್ ತನ್ನ ಲ್ಯಾಂಡರ್ ಪೊಸಿಷನ್ ಡಿಟೆಕ್ಷನ್ ಕ್ಯಾಮೆರಾ (LPDC) ಜೊತೆಗೆ ಲ್ಯಾಂಡಿಂಗ್ ಸೈಟ್ನ ಚಿತ್ರಗಳನ್ನು ಸೆರೆಹಿಡಿಯುತ್ತಿದೆ. ಈ ಚಿತ್ರಗಳು ಲ್ಯಾಂಡರ್ ಮಾಡ್ಯೂಲ್ ಅನ್ನು ಆನ್ಬೋರ್ಡ್ ಚಂದ್ರನ ನಕ್ಷೆಯೊಂದಿಗೆ ಹೊಂದಿಸುವ ಮೂಲಕ ಅದರ ಸ್ಥಾನವನ್ನು (ಅಕ್ಷಾಂಶ ಮತ್ತು ರೇಖಾಂಶ) ನಿರ್ಧರಿಸಲು ಸಹಾಯ ಮಾಡುತ್ತದೆ. ವಿಕ್ರಮ್ ಲ್ಯಾಂಡರ್, ಹಜಾರ್ಡ್ ಡಿಟೆಕ್ಷನ್ ಅಂಡ್ ಅವಾಯಿಡೆನ್ಸ್ ಕ್ಯಾಮೆರಾ (LHDAC) ಎಂಬ ಮತ್ತೊಂದು ಕ್ಯಾಮೆರಾವನ್ನು ಸಹ ಹೊಂದಿದೆ. ಈ ಕ್ಯಾಮರಾ ಸುರಕ್ಷಿತವಾಗಿ ಲ್ಯಾಂಡಿಂಗ್ ಆಗಲು ಬೇಕಾದ ಪ್ರದೇಶವನ್ನು ಪತ್ತೆಹಚ್ಚಲು ಸಹಾಯ ಮಾಡುತ್ತದೆ. ಬಂಡೆಗಳು ಅಥವಾ ಆಳವಾದ ಕಂದಕಗಳಿಲ್ಲದ ಜಾಗ ಹುಡುಕಲು ಈ ಕ್ಯಾಮರಾ ಸಹಾಯ ಮಾಡುತ್ತದೆ.
India’s ambitious lunar mission Chandrayaan-3 is set to land on the Moon on August 23, 2023, around 18:04 IST. Ahead of the much-awaited landing of India on the Moon’s south pole, SAC Director revealed ‘Plan-B’ for Chandrayaan-3. The landing of the module will take place on Aug 27 if the factors do not appear favourable on Aug 23, informed SAC Director Desai. In the most recent development, Chandrayaan-2’s orbiter established a two-way connection with Chandrayaan-3’s lander module today.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm