ಬ್ರೇಕಿಂಗ್ ನ್ಯೂಸ್
23-08-23 04:54 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 22: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ–3 ಯೋಜನೆ ಯಶಸ್ವಿಯಾಗಲೆಂದು ವಿಶ್ವದಾದ್ಯಂತ ಶುಭ ಹಾರೈಸಲಾಗುತ್ತಿದೆ.
ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿಯಲು ದೇವಾಲಯಗಳಲ್ಲಿ ವಿಶೇಷ ಪೂಜೆ–ಹವನ ನಡೆಸಲಾಗುತ್ತಿದೆ. ಮಸೀದಿ, ಚರ್ಚ್ಗಳಲ್ಲೂ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ.
ಚಂದ್ರಯಾನ ಯಶಸ್ವಿಯಾಗಲೆಂದು ಜಮ್ಮು ಮತ್ತು ಕಾಶ್ಮೀರದ ಮುಸ್ಲಿಂ ಬಾಂಧವರಿಂದ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವಿಡಿಯೊವನ್ನು ಸುದ್ದಿಸಂಸ್ಥೆ ‘ಎಎನ್ಐ’ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ (ಟ್ವಿಟರ್) ಹಂಚಿಕೊಂಡಿದೆ.
ಚಂದ್ರಯಾನ–3ರ ಚಂದ್ರ ಸ್ಪರ್ಶ ಇಂದು ಸಂಜೆ 6.04 ಕ್ಕೆ ಸರಿಯಾಗಿ ಸಮಯ ನಿಗದಿಪಡಿಸಲಾಗಿದೆ. ಇದಕ್ಕೆ ಪೂರಕವಾಗಿ ಭಾನುವಾರ ಲ್ಯಾಂಡರ್ನ ವೇಗ ತಗ್ಗಿಸಿ, ಚಂದ್ರನ ಮೇಲ್ಮೈಗೆ ಅತ್ಯಂತ ಸನಿಹದಲ್ಲಿ ಅಂದರೆ, 25 ಕಿ.ಮೀ ಕಕ್ಷೆಗೆ ತಂದು ನೆಲೆಗೊಳಿಸಲಾಗಿದೆ. ಲ್ಯಾಂಡರ್ ಈಗ 25 ಕಿ.ಮೀ x 134 ಕಕ್ಷೆಯಲ್ಲಿದೆ.
ನೋದನ ಘಟಕದಿಂದ (ಪ್ರೊಪಲ್ಷನ್ ಮಾಡ್ಯೂಲ್) ಪ್ರತ್ಯೇಕಗೊಂಡ ನಂತರ ಎರಡು ಹಂತಗಳಲ್ಲಿ ಲ್ಯಾಂಡರ್ನ ವೇಗ ತಗ್ಗಿಸುವ ಕಾರ್ಯ ನಡೆದಿದೆ. ಈಗ ಆಂತರಿಕ ತಪಾಸಣೆ ಕಾರ್ಯ ನಡೆಯುತ್ತಿದ್ದು, ಇಳಿದಾಣದ (ಲ್ಯಾಂಡಿಂಗ್ ಸ್ಥಳ) ಪ್ರದೇಶದಲ್ಲಿ ಸೂರ್ಯೋದಯಕ್ಕಾಗಿ ನಿರೀಕ್ಷಿಸಲಾಗುತ್ತಿದೆ. ಬುಧವಾರ ಸಂಜೆ 5.45 ಕ್ಕೆ ಸರಿಯಾಗಿ ಕಕ್ಷೆಯಿಂದ ಲ್ಯಾಂಡರ್ ಅನ್ನು ಕೆಳಗಿಳಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಇಸ್ರೊ ತಿಳಿಸಿದೆ.
ಲ್ಯಾಂಡರ್ (ವಿಕ್ರಮ್) ಸಂಜೆ 6.04 ಕ್ಕೆ ಚಂದ್ರ ಸ್ಪರ್ಶ ಮಾಡಲಿದೆ. ಈ ಇಡೀ ಪ್ರಕಿಯೆಯ ನೇರ ವಿಡಿಯೊ ಪ್ರಸಾರ ಸಂಜೆ 5.27 ಕ್ಕೆ ಆರಂಭವಾಗಲಿದೆ. ಇಸ್ರೊ ವಬ್ಸೈಟ್, ಯೂಟ್ಯೂಬ್ ಚಾನೆಲ್, ಫೇಸ್ಬುಕ್ ಪೇಜ್, ಡಿಡಿ ನ್ಯಾಷನಲ್ ಚಾನೆಲ್ನಲ್ಲಿ ನೇರ ಪ್ರಸಾರವಿರುತ್ತದೆ. ಎಲ್ಲ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗಾಗಿ ನೇರ ಪ್ರಸಾರದ ವೀಕ್ಷಣೆಗೆ ವ್ಯವಸ್ಥೆ ಮಾಡಬೇಕು ಎಂದು ಇಸ್ರೊ ಮನವಿ ಮಾಡಿದೆ.
Prayers in temples, mosques, and churches coincided with the countdown for the Chandrayaan-3 lander’s descent as schoolchildren waited for live screenings of its landing across the country while Prime Minister Narendra Modi was expected to watch it from South Africa amid feverish anticipation on Wednesday.
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
06-09-25 10:37 am
HK News Desk
Mangalore Cow Slaughter, Crime, Arrest: ಪೆರ್ನ...
05-09-25 10:53 pm
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm