ಬ್ರೇಕಿಂಗ್ ನ್ಯೂಸ್
            
                        07-11-20 02:48 pm Bangalore Correspondent ಕರ್ನಾಟಕ
            ಬೆಂಗಳೂರು, ನವೆಂಬರ್ 07: ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಕೆಎಎಸ್ ಅಧಿಕಾರಿ ಡಾ.ಬಿ. ಸುಧಾ ಎಂಬವರ ಮನೆ ಮತ್ತು ಕಚೇರಿ ಸೇರಿ ಏಕಕಾಲದಲ್ಲಿ ಆರು ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಈ ಹಿಂದೆ ಬೆಂಗಳೂರಿನಲ್ಲಿ ಬಿಡಿಎ ಭೂಸ್ವಾಧೀನಾಧಿಕಾರಿಯಾಗಿದ್ದ ಡಾ.ಸುಧಾ, ಈಗ ಐಟಿ ಬಿಟಿ ಕಚೇರಿಯಲ್ಲಿ ಅಧಿಕಾರಿಯಾಗಿದ್ದಾರೆ. ಬಿಡಿಎ ಅಧಿಕಾರಿಯಾಗಿದ್ದ ವೇಳೆ ಸಾಕಷ್ಟು ಅವ್ಯವಹಾರ ಮಾಡಿಕೊಂಡು ಅಕ್ರಮ ಆಸ್ತಿ ಗಳಿಸಿದ್ದಾರೆಂದು ಸಾರ್ವಜನಿಕರೊಬ್ಬರು ನ್ಯಾಯಾಲಯಕ್ಕೆ ದೂರು ನೀಡಿದ್ದರು. ಕೋರ್ಟ್ ನಿರ್ದೇಶನದಂತೆ ಭ್ರಷ್ಟಾಚಾರ ನಿಗ್ರಹ ದಳದ ಬೆಂಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ವಿವಿಧ ಜಿಲ್ಲೆಗಳ ಎಸಿಬಿ ಘಟಕದ ಅಧಿಕಾರಿಗಳು ಇಂದು ಬೆಳಗ್ಗೆಯೇ ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಕೊಡಿಗೇಹಳ್ಳಿ ಬಳಿಯಲ್ಲಿರುವ ನಿವಾಸ, ಯಲಹಂಕದ ನೆಹರೂ ಶಿವನಹಳ್ಳಿ ಎಂಬಲ್ಲಿ ಫ್ಯ್ಲಾಟ್, ಬಳ್ಳಾರಿ ರಸ್ತೆ ಬ್ಯಾಟರಾಯನಪುರದಲ್ಲಿರುವ ಪರಿಚಿತರ ಮನೆ, ಮೈಸೂರು ನಗರ ಶ್ರೀರಾಂಪುರದಲ್ಲಿರುವ ಪರಿಚಿತರ ಮನೆ, ಉಡುಪಿ ಜಿಲ್ಲೆಯ ಹೆಬ್ರಿ ರಸ್ತೆಯ ಚಾಂತಾರು ತೆಂಕಬೆಟ್ಟಿನಲ್ಲಿರುವ ವಾಸದ ಮನೆ ಹಾಗೂ ಶಾಂತಿನಗರದಲ್ಲಿರುವ ಐಟಿ ಬಿಟಿ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.


ಕೇಜಿಗಟ್ಟಲೆ ಬಂಗಾರ, ಚಿನ್ನದ ಡಾಬಾ ಪತ್ತೆ
ಕೊಡಿಗೇಹಳ್ಳಿಯ ಮನೆಗೆ ದಾಳಿ ನಡೆಸಿದ್ದ ಅಧಿಕಾರಿಗಳಿಗೆ ಅಲ್ಲಿನ ಆಸ್ತಿ ನೋಡಿ ಶಾಕ್ ಆಗಿದೆ. ಮನೆಯಲ್ಲಿ ಕೇಜಿಗಟ್ಟಲೆ ಬಂಗಾರ, 10 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ಚಿನ್ನದ ಡಾಬಾ, ಕಾಸಿನ ಸರ, ಉಂಗುರ ಸೇರಿ ಆಭರಣಗಳನ್ನು ಜಪ್ತಿ ಮಾಡಲಾಗಿದೆ. ಚಿನ್ನದ ಸರಗಳು ಮತ್ತು ಕಿವಿಯೋಲೆಗಳ ರಾಶಿಯೇ ಪತ್ತೆಯಾಗಿದೆ. ಸತತ 5 ಗಂಟೆಯಿಂದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು ಬಗೆದಷ್ಟು ಆಸ್ತಿ ಪತ್ತೆಯಾಗುತ್ತಿದೆ.

ಗಂಡನ ಹೆಸರಲ್ಲಿ ಉದ್ಯಮದಲ್ಲಿ ಭಾರೀ ಹೂಡಿಕೆ
ಉಡುಪಿ ಜಿಲ್ಲೆಯ ಬಾರ್ಕೂರಿನ ಸ್ಟೋಯಿನಿ ಪಾಯಸ್ ಎಂಬವರನ್ನು ಮದುವೆಯಾಗಿದ್ದ ಡಾ.ಸುಧಾ, ಉಡುಪಿಯಲ್ಲೂ ಈ ಹಿಂದೆ ಭೂ ಸ್ವಾಧೀನಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಈ ವೇಳೆ, ಉಡುಪಿ ಸೇರಿ ಹಲವು ಕಡೆ ಹಣ ಹೂಡಿಕೆ ಮಾಡಿದ್ದ ಸುಧಾ ಗಂಡನ ಹೆಸರಲ್ಲಿ ಹತ್ತಾರು ಉದ್ಯಮಗಳನ್ನು ಹೊಂದಿದ್ದರು. ಕುಂದಾಪುರದ ಕಂದಾವರದಲ್ಲಿ ಒಂದೂವರೆ ಕೋಟಿ ಬೆಲೆಯ ಆಸ್ತಿ ಹೊಂದಿರುವ ಸುಧಾ, ಬ್ರಹ್ಮಾವರದ ವಡ್ಡರ್ಸೆಯಲ್ಲಿ 82 ಲಕ್ಷ ರೂ. ಬೆಲೆಯ ಸೈಟ್ ಹೊಂದಿದ್ದಾರೆ ಎನ್ನಲಾಗುತ್ತಿದೆ.
            
            
            Sleuths of Anti-Corruption Bureau (ACB) on Saturday raided houses of KAS officer B Sudha and seized 10 lakh cash, gold, documents pertaining to properties which are allegedly disproportionate to her known sources of income.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 05:06 pm
                        
            
                  
                Mangalore Correspondent    
            
                    
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm