ಬ್ರೇಕಿಂಗ್ ನ್ಯೂಸ್
28-08-23 03:52 pm HK News Desk ಕರ್ನಾಟಕ
ಬಾಗಲಕೋಟೆ, ಆಗಸ್ಟ್ 28: ಶಿವಾಜಿ ಮಹಾರಾಜರು ಇಲ್ಲದೆ ಹೋಗಿದ್ದರೆ ನಾವೆಲ್ಲಾ ಹಿಂದು ಆಗಿ ಇರೋಕೆ ಸಾಧ್ಯವೇ ಇರಲಿಲ್ಲ. ನಮ್ದೆಲ್ಲ ಕಟ್ಟಾಗಿ ಹೋಗಿರ್ತಿತ್ತು!, ಹೀಗೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಮಾಜಿ ಸಚಿವ, ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ
ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಪ್ರತಿಮೆ ತೆರವು ವಿವಾದಕ್ಕೆ ಪ್ರತಿಕ್ರಿಯಿಸುತ್ತಾ ಬಾಯಿ ಮಾತು ಮಾತ್ರವಲ್ಲ, ಕೈಸನ್ನೆಯಲ್ಲೂ ಮಾತನಾಡಿದರು. ಎಲ್ಲ ಕಟ್ ಆಗಿ ಹೋಗಿರ್ತಿದ್ವಿ ಎಂದು ಹೇಳಿ ಕೈ ಸನ್ನೆ ಮೂಲಕ ಪರೋಕ್ಷವಾಗಿ ನಾವೆಲ್ಲ ಮುಸ್ಲಿಂ ಆಗಿರುತ್ತಿದ್ದೆವು ಎಂದು ಹೇಳಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದೆ.
ʻʻದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರನ್ನು ಅಪಮಾನ ಮಾಡೋದ್ರಿಂದ ಮುಸಲ್ಮಾನರ ಮತಗಳು ತಮಗೆ ಬರುತ್ತೆ ಎಂಬ ಭ್ರಮೆಯಲ್ಲಿದ್ದಾರೆ ಅವರು. ಕಾಂಗ್ರೆಸ್ನವರು ದೇಶ ದ್ರೋಹಿಗಳಿಗೆ ಬೆಂಬಲ ಕೊಡುತ್ತಿದ್ದಾರೆ. ಛತ್ರಪತಿ ಶಿವಾಜಿ ಅವರ ಪ್ರತಿಮೆ ಸ್ಥಾಪನೆ ಮಾಡಿ ಎರಡು ದಿನ ಆದ ಬಳಿಕ ಯಾಕೆ ತೆರವು ಮಾಡಿದರು. ಶಿವಾಜಿ ಪ್ರತಿಮೆ ತೆರವು ಮಾಡುವಂತೆ ಒಬ್ಬ ಸಚಿವರು ಡಿಸಿ ಮತ್ತು ಎಸ್ಪಿಗೆ ಧಮಕಿ ಹಾಕಿದರು ಎಂದು ಹೇಳಿದರು.

ʻʻಶಿವಾಜಿ ಪ್ರತಿಮೆ ತೆರವು ಕೇವಲ ಬಾಗಲಕೋಟೆಗೆ ಮಾಡಿದ ಅವಮಾನ ಅಲ್ಲ. ಇದು ಈಡೀ ಹಿಂದೂ ಸಮಾಜಕ್ಕೆ ಮಾಡಿದ ಅವಮಾನ. ಇದರ ಫಲವನ್ನು ಮುಂದೆ ಅನುಭವಿಸ್ತಾರೆ ಅನುಭವಿಸಲಿʼʼ ಎಂದು ಹೇಳುತ್ತಾ, ʻʻಶಿವಾಜಿ ಮಹಾರಾಜರು ಇರಲಿಲ್ಲ ಅಂದ್ರೆ ಇಂದು ನಾವು-ನೀವು ಇರುತ್ತಿರಲಿಲ್ಲ. ನಾನು ಸೀರಿಯಸ್ ಆಗಿ ಹೇಳ್ತೀನಿ, ಎಲ್ಲಾ ಕಟ್ ಆಗಿ ಹೋಗ್ತಿತ್ತುʼʼ ಎಂದು ಹೇಳಿದರು.
ನಾನು "ಕಟ್ ಆಗ್ತಿತ್ತು" ಹೇಳಿಕೆ ನೀಡಿದ್ದಕ್ಕೆ ಯಾರಾದರೂ ಕೇಸು ಹಾಕುವುದಿದ್ದರೆ ಹಾಕಲಿ ಎಂದೂ ಈಶ್ವರಪ್ಪ ಸವಾಲು ಹಾಕಿದರು. ಶಿವಾಜಿ ಮಹಾರಾಜರು ದೇಶದಲ್ಲಿದ್ದಿದ್ದಕ್ಕೇ ನಾವೆಲ್ಲ ಹಿಂದೂಗಳಾಗಿ ಉಳಿದಿದ್ದೇವೆ ಎಂದು ಮತ್ತೊಮ್ಮೆ ಹೇಳಿದರು.
Without Shivaji, Hindus would have been converted to Islam’: KS Eshwarappa sparks controversy in Bagalkot. If there was no Chhatrapati Shivaji Maharaj, it would not have been possible for me and you to remain as Hindus. Even we would have been cut (circumcised). I am talking seriously and I am not scared of cases.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm