ಬ್ರೇಕಿಂಗ್ ನ್ಯೂಸ್
30-08-23 10:59 am HK News Desk ಕರ್ನಾಟಕ
ಹೊಸಪೇಟೆ, ಆಗಸ್ಟ್ ,30: ಐತಿಹಾಸಿಕ ಕ್ಷೇತ್ರ ಹಂಪಿಯ ವಿಜಯ ವಿಠ್ಠಲ ದೇವಸ್ಥಾನದ ಆವರಣದಲ್ಲಿ ಅಪರೂಪದ ಬಿಳಿ ಬಣ್ಣದ ಮಣ್ಣು ಮುಕ್ಕ ಹಾವು ಪತ್ತೆಯಾಗಿದ್ದು, ಈ ಹಾವು ಯಾವ ಪ್ರಭೇದದ್ದು ಎಂದು ಗುರುತಿಸಲಾಗದೇ ಅಲ್ಲಿನ ಭದ್ರತಾ ಸಿಬ್ಬಂದಿ ಹಾಗೂ ಪ್ರವಾಸಿಗರು ಗೊಂದಲಕ್ಕೀಡಾಗಿದ್ದರು.
ಹಾವು ಪತ್ತೆಯಾದ ವಿಷಯ ತಿಳಿದ ಕಮಲಾಪುರದ ಹಾವು(ಉರಗ) ಮತ್ತು ವನ್ಯಜೀವಿ ರಕ್ಷಕ ಮಲ್ಲಿಕಾರ್ಜುನ ಜಿ.ಬಿ ಅವರು ಸ್ಥಳಕ್ಕೆ ಬಂದು ಈ ಹಾವನ್ನು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ.
ಇದು ಬೇರೆಯ ಜಾತಿ ಹಾವಲ್ಲ. ಚರ್ಮಕ್ಕೆ ಬಣ್ಣ ನೀಡುವ ವರ್ಣ ದ್ರವ್ಯ ಗ್ರಂಥಿ ಅಂದರೆ ಮೆಲಾಲಿನ್ ಅಥವಾ ಪಿಗ್ಮೆಂಟ್ ಕೊರತೆಯಿಂದ ಚರ್ಮಕ್ಕೆ ಬಣ್ಣ ಬರದೇ ಈ ರೀತಿ ಬಿಳಿ ಬಣ್ಣಕ್ಕೆ ಕಾರಣವಾಗುತ್ತದೆ. ಇದನ್ನು ಅಲ್ಬಿನೋ ಸ್ನೇಕ್ಸ್ ಎಂದು ಕೂಡಾ ಕರೆಯುತ್ತಾರೆ ಎಂದು ಅನಿಮಲ್ ಕನ್ಸರ್ವೇಷನ್ ಸಂಸ್ಥೆಯ ಮುಖ್ಯಸ್ಥರು ಹಾಗೂ ಹಾವು(ಉರಗ) ಮತ್ತು ವನ್ಯ ಜೀವಿ ರಕ್ಷಕ ವೇಣುಗೋಪಾಲ್ ನಾಯ್ಡು ತಿಳಿಸಿದರು.
ಇದು ಅನುವಂಶಿಕ ಅಸಹಜತೆಯಾಗಿದೆ. ಇವುಗಳ ಅಸಹಜತೆ, ವರ್ಣದ್ರವ್ಯ ಮತ್ತು ಬಣ್ಣದಿಂದಾಗಿ ಈ ಹಾವುಗಳನ್ನು ‘ಅಪರೂಪ’ದ ಹಾವು ಎಂದು ಕರೆಯುತ್ತಾರೆ. ಬಹುಶಃ ಕರ್ನಾಟಕದಲ್ಲಿ ಮೊದಲನೇ ಬಾರಿಗೆ ಇಂತಹ ಅಪರೂಪದ ಸಾಮಾನ್ಯ ಬಿಳಿ ಮಣ್ಣು ಮುಕ್ಕ ಹಾವು (albino Common Sand Boa) ಕಂಡುಬಂದಿದೆ. ಈ ಹಾವುಗಳು ವಿಷಕಾರಿಯಲ್ಲದ ಹಾವಾಗಿದೆ.
ಈ ಮಣ್ಣು ಮುಕ್ಕ ಹಾವುಗಳಲ್ಲಿ ಮೂರು ಜಾತಿಯ ಹಾವುಗಳಿದ್ದು, ಸಾಮಾನ್ಯ ಮಣ್ಣು ಮುಕ್ಕ ಹಾವು (Common Sand Boa), ಕೆಂಪು ಮಣ್ಣು ಮುಕ್ಕ ಹಾವು (Red Sand Boa), ಹಾಗೂ ವೇಟೆಕಾರ್ ಮಣ್ಣು ಮುಕ್ಕ (Whitaker’s Boa) ಹಾವುಗಳಿವೆ ಎಂದು ಉರಗ ರಕ್ಷಕ ಮಲ್ಲಿಕಾರ್ಜುನ್ ಅಭಿಪ್ರಾಯವಾಗಿದೆ.
A rare common white coloured mud mukka snake has been found in the premises of Vijaya Vittala Temple in Hampi. Reptile and wildlife conservationist Mallikarjuna G.B. The snake was rescued and released to a safe place.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am