ಬ್ರೇಕಿಂಗ್ ನ್ಯೂಸ್
30-08-23 10:59 am HK News Desk ಕರ್ನಾಟಕ
ಹೊಸಪೇಟೆ, ಆಗಸ್ಟ್ ,30: ಐತಿಹಾಸಿಕ ಕ್ಷೇತ್ರ ಹಂಪಿಯ ವಿಜಯ ವಿಠ್ಠಲ ದೇವಸ್ಥಾನದ ಆವರಣದಲ್ಲಿ ಅಪರೂಪದ ಬಿಳಿ ಬಣ್ಣದ ಮಣ್ಣು ಮುಕ್ಕ ಹಾವು ಪತ್ತೆಯಾಗಿದ್ದು, ಈ ಹಾವು ಯಾವ ಪ್ರಭೇದದ್ದು ಎಂದು ಗುರುತಿಸಲಾಗದೇ ಅಲ್ಲಿನ ಭದ್ರತಾ ಸಿಬ್ಬಂದಿ ಹಾಗೂ ಪ್ರವಾಸಿಗರು ಗೊಂದಲಕ್ಕೀಡಾಗಿದ್ದರು.
ಹಾವು ಪತ್ತೆಯಾದ ವಿಷಯ ತಿಳಿದ ಕಮಲಾಪುರದ ಹಾವು(ಉರಗ) ಮತ್ತು ವನ್ಯಜೀವಿ ರಕ್ಷಕ ಮಲ್ಲಿಕಾರ್ಜುನ ಜಿ.ಬಿ ಅವರು ಸ್ಥಳಕ್ಕೆ ಬಂದು ಈ ಹಾವನ್ನು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ.
ಇದು ಬೇರೆಯ ಜಾತಿ ಹಾವಲ್ಲ. ಚರ್ಮಕ್ಕೆ ಬಣ್ಣ ನೀಡುವ ವರ್ಣ ದ್ರವ್ಯ ಗ್ರಂಥಿ ಅಂದರೆ ಮೆಲಾಲಿನ್ ಅಥವಾ ಪಿಗ್ಮೆಂಟ್ ಕೊರತೆಯಿಂದ ಚರ್ಮಕ್ಕೆ ಬಣ್ಣ ಬರದೇ ಈ ರೀತಿ ಬಿಳಿ ಬಣ್ಣಕ್ಕೆ ಕಾರಣವಾಗುತ್ತದೆ. ಇದನ್ನು ಅಲ್ಬಿನೋ ಸ್ನೇಕ್ಸ್ ಎಂದು ಕೂಡಾ ಕರೆಯುತ್ತಾರೆ ಎಂದು ಅನಿಮಲ್ ಕನ್ಸರ್ವೇಷನ್ ಸಂಸ್ಥೆಯ ಮುಖ್ಯಸ್ಥರು ಹಾಗೂ ಹಾವು(ಉರಗ) ಮತ್ತು ವನ್ಯ ಜೀವಿ ರಕ್ಷಕ ವೇಣುಗೋಪಾಲ್ ನಾಯ್ಡು ತಿಳಿಸಿದರು.
ಇದು ಅನುವಂಶಿಕ ಅಸಹಜತೆಯಾಗಿದೆ. ಇವುಗಳ ಅಸಹಜತೆ, ವರ್ಣದ್ರವ್ಯ ಮತ್ತು ಬಣ್ಣದಿಂದಾಗಿ ಈ ಹಾವುಗಳನ್ನು ‘ಅಪರೂಪ’ದ ಹಾವು ಎಂದು ಕರೆಯುತ್ತಾರೆ. ಬಹುಶಃ ಕರ್ನಾಟಕದಲ್ಲಿ ಮೊದಲನೇ ಬಾರಿಗೆ ಇಂತಹ ಅಪರೂಪದ ಸಾಮಾನ್ಯ ಬಿಳಿ ಮಣ್ಣು ಮುಕ್ಕ ಹಾವು (albino Common Sand Boa) ಕಂಡುಬಂದಿದೆ. ಈ ಹಾವುಗಳು ವಿಷಕಾರಿಯಲ್ಲದ ಹಾವಾಗಿದೆ.
ಈ ಮಣ್ಣು ಮುಕ್ಕ ಹಾವುಗಳಲ್ಲಿ ಮೂರು ಜಾತಿಯ ಹಾವುಗಳಿದ್ದು, ಸಾಮಾನ್ಯ ಮಣ್ಣು ಮುಕ್ಕ ಹಾವು (Common Sand Boa), ಕೆಂಪು ಮಣ್ಣು ಮುಕ್ಕ ಹಾವು (Red Sand Boa), ಹಾಗೂ ವೇಟೆಕಾರ್ ಮಣ್ಣು ಮುಕ್ಕ (Whitaker’s Boa) ಹಾವುಗಳಿವೆ ಎಂದು ಉರಗ ರಕ್ಷಕ ಮಲ್ಲಿಕಾರ್ಜುನ್ ಅಭಿಪ್ರಾಯವಾಗಿದೆ.
A rare common white coloured mud mukka snake has been found in the premises of Vijaya Vittala Temple in Hampi. Reptile and wildlife conservationist Mallikarjuna G.B. The snake was rescued and released to a safe place.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm