ಬ್ರೇಕಿಂಗ್ ನ್ಯೂಸ್
08-11-20 11:07 am Headline Karnataka News Network ಕರ್ನಾಟಕ
ಬೆಂಗಳೂರು, ನವೆಂಬರ್ 8: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ವಿರುದ್ಧ ದಾಖಲಾಗಿದ್ದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ಉಲ್ಲೇಖಿಸಿದ್ದ ಹೊರತಾಗ್ಯೂ ಅದನ್ನು ಬದಿಗೊತ್ತಿ ಕೇಸನ್ನು ವಿಶೇಷ ನ್ಯಾಯಾಲಯಕ್ಕೆ ರಾಜ್ಯ ಹೈಕೋರ್ಟ್ ಹಿಂತಿರುಗಿಸಿದೆ.
ಅಲ್ಲದೆ, ಸಚಿವ ಸಿ ಟಿ ರವಿ ವಿರುದ್ಧ ಎ.ಸಿ ಕುಮಾರ್ ಎಂಬುವವರು ಸಲ್ಲಿಸಿದ್ದ ದೂರಿಗೆ ಪೂರಕವಾಗಿ ಆರೋಪಕ್ಕೆ ಸಂಬಂಧಪಟ್ಟು ಹೆಚ್ಚುವರಿ ಅಫಿಡವಿಟ್ಟು ಸಲ್ಲಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಚಿಕ್ಕಮಗಳೂರು ನಿವಾಸಿಯಾಗಿರುವ ಎ.ಸಿ ಕುಮಾರ್ ಅವರು ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ದೂರು ನೀಡಿದ್ದರು. ಇದರಿಂದಾಗಿ ಎಸಿಬಿಗೂ ಈ ಬಗ್ಗೆ ಪ್ರತ್ಯೇಕ ದೂರು ಸಲ್ಲಿಸಲು ನ್ಯಾಯಾಲಯ ಅವಕಾಶ ನೀಡಿದೆ.
ಎ.ಸಿ ಕುಮಾರ್ ಅವರು, ಸಿ.ಟಿ ರವಿ ವಿರುದ್ಧ 2012ರಲ್ಲಿ ಖಾಸಗಿ ದೂರು ನೀಡಿ 2004ರಿಂದ 2010ರ ಮಧ್ಯೆ ಬಲ್ಲ ಮೂಲಗಳ ಆದಾಯದ ಹೊರತಾಗಿ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ಆರೋಪಿಸಿದ್ದರು. ಈ ಸಮಯದಲ್ಲಿ ಅವರ ಬಲ್ಲ ಆದಾಯದ ಮೂಲ 49 ಲಕ್ಷ ರೂಪಾಯಿ ಆಗಿದ್ದರೆ ಅವರ ಆಸ್ತಿ ಗಳಿಕೆ 3.18 ಕೋಟಿಯಷ್ಟಿದೆ. ಇಷ್ಟೊಂದು ಗಳಿಕೆ ಹೊಂದಲು ಹೇಗೆ ಸಾಧ್ಯ ಎಂದು ಎ ಸಿ ಕುಮಾರ್ ಪ್ರಶ್ನಿಸಿದ್ದರು.
ಈ ನಡುವೆ, 2015ರಲ್ಲಿ ಸುಪ್ರೀಂ ಕೋರ್ಟ್, ದೂರು ನೀಡಿದವರು ಕಡ್ಡಾಯವಾಗಿ ದೂರಿಗೆ ಪೂರಕವಾಗಿ ಅಫಿಡವಿಟ್ಟು ಸಲ್ಲಿಸಬೇಕೆಂದು ಆದೇಶ ನೀಡಿತ್ತು. ಈ ಆದೇಶ ಹಿನ್ನೆಲೆಯಲ್ಲಿ ಸಿಟಿ ರವಿ ಪರ ವಕೀಲರು, ದೂರು ನೀಡಿದವರು ಅದಕ್ಕೆ ಪೂರಕವಾಗಿ ಅಫಿಡವಿಟ್ಟು ಸಲ್ಲಿಸಿಲ್ಲ, ಹಾಗಾಗಿ ಇಡೀ ಪ್ರಕರಣವನ್ನು ಕೈಬಿಡಬೇಕೆಂದು ಹೈಕೋರ್ಟ್ ಮೊರೆ ಹೋಗಿದ್ದರು.
In a partial relief to BJP national general secretary C.T. Ravi, the High Court of Karnataka has set aside a 2016 special court order directing the Anti-Corruption Bureau (ACB) to probe a disproportionate assets allegation made against him in a private complaint.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am