ಬ್ರೇಕಿಂಗ್ ನ್ಯೂಸ್
31-08-23 06:56 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಆಗಸ್ಟ್ 31: ರೈಲಿನಲ್ಲಿ ಪ್ರಯಾಣ ಮಾಡುವಾಗ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲಿ ಇಳಿಯುತ್ತಿದಂತೆ ಅವಳಿ ಮಕ್ಕಳಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ಕಲ್ಬುರ್ಗಿ ಜಿಲ್ಲೆಯ ಚಂದ್ರಮ್ಮ ಅವಳಿ ಮಕ್ಕಳಿಗೆ ಜನ್ಮ ನೀಡಿದವರು. ಇವರು 8 ತಿಂಗಳ ಗರ್ಭಿಣಿಯಾಗಿದ್ದು, ಬೆಂಗಳೂರಿನಲ್ಲಿ ವಾಸವಾಗಿದ್ದರು. ಚಿತ್ತಾಪುರ ಗ್ರಾಮದ ಸಂಬಂಧಿಕರ ಮನೆಗೆ ಸಹೋದರ ಹಾಗೂ ಸಂಬಂಧಿಕರೊಂದಿಗೆ ಉದ್ಯಾನ್ ಎಕ್ಸ್ಪ್ರೆಸ್ ಮೂಲಕ ಕಲಬುರಗಿಗೆ ಪ್ರಯಾಣಿಸುತ್ತಿದ್ದರು.
ರೈಲು ಬೆಂಗಳೂರಿನಿಂದ ಯಲಹಂಕ ತಲಪುವಷ್ಟರಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದೆ. ರೈಲ್ವೆ ಕಂಟ್ರೋಲ್ ರೂಂಗೆ ಕರೆ ಮಾಡಿ, ಸಹಾಯಕ್ಕೆ ಮನವಿ ಮಾಡಿದ್ದರು. ಅದರಂತೆ, ಗೌರಿಬಿದನೂರು ರೈಲ್ವೆ ನಿಲ್ದಾಣದಲ್ಲಿ ಇಳಿದು ನಗರದ ತಾಯಿ ಹಾಗೂ ಮಕ್ಕಳ ಆಸ್ಪತ್ರೆಗೆ ದಾಖಲಿಸಲು ಸಿದ್ಧತೆ ಮಾಡಲಾಗಿತ್ತು.
ಆದರೆ, ಚಂದ್ರಮ್ಮಗೆ ಗೌರಿಬಿದನೂರು ರೈಲ್ವೆ ನಿಲ್ದಾಣಕ್ಕೆ ಬರುತ್ತಿದ್ದಂತೆ ಹೆರಿಗೆ ನೋವು ಮತ್ತಷ್ಟು ಹೆಚ್ಚಾಗಿ ನಿಲ್ದಾಣದ ಫ್ಲಾಟ್ ಫಾರ್ಮ್ನಲ್ಲೇ ಅವರಿಗೆ ಹೆರಿಗೆಯಾಗಿದೆ. ತಾಯಿ ಹಾಗೂ ಇಬ್ಬರು ಮಕ್ಕಳು ಆರೋಗ್ಯವಾಗಿದ್ದಾರೆ. ಗೌರಿಬಿದನೂರು ತಾಯಿ ಹಾಗೂ ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೈಕೆ ಮಾಡಲಾಗುತ್ತಿದೆ.
A pregnant woman delivered twins on the platform of the Gauribidanur railway station after going into labour on Wednesday night before she could be shifted to a hospital. Chandramma, who was eight months pregnant and hails from Kalaburagi, was travelling by Udyan Express to Chittapur village to attend a function at a relative’s house along with her brother and another woman relative. By the time the train reached Yelahanka, she had developed labour pains.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm