ಬ್ರೇಕಿಂಗ್ ನ್ಯೂಸ್
08-11-20 01:22 pm Headline Karnataka News Network ಕರ್ನಾಟಕ
ರಾಮನಗರ, ನವೆಂಬರ್ 8: ಸದಾ ಓದು ಎನ್ನುವ ಪೋಷಕರ ಕಾಟ ತಪ್ಪಿಸಿಕೊಳ್ಳಲು ಹಾಗೂ ಹಣಕ್ಕಾಗಿ ಅಪಹರಣದ ನಾಟಕ ಮಾಡಿ ತನ್ನ ಹೆತ್ತವರನ್ನೇ ಬಾಲಕ ಬೇಸ್ತು ಬೀಳಿಸಿರುವ ಘಟನೆ ರಾಮನಗರ ಜಿಲ್ಲೆ ಕನಕಪುರದಲ್ಲಿ ನಡೆದಿದೆ.
ತಮಿಳುನಾಡು ಮೂಲದ ಬಟ್ಟೆ ಅಂಗಡಿ ಮಾಲೀಕ ಮನೋಹರ್ ಎಂಬುವವರ ಪುತ್ರ ಸರ್ವೇಶ್ (16) ಕಳೆದ ಶುಕ್ರವಾರ ಸೈಬರ್ ಸೆಂಟರ್ಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ. ರಾತ್ರಿಯಾದರೂ ಮನೆಗೆ ವಾಪಸ್ಸು ಬಾರದ ಕಾರಣ ಆತಂಕಗೊಂಡ ಪೋಷಕರು, ಮಗ ಕಾಣೆಯಾಗಿದ್ದಾನೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ನಡುವೆ ಬಾಲಕನ ಪಕ್ಕದ ಮನೆಯವರ ಮೊಬೈಲಿಗೆ ಹುಡುಗನನ್ನು ಶೌಚಾಲಯದಲ್ಲಿ ಕೈ-ಕಾಲು ಕಟ್ಟಿ ಹಾಕಿರೋ ಸ್ಥಿತಿಯಲ್ಲಿರುವ ಫೋಟೋವನ್ನು ರವಾನಿಸಿ, 5 ಲಕ್ಷ ರುಪಾಯಿಗೆ ಅಪಹರಣಕಾರರು ಬೇಡಿಕೆಯಿಟ್ಟಿದ್ದರು. ನಂತರ ಬಾಲಕನ ಫೋಟೋ ವೈರಲ್ ಆಗಿದ್ದರಿಂದ ಜನರು ಆತಂಕಕ್ಕೆ ಒಳಗಾಗಿದ್ದರು.
ಪ್ರಕರಣ ಬೆನ್ನತ್ತಿದ ಪೊಲೀಸರು, ಬಾಲಕನ್ನು ತಿರುಪತಿ ಬಳಿ ಲಾಡ್ಜ್ ನಲ್ಲಿ ಪತ್ತೆ ಹಚ್ಚಿದ್ದಾರೆ. ಪೋಷಕರನ್ನು ಬೆದರಿಸಲು ಬಾಲಕನೇ ಅಪಹರಣದ ನಾಟಕವಾಡಿದ್ದಾನೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಗಿರೀಶ್, ಬಾಲಕ ಪೋಷಕರಿಂದ ಹಣ ಕೀಳಲು ಹಾಗೂ ಓದು ಎಂದು ಒತ್ತಾಯ ಮಾಡುವುದರಿಂದ ತಪ್ಪಿಸಿಕೊಳ್ಳಲು ಸ್ವಯಂ ಅಪಹರಣದ ನಾಟಕ ಸೃಷ್ಟಿಸಿದ್ದಾನೆ ಎಂದು ತಿಳಿಸಿದ್ದಾರೆ. ಬಾಲಕನನ್ನು ತಿರುಪತಿಯಿಂದ ಕರೆತಂದು ಕನಕಪುರ ನಗರ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರೆದಿದೆ. ಇನ್ನು ಬಾಲಕನಿಗೆ ಅಪಹರಣ ಎಂದು ಬಿಂಬಿಸಲು ಯಾರೆಲ್ಲ ಸಹಾಯ ಮಾಡಿದ್ದಾರೆ ಎಂಬುದು ಪೊಲೀಸ್ ತನಿಖೆಯಿಂದ ಬಯಲಾಗಬೇಕಿದೆ.
A boy was allegedly involved in a drama of kidnapping for the sake of getting money from his parents. The incident took place in Kanakapura, Ramanagara district.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am