ಬ್ರೇಕಿಂಗ್ ನ್ಯೂಸ್
08-11-20 01:22 pm Headline Karnataka News Network ಕರ್ನಾಟಕ
ರಾಮನಗರ, ನವೆಂಬರ್ 8: ಸದಾ ಓದು ಎನ್ನುವ ಪೋಷಕರ ಕಾಟ ತಪ್ಪಿಸಿಕೊಳ್ಳಲು ಹಾಗೂ ಹಣಕ್ಕಾಗಿ ಅಪಹರಣದ ನಾಟಕ ಮಾಡಿ ತನ್ನ ಹೆತ್ತವರನ್ನೇ ಬಾಲಕ ಬೇಸ್ತು ಬೀಳಿಸಿರುವ ಘಟನೆ ರಾಮನಗರ ಜಿಲ್ಲೆ ಕನಕಪುರದಲ್ಲಿ ನಡೆದಿದೆ.
ತಮಿಳುನಾಡು ಮೂಲದ ಬಟ್ಟೆ ಅಂಗಡಿ ಮಾಲೀಕ ಮನೋಹರ್ ಎಂಬುವವರ ಪುತ್ರ ಸರ್ವೇಶ್ (16) ಕಳೆದ ಶುಕ್ರವಾರ ಸೈಬರ್ ಸೆಂಟರ್ಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ. ರಾತ್ರಿಯಾದರೂ ಮನೆಗೆ ವಾಪಸ್ಸು ಬಾರದ ಕಾರಣ ಆತಂಕಗೊಂಡ ಪೋಷಕರು, ಮಗ ಕಾಣೆಯಾಗಿದ್ದಾನೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ನಡುವೆ ಬಾಲಕನ ಪಕ್ಕದ ಮನೆಯವರ ಮೊಬೈಲಿಗೆ ಹುಡುಗನನ್ನು ಶೌಚಾಲಯದಲ್ಲಿ ಕೈ-ಕಾಲು ಕಟ್ಟಿ ಹಾಕಿರೋ ಸ್ಥಿತಿಯಲ್ಲಿರುವ ಫೋಟೋವನ್ನು ರವಾನಿಸಿ, 5 ಲಕ್ಷ ರುಪಾಯಿಗೆ ಅಪಹರಣಕಾರರು ಬೇಡಿಕೆಯಿಟ್ಟಿದ್ದರು. ನಂತರ ಬಾಲಕನ ಫೋಟೋ ವೈರಲ್ ಆಗಿದ್ದರಿಂದ ಜನರು ಆತಂಕಕ್ಕೆ ಒಳಗಾಗಿದ್ದರು.
ಪ್ರಕರಣ ಬೆನ್ನತ್ತಿದ ಪೊಲೀಸರು, ಬಾಲಕನ್ನು ತಿರುಪತಿ ಬಳಿ ಲಾಡ್ಜ್ ನಲ್ಲಿ ಪತ್ತೆ ಹಚ್ಚಿದ್ದಾರೆ. ಪೋಷಕರನ್ನು ಬೆದರಿಸಲು ಬಾಲಕನೇ ಅಪಹರಣದ ನಾಟಕವಾಡಿದ್ದಾನೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಗಿರೀಶ್, ಬಾಲಕ ಪೋಷಕರಿಂದ ಹಣ ಕೀಳಲು ಹಾಗೂ ಓದು ಎಂದು ಒತ್ತಾಯ ಮಾಡುವುದರಿಂದ ತಪ್ಪಿಸಿಕೊಳ್ಳಲು ಸ್ವಯಂ ಅಪಹರಣದ ನಾಟಕ ಸೃಷ್ಟಿಸಿದ್ದಾನೆ ಎಂದು ತಿಳಿಸಿದ್ದಾರೆ. ಬಾಲಕನನ್ನು ತಿರುಪತಿಯಿಂದ ಕರೆತಂದು ಕನಕಪುರ ನಗರ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರೆದಿದೆ. ಇನ್ನು ಬಾಲಕನಿಗೆ ಅಪಹರಣ ಎಂದು ಬಿಂಬಿಸಲು ಯಾರೆಲ್ಲ ಸಹಾಯ ಮಾಡಿದ್ದಾರೆ ಎಂಬುದು ಪೊಲೀಸ್ ತನಿಖೆಯಿಂದ ಬಯಲಾಗಬೇಕಿದೆ.
A boy was allegedly involved in a drama of kidnapping for the sake of getting money from his parents. The incident took place in Kanakapura, Ramanagara district.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm