ಬ್ರೇಕಿಂಗ್ ನ್ಯೂಸ್
31-08-23 07:00 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 31: ಸುಸ್ತು ಮತ್ತು ತೀವ್ರ ಜ್ವರದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಕಂಡು ಬಂದಿದೆ. ಅವರನ್ನು ತೀವ್ರ ನಿಗಾ ಘಟಕದಿಂದ ಸ್ಪೆಷಲ್ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ. ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ಎಂದಿನಂತೆ ಪತ್ರಿಕೆ ಓದಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.
ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಕುಮಾರಸ್ವಾಮಿ ಅವರನ್ನು ಇಂದು ವಾರ್ಡ್ಗೆ ಶಿಫ್ಟ್ ಮಾಡಿದ್ದು, ಎರಡು ದಿನ ವಾರ್ಡ್ನಲ್ಲಿ ವೈದ್ಯರು ನಿಗಾ ವಹಿಸಲಿದ್ದಾರೆ. ಪ್ರಸ್ತುತ ಯಾರನ್ನೂ ಭೇಟಿ ಮಾಡದಂತೆ ವೈದ್ಯರು ಸೂಚನೆ ನೀಡಿದ್ದಾರೆ. ನಾಳೆ ಅಥವಾ ನಾಡಿದ್ದು ಅವರನ್ನು ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಆಸ್ಪತ್ರೆಗೆ ಭೇಟಿ ನೀಡಿ ಕುಮಾರಸ್ವಾಮಿಯವರ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಇನ್ನು ವಿದೇಶ ಪ್ರವಾಸದಲ್ಲಿದ್ದ ಹೆಚ್ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ವಾಪಸ್ ಆಗಿದ್ದು, ಆಸ್ಪತ್ರೆಗೆ ತೆರಳಿ ತಂದೆಯ ಆರೋಗ್ಯವನ್ನು ವಿಚಾರಿಸಿದ್ದಾರೆ. ಅದೇ ರೀತಿ ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಮತ್ತಿತರ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದ್ದಾರೆ.
Former chief minister H D Kumaraswamy has recovered and will be discharged from the hospital soon, his son Nikhil Kumaraswamy said Thursday. He was admitted to Apollo Hospital at Jayanagar, Bengaluru, during the early hours of Wednesday morning after he complained of weakness and discomfort.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm