ಬ್ರೇಕಿಂಗ್ ನ್ಯೂಸ್
02-09-23 10:37 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಅಲ್ ಖೈದಾ ಮತ್ತು ತೆಹ್ರೀಕ್ ಇ- ತಾಲಿಬಾನ್ ಉಗ್ರವಾದಿ ಸಂಘಟನೆಗೆ ಯುವಕರ ಸೇರ್ಪಡೆಗೆ ಸಂಚು ಹೂಡಿರುವ ಕುರಿತ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ಕರ್ನಾಟಕ, ತಮಿಳ್ನಾಡು, ಮಹಾರಾಷ್ಟ್ರ ಮತ್ತು ಗುಜರಾತ್ ನಲ್ಲಿ ಏಕಕಾಲದಲ್ಲಿ ದಾಳಿ ಕಾರ್ಯಾಚರಣೆ ನಡೆಸಿದ್ದಾರೆ.
ದೇಶಾದ್ಯಂತ ಉಗ್ರವಾದ ಚಟುವಟಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಯುವಕರನ್ನು ಬ್ರೇನ್ ವಾಶ್ ಮಾಡಿ ಸಂಘಟನೆಗೆ ಸೇರ್ಪಡೆ ಮಾಡಲು ಸಂಚು ಹೂಡಲಾಗಿದೆ. ಈ ಕುರಿತ ಮಾಹಿತಿ ಬೆನ್ನತ್ತಿ ನಾಲ್ಕು ರಾಜ್ಯಗಳಲ್ಲಿ ಎನ್ಐಎ ಅಧಿಕಾರಿಗಳು ದಾಳಿ ಸಂಘಟಿಸಿದ್ದರು. ಈ ವೇಳೆ, ಹಲವು ಮಾದರಿಯ ಡಿಜಿಟಲ್ ಸಾಕ್ಷ್ಯಗಳನ್ನು ವಶಕ್ಕೆ ಪಡೆಯಲಾಗಿದೆ. ಮಹಾರಾಷ್ಟ್ರದಲ್ಲಿ ಮೂರು ಕಡೆಗಳಲ್ಲಿ ಮತ್ತು ಇತರ ಮೂರು ರಾಜ್ಯಗಳಲ್ಲಿ ತಲಾ ಒಂದೊಂದು ಕಡೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಎನ್ಐಎ ಮಾಹಿತಿ ನೀಡಿದೆ.
ಎರಡು ಉಗ್ರವಾದಿ ಗುಂಪುಗಳಿಗೆ ಯುವಕರ ಸೇರ್ಪಡೆ, ವಿಧ್ವಂಸಕ ಕೃತ್ಯಕ್ಕೆ ಸಂಚು ಸೇರಿದಂತೆ ದೇಶದ ಆಂತರಿಕ ಭದ್ರತೆಗೆ ಸವಾಲೊಡ್ಡುವ ರೀತಿಯ ವರ್ತನೆಯನ್ನು ದಾಳಿ ಸಂದರ್ಭದಲ್ಲಿ ಪತ್ತೆ ಹಚ್ಚಲಾಗಿದೆ. ದಾಳಿ ವೇಳೆ ಸಿಕ್ಕಿರುವ ಡಿಜಿಟಲ್ ಸಾಕ್ಷ್ಯಗಳನ್ನು ಕೇಂದ್ರದ ಏಂಟಿ ಟೆರರಿಸ್ಟ್ ಏಜನ್ಸಿಯು ಪರೀಕ್ಷೆಗೆ ಒಳಪಡಿಸಲಿದೆ. ಕಳೆದ ಎಪ್ರಿಲ್ ತಿಂಗಳಲ್ಲಿ ಈ ಎರಡು ಉಗ್ರವಾದಿ ಸಂಘಟನೆಗಳಿಗೆ ಇಬ್ಬರು ಯುವಕರು ಸೇರ್ಪಡೆ ಆಗಿರುವ ಬಗ್ಗೆ ಎನ್ಐಎ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿತ್ತು. ಇದೇ ಪ್ರಕರಣದಲ್ಲಿ ಅಧಿಕಾರಿಗಳು ದಾಳಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಆ ವ್ಯಕ್ತಿಗಳಿಬ್ಬರು ಅಫ್ಘಾನಿಸ್ತಾನದಲ್ಲಿ ಜಮೀನು ಖರೀದಿಸಲು ಹಣ ಹೂಡಿಕೆ ಮಾಡಿರುವುದು ಮತ್ತು ಸ್ಥಳೀಯ ಯುವಕರನ್ನು ಬ್ರೇನ್ ವಾಶ್ ಮಾಡಿ ಉಗ್ರವಾದಿ ಸಂಘಟನೆಗಳಿಗೆ ಸೇರುವಂತೆ ಪ್ರೇರಣೆ ನೀಡುತ್ತಿದ್ದುದನ್ನು ಪತ್ತೆಹಚ್ಚಲಾಗಿತ್ತು.
Special police probe in Rameshwaram and Bangalore after NIA raid on terror module.The Tamil Nadu ‘Q’ branch police is probing the accomplices, friends and relatives of a Rameswaram-based youth whose premises was raided by the National Investigating Agency (NIA) on Friday in a suspected terror module case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am