ಬ್ರೇಕಿಂಗ್ ನ್ಯೂಸ್
08-09-23 05:43 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.8: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿ ಪಕ್ಕಾ ಆಗಿದೆ. ಗೃಹ ಸಚಿವ ಅಮಿತ್ ಶಾ ಮೈತ್ರಿಗೆ ಒಪ್ಪಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಹೇಳಿಕೆ ನೀಡಿದ ಬಿಎಸ್ ವೈ, ಬಿಜೆಪಿ- ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಮುಂಬರುವ ಲೋಕಸಭೆ ಚುನಾವಣೆಗೆ ಸಹಕಾರಿಯಾಗಲಿದೆ. ಅಮಿತ್ ಶಾ ಅವರು 4 ಸ್ಥಾನಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಒಪ್ಪಿದ್ದಾರೆ. ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡರೆ ಬಿಜೆಪಿ ಪಕ್ಷಕ್ಕೆ ಹೆಚ್ಚು ಶಕ್ತಿ ಬರಲಿದೆ ಎಂದಿದ್ದಾರೆ.

ರಾಜ್ಯದಲ್ಲಿ 4 ಲೋಕಸಭಾ ಸ್ಥಾನಗಳಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಈಗಾಗಲೇ ವರಿಷ್ಠರು ನಮಗೆ ದೆಹಲಿಯಿಂದ ಸೂಚನೆ ನೀಡಿದ್ದಾರೆ. ಉಭಯ ಪಕ್ಷಗಳ ವರಿಷ್ಠರ ಮಧ್ಯೆ ಮಾತುಕತೆ ನಡೆದಿದೆ ಎಂದಿದ್ದಾರೆ.
ಮೈತ್ರಿ ಬಹಳ ಮುಖ್ಯ
ರಾಜ್ಯದಲ್ಲಿ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಬಲವಾಗಿ ಹೋರಾಡಲು ವಿಪಕ್ಷಗಳು ಮೈತ್ರಿ ಮಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ. ನಾವು ಒಗ್ಗಟ್ಟಾಗಿ ಸರ್ಕಾರ ವಿರುದ್ಧ ಹೋರಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ 20 ಸ್ಥಾನಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಗೆ ಮುಂದಿನ ಚುನಾವಣೆಯಲ್ಲಿ ಮಾಸ್ಟರ್ ಸ್ಟ್ರೋಕ್ ಕೊಡಲು ನಿರ್ಧರಿಸಿರುವ ಜೆಡಿಎಸ್ ವರಿಷ್ಠ ದೇವೇಗೌಡರು ಈಗಾಗಲೇ ದೆಹಲಿಯಲ್ಲಿ ಬಿಜೆಪಿ ವರಿಷ್ಠ ನಾಯಕರನ್ನು ಭೇಟಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗೆ ಪ್ರಜ್ವಲ್ ರೇವಣ್ಣ ಅವರ ಕೋರ್ಟ್ ಕೇಸ್ ಸಂಬಂಧಿಸಿ ವಕೀಲರ ಭೇಟಿಗೆ ದೆಹಲಿಗೆ ತೆರಳಿದ್ದ ದೇವೇಗೌಡರು ಇದೇ ವೇಳೆ ರಹಸ್ಯವಾಗಿ ಅಮಿತ್ ಶಾ ಜೊತೆ ಚರ್ಚೆ ನಡೆಸಿದ್ದಾರೆ. ಉಭಯ ನಾಯಕರ ನಡುವೆ ಮೈತ್ರಿ ಬಗ್ಗೆ ಅನೌಪಚಾರಿಕವಾಗಿ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.
In what comes as official confirmation after months of discussions and hints, former Karnataka chief minister BS Yediyurappa made a crucial announcement regarding the 2024 Lok Sabha elections on Friday, 8 September. The Lingayat strongman said the BJP was forming an alliance with the JD(S) in Karnataka.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm